ಚೆನ್ನೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಭಾರತ ತಂಡವು ಪಂದ್ಯಕ್ಕೂ ಮುನ್ನವೇ ಆಘಾತ ಅನುಭವಿಸಿದ್ದು, ಉತ್ತಮ ಲಯದಲ್ಲಿದ್ದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಡೆಂಗ್ಯೂ ಜ್ವರಕ್ಕೆ ತುತ್ತಾಗಿರುವುದರಿಂದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಇಶಾನ್ ಕಿಶನ್ ಆರಂಭಿಕ ಬ್ಯಾಟರ್ ಆಗಿ ಕ್ರೀಸ್ ಗೆ ಇಳಿಯಲಿದ್ದಾರೆ.
ಟಾಸ್ ಗೆದ್ದ ನಂತರ ಮಾತನಾಡಿದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್, “ಪಿಚ್ ಉತ್ತಮವಾಗಿರುವುದರಿಂದ ನಾವು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದೇವೆ. ಸೂರ್ಯ ಹೊರಗೆ ಬಂದಿರುವುದರಿಂದ ನಮಗೆ ಬ್ಯಾಟಿಂಗ್ ಮಾಡಲು ಉತ್ತಮ ಅವಕಾಶ ಒದಗಿದೆ. ನಾವು ಕಳೆದ ಕೆಲವು ತಿಂಗಳಿಂದ ಸಾಕಷ್ಟು ಆಡಿದ್ದೇವೆ. ಈ ಪಂದ್ಯಕ್ಕೆ ಟ್ರಾವಿಸ್ ಹೆಡ್ ಲಭ್ಯರಿಲ್ಲ. ಅಬಾಟ್ ಹಾಗೂ ಜೋಶ್ ಆಡುತ್ತಿಲ್ಲ” ಎಂದು ತಿಳಿಸಿದ್ದಾರೆ.
“ಇಲ್ಲಿನ ಪಿಚ್ ಬೌಲರ್ ಗಳ ಪಾಲಿಗೆ ಕೊಂಚ ನಿಧಾನ ಗತಿಯಂದಂತೆ ಕಾಣಿಸುತ್ತಿದೆ. ನಾವು ಆರಂಭದಲ್ಲೇ ಬೌಲಿಂಗ್ ಅನ್ನು ನಿಖರವಾಗಿ ಮಾಡಬೇಕಿದೆ. ಶುಭಮನ್ ಗಿಲ್ ಇನ್ನೂ ಚೇತರಿಸಿಕೊಳ್ಳದೆ ಇರುವುದರಿಂದ ಅವರ ಬದಲಿಗೆ ಇಶಾನ್ ಕಿಶನ್ ಆಡಲಿದ್ದಾರೆ. ಅವರು ಬ್ಯಾಟಿಂಗ್ ಆರಂಭಿಸಲಿದ್ದಾರೆ” ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…