ಕ್ರೀಡೆ

ವಿಶ್ವಕಪ್| ಅಲ್ಪ ಮೊತ್ತಕ್ಕೆ ಕುಸಿದ ಭಾರತ: ಇಂಗ್ಲೆಂಡ್ ಗೆಲುವಿಗೆ 230 ರನ್ ಗುರಿ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕನಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿಗೆ ಭಾರತ ತಂಡ 230 ರನ್ ಗುರಿ ನೀಡಿದೆ.

ಭಾರತದ ವಿರುದ್ದ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡು ಭಾರತಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿತು. ಇತ್ತ ಬ್ಯಾಟಿಂಗ್ ಬಂದ ಭಾರತ ನೀರೀಕ್ಷಿತ ಆರಂಭ ಪಡೆಯುವಲ್ಲಿ ಎಡವಿತು.ಕೇವಲ 40 ರನ್ ಗೆ ಭಾರತ ತನ್ನ ಪ್ರಮುಖ 3 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.ಭಾರತದ ಪರ ಶುಬ್ ಮನ್ ಗಿಲ್ 9 ರನ್ ಗೆ ಕ್ರಿಸ್ ವೋಕ್ಸ್ ಬೌಲಿಂಗ್ ನಲ್ಲಿ ಔಟ್ ಆದರೆ ತಾರಾ ಬ್ಯಾಟರ್ ವಿರಾಟ್ ಕೊಹ್ಲಿ ಶೂನ್ಯಕ್ಕೆ ಡೇವಿಡ್ ವಿಲ್ಲಿ ಬೌಲಿಂಗ್ ನಲ್ಲಿ ಸ್ಟೋಕ್ಸ್ ಗೆ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಶ್ರೇಯಸ್ ಐಯ್ಯರ್ 4 ರನ್ ಗಳಿಸಿದರು. ಮೂರು ವಿಕೆಟ್ ಬೇಗ ಪತನದ ನುಡುವೆಯೂ ಇಂಗ್ಲಂಡ್ ಆಕ್ರಮಣಕಾರಿ ಬೌಲಿಂಗ್ ಎದುರು ಭಾರತ ಪರ ಏಕಾಂಗಿ ಜವಾಬ್ದಾರಿಯುತ ಬ್ಯಾಟಿಂಗ್ ನಿರ್ವಹಿಸಿದ ನಾಯಕ ರೋಹಿತ್ ಶರ್ಮಾ ನಿಧಾನ ಗತಿಯಲ್ಲಿ ಇನ್ನಿಂಗ್ಸ್ ಕಟ್ಟುವ ಪ್ರಯತ್ನ ಮಾಡಿದರು ಅವರಿಗೆ ಕೆ ಎಲ್ ರಾಹುಲ್ 39 ರನ್ ಗಳಿಸಿ ಸಾಥ್ ನೀಡುವ ಪ್ರಯತ್ನ ಮಾಡಿದರಾದರೂ ಅವರು ಹೆಚ್ಚು ಸಮಯ ಕ್ರೀಸ್‌ ನಲ್ಲಿ ನಿಲ್ಲಲಿಲ್ಲ.

ನಾಯಕ ರೋಹಿತ್ ಶರ್ಮಾ 101 ಎಸೆತ ಗಳಲ್ಲಿ 10 ಬೌಂಡರಿ 3 ಸಿಕ್ಸರ್ ಸಹಿತ 87 ರನ್ ಬಾರಿಸಿ ಮಾಡುತ್ತದ್ದ ಸಂದರ್ಭ ರಶೀದ್ ಬೌಲಿಂಗ್ ನಲ್ಲಿ ದೊಡ್ಡ ಮೊತ್ತ ಪೇರಿಸಲು ಹೋಗಿ ಲಿಯಾಮ್ ಲಿವಿಂಗ್ ಸ್ಟೋನ್ ಹಿಡಿದ ಅದ್ಬುತ ಕ್ಯಾಚ್ ಗೆ ಔಟ್ ಆದರು. ರೋಹಿತ್ ವಿಕೆಟ್ ಪತನ ನಂತರ ಭಾರತಕ್ಕೆ ಹೆಚ್ಚು ರನ್ ಬರಲಿಲ್ಲ. ಬಳಿಕ ಕುಂಟುತ್ತಾ ಸಾಗಿತು. ಆದರೆ ಬ್ಯಾಟ್‌ ಬೀಸಿದ ಸೂರ್ಯ ಕುಮಾರ್ ಯಾದವ್ ರನ್‌ ಗಳಿಕಗೆ ವೇಗ ನೀಡಿದರು. 47 ಎಸೆತಗಳಲ್ಲಿ 4 ಬೌಂಡರಿ 1 ಸಿಕ್ಸರ್‌ ನೊಂದಿಗೆ 49 ರನ್‌ ಗಳಿಸಿದ ಸೂರ್ಯ ಕುಮಾರ್‌ ಯಾದವ್‌ ಅರ್ಧ ಶತಕ ವಂಚಿತರಾದರು. ರವೀಂದ್ರ ಜಡೇಜಾ 8 ಮುಹಮ್ಮದ್ ಶಮಿ 1 ರನ್, ಬೂಮ್ರಾ 16 ರನ್‌ ಗಳಿಸಿ ಔಟ್‌ ಆದರು.ಕುಲ್‌ ದೀಪ್‌ ಯಾದವ್‌ 9 ರನ್‌ ಗಳಿಸಿದರು.

ಇಂಗ್ಲೆಂಡ್ ಪರ ಡೇವಿಡ್ ವಿಲ್ಲಿ 3 ವಿಕೆಟ್‌ ಪಡೆದರು. ಕ್ರಿಸ್ ವೂಕ್ಸ್, ಅದಿಲ್ ರಶೀದ್ 2 ವಿಕೆಟ್ ಪಡೆದುಕೊಂಡರೆ ಮಾರ್ಕ್ ವುಡ್ ಒಂದು ವಿಕೆಟ್ ಕಬಳಿಸಿದರು

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

10 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

10 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

10 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

11 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

11 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

11 hours ago