ಕ್ರೀಡೆ

ವಿಶ್ವಕಪ್ ಫೈನಲ್: ಏರ್ ಶೋ ಮೂಲಕ ಪಂದ್ಯ ಆರಂಭ

ಅಹ್ಮದಾಬಾದ್‌ : ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಫೈನಲ್ ಪಂದ್ಯದ ವೇಳೆ ಹಲವು ಮನರಂಜನಾ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈ ಸಂಬಂಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ( ಬಿಸಿಸಿಐ ) ತನ್ನ ಅಕೃತ ಟ್ವೀಟರ್ ಖಾತೆಯಲ್ಲಿ ಪ್ರಕಟಿಸಿದೆ.

ಕಾರ್ಯಕ್ರಮದ ಸಮಯವನ್ನು ನಿಗದಿಪಡಿಸಿದ್ದು, ಪಂದ್ಯಕ್ಕೂ ಮೊದಲು ಟಾಸ್, ಬಳಿಕ ಅಂದರೆ 1.35ರಿಂದ 1.50ರವರೆಗೆ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಲಿದೆ. ನರೇಂದ್ರಮೋದಿ ಸ್ಟೇಡಿಯಂನಲ್ಲಿ ಲೋಹದ ಹಕ್ಕಿಗಳು ಹಾರಾಟ ನಡೆಸಲಿವೆ.

ಮೊದಲು ಇನ್ನಿಂಗ್‍ನ ಡ್ರಿಂಕ್ಸ್ ಬ್ರೇಕ್ ವೇಳೆ ಆದಿತ್ಯ ಗ್ವ ಅವರು ಪ್ರದರ್ಶನ ನೀಡಲಿದ್ದಾರೆ. ಮೊದಲು ಇನ್ನಿಂಗ್ ಮುಗಿದ ಬಳಿಕ ಸಿಗುವ ಸಮಯದಲ್ಲಿ ಪ್ರೀತಮ್ ಚಕ್ರವರ್ತಿ, ಜೋನಿತಾ ಗಾಂ, ನಕಾಶ್ ಅಜೀಜ್, ಅಮಿತ್ ಮಿಶ್ರಾ, ಅಕಾಸ ಸಿಂಗ್ ಮತ್ತು ತುಷಾರ್ ಜೋಶಿ ಪ್ರದರ್ಶನಗಳು ನಡೆಯಲಿವೆ.

ಎರಡನೇ ಇನ್ನಿಂಗ್ಸ್ ನ ಡ್ರಿಂಕ್ಸ್ ಬ್ರೇಕ್ ವೇಳೆ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ. ಖ್ಯಾತ ಗಾಯಕಿ ದುವಾ ಲಿಪಾ ಪ್ರದರ್ಶನ ನೀಡಲಿದ್ದಾರೆ ಎಂದು ಸುದ್ದಿಯಾಗಿತ್ತು, ಆದರೆ ಬಿಸಿಸಿಐ ಇಂದು ಬಿಡುಗಡೆ ಮಾಡಿ ಪಟ್ಟಿಯಲ್ಲಿ ದುವಾ ಲಿಪಾ ಹೆಸರಿಲ್ಲ.

ಈಗಾಗಲೇ ಇದ್ದಕ್ಕೆ ಬೇಕಾದ ಪೂರ್ವ ಸಿದ್ಧತಾ ತಯಾರಿಯನ್ನು ಸೂರ್ಯಕಿರಣ್ ತಂಡ ನಡೆಸಿದೆ. ಕಳೆದ 2 ದಿನಗಳಿಂದ ಇಲ್ಲಿ ಪ್ರಾಯೋಗಿಕ ಹಾರಾಟ ನಡೆಸಿ ಸರ್ವ ಸನ್ನದ್ಧವಾಗಿ ನಿಂತಿದೆ. ಈ ಬಾರಿಯ ಎಲ್ಲ ಲೀಗ್ ಪಂದ್ಯದ ವೇಳೆಯೂ ಬಿಸಿಸಿಐ ಸ್ಟೇಡಿಯಂಗಳಲ್ಲಿ ವಿನೂತನ ಶೈಲಿಯ ಲಸರ್ ಶೋಗಳ ಮೂಲಕ ನೆರದಿದ್ದ ಪ್ರೇಕ್ಷಕರನ್ನು ರಂಜಿಸಿತ್ತು. ಇದೀಗ ಫೈನಲ್ ಪಂದ್ಯದಲ್ಲೂ ವಿಶಿಷ್ಠ ಶೈಲಿಯ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ. ಇದು ಎರಡನೇ ಇನ್ನಿಂಗ್ಸ್ನ ಡ್ರಿಂಕ್ಸ್ ಬ್ರೇಕ್ ವೇಳೆ ಪ್ರದರ್ಶನಗೊಳ್ಳಲಿದೆ ಎಂದು ಬಿಸಿಸಿಐ ತನ್ನ ಅಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಕೂಟದ ಉದ್ಘಾಟನ ಸಮಾರಂಭ ಮಾಡದೇ ಇದ್ದ ಬಿಸಿಸಿಐ ವಿರುದ್ಧ ಹಲವು ಟೀಕೆಗಳು ಕೇಳಿಬಂದಿತ್ತು. ಮೊದಲ ಬಾರಿಗೆ ಸಂಪೂರ್ಣವಾಗಿ ಕೂಟದ ಆತಿಥ್ಯ ಸಿಕ್ಕರೂ, ಅತ್ಯಂತ ಶ್ರೀೀಮಂತ ಕ್ರಿಕೆಟ್ ಮಂಡಳಿ ಎನಿಸಿಕೊಂಡಿದ್ದರೂ ಬಿಸಿಸಿಐಗೆ ಉದ್ಘಾಟನ ಕಾರ್ಯಕ್ರಮ ನಡೆಸಲಾಗದಷ್ಟು ಕಷ್ಟ ಎದುರಾಯಿತೇ ಎಂಬ ಟಾಕ್ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದು ಮಾಡಿತ್ತು.

ಇದೀಗ ಸಮಾರೋಪ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಬಿಸಿಸಿಐ ಸಕಲ ಸಿದ್ಧತೆ ಪೂರ್ಣಗೊಳಿಸಿದ್ದು ಸಮಾರೋಪ ಕಾರ್ಯಕ್ರಮದ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

andolanait

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

4 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

5 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

9 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

11 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

11 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

12 hours ago