ಕ್ರೀಡೆ

ವಿಶ್ವಕಪ್ ಫೈನಲ್: ಏರ್ ಶೋ ಮೂಲಕ ಪಂದ್ಯ ಆರಂಭ

ಅಹ್ಮದಾಬಾದ್‌ : ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಫೈನಲ್ ಪಂದ್ಯದ ವೇಳೆ ಹಲವು ಮನರಂಜನಾ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ( ಬಿಸಿಸಿಐ ) ತನ್ನ ಅಕೃತ ಟ್ವೀಟರ್ ಖಾತೆಯಲ್ಲಿ ಪ್ರಕಟಿಸಿದೆ.

ಕಾರ್ಯಕ್ರಮದ ಸಮಯವನ್ನು ನಿಗದಿಪಡಿಸಿದ್ದು, ಪಂದ್ಯಕ್ಕೂ ಮೊದಲು ಟಾಸ್, ಬಳಿಕ ಅಂದರೆ 1.35ರಿಂದ 1.50ರವರೆಗೆ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಲಿದೆ. ನರೇಂದ್ರಮೋದಿ ಸ್ಟೇಡಿಯಂನಲ್ಲಿ ಲೋಹದ ಹಕ್ಕಿಗಳು ಹಾರಾಟ ನಡೆಸಲಿವೆ.

ಮೊದಲು ಇನ್ನಿಂಗ್‍ನ ಡ್ರಿಂಕ್ಸ್ ಬ್ರೇಕ್ ವೇಳೆ ಆದಿತ್ಯ ಗ್ವ ಅವರು ಪ್ರದರ್ಶನ ನೀಡಲಿದ್ದಾರೆ. ಮೊದಲು ಇನ್ನಿಂಗ್ ಮುಗಿದ ಬಳಿಕ ಸಿಗುವ ಸಮಯದಲ್ಲಿ ಪ್ರೀತಮ್ ಚಕ್ರವರ್ತಿ, ಜೋನಿತಾ ಗಾಂ, ನಕಾಶ್ ಅಜೀಜ್, ಅಮಿತ್ ಮಿಶ್ರಾ, ಅಕಾಸ ಸಿಂಗ್ ಮತ್ತು ತುಷಾರ್ ಜೋಶಿ ಪ್ರದರ್ಶನಗಳು ನಡೆಯಲಿವೆ.

ಎರಡನೇ ಇನ್ನಿಂಗ್ಸ್ ನ ಡ್ರಿಂಕ್ಸ್ ಬ್ರೇಕ್ ವೇಳೆ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ. ಖ್ಯಾತ ಗಾಯಕಿ ದುವಾ ಲಿಪಾ ಪ್ರದರ್ಶನ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು, ಆದರೆ ಬಿಸಿಸಿಐ ಇಂದು ಬಿಡುಗಡೆ ಮಾಡಿ ಪಟ್ಟಿಯಲ್ಲಿ ದುವಾ ಲಿಪಾ ಹೆಸರಿಲ್ಲ.

ಈಗಾಗಲೇ ಇದ್ದಕ್ಕೆ ಬೇಕಾದ ಪೂರ್ವ ಸಿದ್ಧತಾ ತಯಾರಿಯನ್ನು ಸೂರ್ಯಕಿರಣ್ ತಂಡ ನಡೆಸಿದೆ. ಕಳೆದ 2 ದಿನಗಳಿಂದ ಇಲ್ಲಿ ಪ್ರಾಯೋಗಿಕ ಹಾರಾಟ ನಡೆಸಿ ಸರ್ವ ಸನ್ನದ್ಧವಾಗಿ ನಿಂತಿದೆ. ಈ ಬಾರಿಯ ಎಲ್ಲ ಲೀಗ್ ಪಂದ್ಯದ ವೇಳೆಯೂ ಬಿಸಿಸಿಐ ಸ್ಟೇಡಿಯಂಗಳಲ್ಲಿ ವಿನೂತನ ಶೈಲಿಯ ಲಸರ್ ಶೋಗಳ ಮೂಲಕ ನೆರದಿದ್ದ ಪ್ರೇಕ್ಷಕರನ್ನು ರಂಜಿಸಿತ್ತು. ಇದೀಗ ಫೈನಲ್ ಪಂದ್ಯದಲ್ಲೂ ವಿಶಿಷ್ಠ ಶೈಲಿಯ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ. ಇದು ಎರಡನೇ ಇನ್ನಿಂಗ್ಸ್ನ ಡ್ರಿಂಕ್ಸ್ ಬ್ರೇಕ್ ವೇಳೆ ಪ್ರದರ್ಶನಗೊಳ್ಳಲಿದೆ ಎಂದು ಬಿಸಿಸಿಐ ತನ್ನ ಅಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಕೂಟದ ಉದ್ಘಾಟನ ಸಮಾರಂಭ ಮಾಡದೇ ಇದ್ದ ಬಿಸಿಸಿಐ ವಿರುದ್ಧ ಹಲವು ಟೀಕೆಗಳು ಕೇಳಿಬಂದಿತ್ತು. ಮೊದಲ ಬಾರಿಗೆ ಸಂಪೂರ್ಣವಾಗಿ ಕೂಟದ ಆತಿಥ್ಯ ಸಿಕ್ಕರೂ, ಅತ್ಯಂತ ಶ್ರೀೀಮಂತ ಕ್ರಿಕೆಟ್ ಮಂಡಳಿ ಎನಿಸಿಕೊಂಡಿದ್ದರೂ ಬಿಸಿಸಿಐಗೆ ಉದ್ಘಾಟನ ಕಾರ್ಯಕ್ರಮ ನಡೆಸಲಾಗದಷ್ಟು ಕಷ್ಟ ಎದುರಾಯಿತೇ ಎಂಬ ಟಾಕ್ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದು ಮಾಡಿತ್ತು.

ಇದೀಗ ಸಮಾರೋಪ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಬಿಸಿಸಿಐ ಸಕಲ ಸಿದ್ಧತೆ ಪೂರ್ಣಗೊಳಿಸಿದ್ದು ಸಮಾರೋಪ ಕಾರ್ಯಕ್ರಮದ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

andolanait

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

4 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

4 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago