ಚೆನ್ನೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಭಾರತ ತಂಡವು ಪಂದ್ಯಕ್ಕೂ ಮುನ್ನವೇ ಆಘಾತ ಅನುಭವಿಸಿದ್ದು, ಉತ್ತಮ ಲಯದಲ್ಲಿದ್ದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಡೆಂಗ್ಯೂ ಜ್ವರಕ್ಕೆ ತುತ್ತಾಗಿರುವುದರಿಂದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಇಶಾನ್ ಕಿಶನ್ ಆರಂಭಿಕ ಬ್ಯಾಟರ್ ಆಗಿ ಕ್ರೀಸ್ ಗೆ ಇಳಿಯಲಿದ್ದಾರೆ.
ಟಾಸ್ ಗೆದ್ದ ನಂತರ ಮಾತನಾಡಿದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್, “ಪಿಚ್ ಉತ್ತಮವಾಗಿರುವುದರಿಂದ ನಾವು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದೇವೆ. ಸೂರ್ಯ ಹೊರಗೆ ಬಂದಿರುವುದರಿಂದ ನಮಗೆ ಬ್ಯಾಟಿಂಗ್ ಮಾಡಲು ಉತ್ತಮ ಅವಕಾಶ ಒದಗಿದೆ. ನಾವು ಕಳೆದ ಕೆಲವು ತಿಂಗಳಿಂದ ಸಾಕಷ್ಟು ಆಡಿದ್ದೇವೆ. ಈ ಪಂದ್ಯಕ್ಕೆ ಟ್ರಾವಿಸ್ ಹೆಡ್ ಲಭ್ಯರಿಲ್ಲ. ಅಬಾಟ್ ಹಾಗೂ ಜೋಶ್ ಆಡುತ್ತಿಲ್ಲ” ಎಂದು ತಿಳಿಸಿದ್ದಾರೆ.
“ಇಲ್ಲಿನ ಪಿಚ್ ಬೌಲರ್ ಗಳ ಪಾಲಿಗೆ ಕೊಂಚ ನಿಧಾನ ಗತಿಯಂದಂತೆ ಕಾಣಿಸುತ್ತಿದೆ. ನಾವು ಆರಂಭದಲ್ಲೇ ಬೌಲಿಂಗ್ ಅನ್ನು ನಿಖರವಾಗಿ ಮಾಡಬೇಕಿದೆ. ಶುಭಮನ್ ಗಿಲ್ ಇನ್ನೂ ಚೇತರಿಸಿಕೊಳ್ಳದೆ ಇರುವುದರಿಂದ ಅವರ ಬದಲಿಗೆ ಇಶಾನ್ ಕಿಶನ್ ಆಡಲಿದ್ದಾರೆ. ಅವರು ಬ್ಯಾಟಿಂಗ್ ಆರಂಭಿಸಲಿದ್ದಾರೆ” ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…