ಕ್ರೀಡೆ

ವಿಶ್ವಕಪ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯ

ಚೆನ್ನೈ: ಏಕದಿನ ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಭಾರತ ತಂಡವು ಪಂದ್ಯಕ್ಕೂ ಮುನ್ನವೇ ಆಘಾತ ಅನುಭವಿಸಿದ್ದು, ಉತ್ತಮ ಲಯದಲ್ಲಿದ್ದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಡೆಂಗ್ಯೂ ಜ್ವರಕ್ಕೆ ತುತ್ತಾಗಿರುವುದರಿಂದ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಅವರ ಬದಲಿಗೆ ಇಶಾನ್ ಕಿಶನ್ ಆರಂಭಿಕ ಬ್ಯಾಟರ್ ಆಗಿ ಕ್ರೀಸ್ ಗೆ ಇಳಿಯಲಿದ್ದಾರೆ.

ಟಾಸ್ ಗೆದ್ದ ನಂತರ ಮಾತನಾಡಿದ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್, “ಪಿಚ್ ಉತ್ತಮವಾಗಿರುವುದರಿಂದ ನಾವು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದೇವೆ. ಸೂರ್ಯ ಹೊರಗೆ ಬಂದಿರುವುದರಿಂದ ನಮಗೆ ಬ್ಯಾಟಿಂಗ್ ಮಾಡಲು ಉತ್ತಮ ಅವಕಾಶ ಒದಗಿದೆ. ನಾವು ಕಳೆದ ಕೆಲವು ತಿಂಗಳಿಂದ ಸಾಕಷ್ಟು ಆಡಿದ್ದೇವೆ. ಈ ಪಂದ್ಯಕ್ಕೆ ಟ್ರಾವಿಸ್ ಹೆಡ್ ಲಭ್ಯರಿಲ್ಲ. ಅಬಾಟ್ ಹಾಗೂ ಜೋಶ್ ಆಡುತ್ತಿಲ್ಲ” ಎಂದು ತಿಳಿಸಿದ್ದಾರೆ.

“ಇಲ್ಲಿನ ಪಿಚ್ ಬೌಲರ್ ಗಳ ಪಾಲಿಗೆ ಕೊಂಚ ನಿಧಾನ ಗತಿಯಂದಂತೆ ಕಾಣಿಸುತ್ತಿದೆ. ನಾವು ಆರಂಭದಲ್ಲೇ ಬೌಲಿಂಗ್ ಅನ್ನು ನಿಖರವಾಗಿ ಮಾಡಬೇಕಿದೆ. ಶುಭಮನ್ ಗಿಲ್ ಇನ್ನೂ ಚೇತರಿಸಿಕೊಳ್ಳದೆ ಇರುವುದರಿಂದ ಅವರ ಬದಲಿಗೆ ಇಶಾನ್ ಕಿಶನ್ ಆಡಲಿದ್ದಾರೆ. ಅವರು ಬ್ಯಾಟಿಂಗ್ ಆರಂಭಿಸಲಿದ್ದಾರೆ” ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

andolanait

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

1 hour ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

7 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

7 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

12 hours ago