ಕ್ರೀಡೆ

ವಿಶ್ವಕಪ್ 2025 | ಶಫಾಲಿ ಅರ್ಧಶತಕ ; ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂಬೈ : ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಅದರಂತೆ ಆರಂಭಿಕರಾದ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ.

ಇವರಿಬ್ಬರು ಮೊದಲ ವಿಕೆಟ್​ಗೆ 104 ರನ್​ಗಳ ಜೊತೆಯಾಟ ನಡೆಸಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಆದಾಗ್ಯೂ ಅರ್ಧಶತಕದಂಚಿನಲ್ಲಿ ಎಡವಿದ ಸ್ಮೃತಿ ಮಂಧಾನ 45 ರನ್ ಬಾರಿಸಿ ಔಟಾದರೆ, ಶಫಾಲಿ ವರ್ಮಾ ಅರ್ಧಶತಕ ಬಾರಿಸಿ ಮುನ್ನಡೆಯುತ್ತಿದ್ದಾರೆ.

ಇದನ್ನು ಓದಿ: ಟಿ.20 ಕ್ರಿಕೆಟ್‌ಗೆ ಕೇನ್‌ ವಿಲಿಯಮ್ಸನ್‌ ವಿದಾಯ

49 ಎಸೆತಗಳಲ್ಲಿ ಅರ್ಧಶತಕ
ಪ್ರತೀಕಾ ರಾವಲ್ ಅವರ ಇಂಜುರಿಯಿಂದಾಗಿ ಭಾರತ ವಿಶ್ವಕಪ್ ತಂಡದಲ್ಲಿ ಆಡುವ ಅವಕಾಶ ಪಡೆದಿರುವ ಶಫಾಲಿ, ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಕೇವಲ ಒಂದಂಕಿಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಫಾರ್ಮ್​ ಕಂಡುಕೊಂಡಿರುವ ಶಫಾಲಿ 49 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಮೂರು ವರ್ಷಗಳ ನಂತರ ಏಕದಿನ ಕ್ರಿಕೆಟ್‌ನಲ್ಲಿ ಶೆಫಾಲಿ 50 ರನ್‌ಗಳ ಗಡಿ ದಾಟಿರುವುದು ಇನ್ನಷ್ಟು ವಿಶೇಷವಾಗಿದೆ

ಆಂದೋಲನ ಡೆಸ್ಕ್

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

2 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

3 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

8 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

10 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

11 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

12 hours ago