ಕ್ರೀಡೆ

ವಿಶ್ವಕಪ್ ಫೈನಲ್‌ ಸೋಲು ಕಾಡುತ್ತಿದೆ: ಸೂರ್ಯಕುಮಾರ್ ಯಾದವ್

ಬೆಂಗಳೂರು : ಇಂದಿನಿಂದ ಭಾರತ ಮತ್ತು ಸೌಥ್‌ ಆಫ್ರಿಕಾ ನಡುವಿನ ಮೊದಲ ಟಿ೨೦ ಪಂದ್ಯ ಇಂದು ಸಂಜೆ ೭.೩೦ ( ಭಾರತೀಯ ಕಾಲಮಾನ) ಆರಂಭವಾಗಲಿದೆ. ವಿಶ್ವಕಪ್‌ ನಂತರ ಭಾರತ ತಂಡ ಮೊದಲ ಬಾರಿಗೆ ಪ್ರವಾಸ ಕೈಗೊಂಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ೩ ಏಕದಿನ, ೩ ಓಡಿಐ ಮತ್ತು ೨ ಟಸ್ಟ್‌ ಪಂದ್ಯಗಳಲ್ಲಿ ಕಾದಾಡಲಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ೨೦೨೩ರ ಏಕದಿನ ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ೬ ವಿಕೆಟ್‌ಗಳ ಸೋಲು ಕಂಡು ಟ್ರೋಫಿ ಗೆಲ್ಲುವ ಅವಕಾಶ ಕಳೆದುಕೊಂಡಿತ್ತು. ವಿಶ್ವಕಪ್‌ ನಂತರ ಆಸ್ಟ್ರೇಲಿಯಾ ವಿರುದ್ಧ ಮೊಲದ ಟಿ೨೦ ಸರಣಿಯ ಆಡಿ ಅದರಲ್ಲಿ ೪-೧ ಅಂತರದಿಂದ ಗೆದ್ದ ಬೀಗಿದ್ದ ಭಾರತ ತಂಡಕ್ಕೆ ದ. ಆಫ್ರಿಕಾ ತಂಡ ಸವಾಲೋಡ್ಡಲಿದೆ.

ಇಂದಿನಿಂದ ದ. ಆಫ್ರಿಕಾ ವಿರುದ್ಧ ಆರಂಭವಾಗುವ ಸರಣಿಗೂ ಮುನ್ನಾ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಂಗಾಮಿ ಟಿ೨೦ ನಾಯಕ ಸೂರ್ಯಕುಮಾರ ಯಾದವ್‌, ಆಸೀಸ್‌ ವಿರುದ್ಧದ ಸರಣಿ ಗೆಲುವು ಸೌಥ್‌ ಆಫ್ರಿಕಾ ವಿರುದ್ಧ ಭಯಮುಕ್ತ ಆಟವಾಡಲು ಸಹಕರಿಸಲಿದೆ ಮತತು ಆತ್ಮಸ್ಥೈರ್ಯ ಹೆಚ್ಚಾಗಿದೆ. ಆದರೆ ವಿಶ್ವಕಪ್‌ ಸೋಲು ನನ್ನನ್ನು ಸದಾ ಕಾಡುತ್ತಿದೆ ಎಂದು ಸೂರ್ಯ ಹೇಳಿದ್ದಾರೆ.

ಆಸೀಸ್‌ ವಿರುದ್ಧದ ವಿಶ್ವಕಪ್ ಸೋಲು ನಿರಾಶಾದಾಯಕವಾಗಿದ್ದು, ಇದನ್ನು ನಾವು ಮರೆಯುವುದು ತುಂಬಾ ಕಷ್ಟ. ಆದರೆ ವಿಶ್ವಕಪ್‌ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲುವು ಆಟಗಾರರಲ್ಲಿ ಧೈರ್ಯ ತುಂಬಿದೆ. ಕಾಂಗರೂ ವಿರುದ್ಧ ನಾವು ಭಯಮುಕ್ತ ಆಟ ಆಡಿದ್ದೆವು. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಇದೇ ಆಟ ಮುಂದುವರೆಸುತ್ತೇವೆ ಎಂದರು.

6ನೇ ಬೌಲರ್ ಬಗ್ಗೆ ಚಿಂತನೆ ನಡೆಸಿದ್ದೇವೆ : ನಾವು ಈಗಾಗಲೇ ತಂಡದ ಪರ 6ನೇ ಬೌಲರ್ ಜವಾಬ್ದಾರಿ ಯಾರಿಗೆ ನೀಡಬೇಕೆಂದು ಯೋಚಿಸಿದ್ದೇವೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ವೇಳೆ ಬಿಸಿಸಿಐ ಸೆಲೆಕ್ಟರ್‌ಗಳು ಯಂಗ್ ಪ್ಲೇಯರ್‌ಗಳ ಮೇಲೆ ನಂಬಿಕೆ ಇಟ್ಟಿದ್ದರು. ಅದಕ್ಕೆ ತಕ್ಕಂತೆ ಉತ್ತಮ ಫಲಿತಾಂಶ ಬಂದಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲೂ ಇದೇ ಸಂಸ್ಕೃತಿ ಮುಂದುವರಿಯುತ್ತಾ ಎಂಬುದನ್ನು ನೋಡಬೇಕು. ಹಾಗೆಯೇ ನಮ್ಮಲ್ಲಿ 6ನೇ ಬೌಲರ್‌ಗಾಗಿ ಸಾಕಷ್ಟು ಆಯ್ಕೆಗಳಿವೆ. ತಂಡವು ಉತ್ತಮ ಆಟಗಾರರ ಸಂಯೋಜನೆಯನ್ನು ಹೊಂದಿದ್ದು, ನಾಯಕನಾಗಿ ತಂಡವನ್ನು ಮುನ್ನಡೆಸಲು ಸಂತೋಷವಾಗುತ್ತಿದೆ,” ಎಂದು ಸೂರ್ಯಕುಮಾರ್ ಯಾದವ್ ಸಂತಸ ವ್ಯಕ್ತಪಡಿಸಿದ್ದಾರೆ.

ಯುವ ಆಟಗಾರರಿಗೆ ಸೂರ್ಯ ನೀಡಿದ ಸಲಹೆ ಏನು? : ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 3 ಪಂದ್ಯಗಳ ಟಿ20 ಸರಣಿಯಲ್ಲಿ ಯುವ ಆಟಗಾರರಾದ ರಿಂಕು ಸಿಂಗ್ ಹಾಗೂ ಜಿತೇಶ್ ಶರ್ಮಾ ಅವರಿಗೆ ತಮ್ಮ ರಾಜ್ಯ ಹಾಗೂ ಐಪಿಎಲ್ ಟೂರ್ನಿಯಲ್ಲಿ ನೀಡುವ ಪ್ರದರ್ಶನವನ್ನೇ ಮುಂದುವರಿಸುವಂತೆ ಸಲಹೆ ನೀಡಿದ್ದೆವು. ತಮ್ಮ ರಾಜ್ಯ ಹಾಗೂ ಐಪಿಎಲ್ ಟೂರ್ನಿಯಲ್ಲಿ ಆಡುತ್ತಿದ್ದಾರೆ. ರಾಷ್ಟ್ರೀಯ ತಂಡದಲ್ಲೂ ಅವರು ಈಗ ಸ್ಥಾನ ಪಡೆದುಕೊಂಡಿದ್ದಾರೆ. ಸ್ಥಳೀಯ ಹಾಗೂ ಐಪಿಎಲ್ ಟೂರ್ನಿಯ ತಂಡಗಳಲ್ಲಿ ನೀಡುವ ಪ್ರದರ್ಶನವನ್ನೇ ರಾಷ್ಟ್ರೀಯ ತಂಡದಲ್ಲೂ ಪ್ರದರ್ಶಿಸಿ ಅದಕ್ಕಿಂತ ಹೆಚ್ಚಿನದನ್ನು ಮಾಡಬೇಡಿ ಎಂದು ಸಲಹೆ ನೀಡಿದ್ದೆವು,” ಎಂದು ಸೂರ್ಯಕುಮಾರ್‌ ಯಾದವ್‌ ಹೇಳಿದ್ದಾರೆ.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

16 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

17 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago