ಚೆನ್ನೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಭಾರತ ತಂಡವು ಪಂದ್ಯಕ್ಕೂ ಮುನ್ನವೇ ಆಘಾತ ಅನುಭವಿಸಿದ್ದು, ಉತ್ತಮ ಲಯದಲ್ಲಿದ್ದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಡೆಂಗ್ಯೂ ಜ್ವರಕ್ಕೆ ತುತ್ತಾಗಿರುವುದರಿಂದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಇಶಾನ್ ಕಿಶನ್ ಆರಂಭಿಕ ಬ್ಯಾಟರ್ ಆಗಿ ಕ್ರೀಸ್ ಗೆ ಇಳಿಯಲಿದ್ದಾರೆ.
ಟಾಸ್ ಗೆದ್ದ ನಂತರ ಮಾತನಾಡಿದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್, “ಪಿಚ್ ಉತ್ತಮವಾಗಿರುವುದರಿಂದ ನಾವು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದೇವೆ. ಸೂರ್ಯ ಹೊರಗೆ ಬಂದಿರುವುದರಿಂದ ನಮಗೆ ಬ್ಯಾಟಿಂಗ್ ಮಾಡಲು ಉತ್ತಮ ಅವಕಾಶ ಒದಗಿದೆ. ನಾವು ಕಳೆದ ಕೆಲವು ತಿಂಗಳಿಂದ ಸಾಕಷ್ಟು ಆಡಿದ್ದೇವೆ. ಈ ಪಂದ್ಯಕ್ಕೆ ಟ್ರಾವಿಸ್ ಹೆಡ್ ಲಭ್ಯರಿಲ್ಲ. ಅಬಾಟ್ ಹಾಗೂ ಜೋಶ್ ಆಡುತ್ತಿಲ್ಲ” ಎಂದು ತಿಳಿಸಿದ್ದಾರೆ.
“ಇಲ್ಲಿನ ಪಿಚ್ ಬೌಲರ್ ಗಳ ಪಾಲಿಗೆ ಕೊಂಚ ನಿಧಾನ ಗತಿಯಂದಂತೆ ಕಾಣಿಸುತ್ತಿದೆ. ನಾವು ಆರಂಭದಲ್ಲೇ ಬೌಲಿಂಗ್ ಅನ್ನು ನಿಖರವಾಗಿ ಮಾಡಬೇಕಿದೆ. ಶುಭಮನ್ ಗಿಲ್ ಇನ್ನೂ ಚೇತರಿಸಿಕೊಳ್ಳದೆ ಇರುವುದರಿಂದ ಅವರ ಬದಲಿಗೆ ಇಶಾನ್ ಕಿಶನ್ ಆಡಲಿದ್ದಾರೆ. ಅವರು ಬ್ಯಾಟಿಂಗ್ ಆರಂಭಿಸಲಿದ್ದಾರೆ” ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…