ಕ್ರೀಡೆ

ವಿಶ್ವಕಪ್| ಅಲ್ಪ ಮೊತ್ತಕ್ಕೆ ಕುಸಿದ ಭಾರತ: ಇಂಗ್ಲೆಂಡ್ ಗೆಲುವಿಗೆ 230 ರನ್ ಗುರಿ

ಲಕ್ನೋ : ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಏಕನಾ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿಗೆ ಭಾರತ ತಂಡ 230 ರನ್ ಗುರಿ ನೀಡಿದೆ.

ಭಾರತದ ವಿರುದ್ದ ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡು ಭಾರತಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿತು. ಇತ್ತ ಬ್ಯಾಟಿಂಗ್ ಬಂದ ಭಾರತ ನೀರೀಕ್ಷಿತ ಆರಂಭ ಪಡೆಯುವಲ್ಲಿ ಎಡವಿತು.ಕೇವಲ 40 ರನ್ ಗೆ ಭಾರತ ತನ್ನ ಪ್ರಮುಖ 3 ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.ಭಾರತದ ಪರ ಶುಬ್ ಮನ್ ಗಿಲ್ 9 ರನ್ ಗೆ ಕ್ರಿಸ್ ವೋಕ್ಸ್ ಬೌಲಿಂಗ್ ನಲ್ಲಿ ಔಟ್ ಆದರೆ ತಾರಾ ಬ್ಯಾಟರ್ ವಿರಾಟ್ ಕೊಹ್ಲಿ ಶೂನ್ಯಕ್ಕೆ ಡೇವಿಡ್ ವಿಲ್ಲಿ ಬೌಲಿಂಗ್ ನಲ್ಲಿ ಸ್ಟೋಕ್ಸ್ ಗೆ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಶ್ರೇಯಸ್ ಐಯ್ಯರ್ 4 ರನ್ ಗಳಿಸಿದರು. ಮೂರು ವಿಕೆಟ್ ಬೇಗ ಪತನದ ನುಡುವೆಯೂ ಇಂಗ್ಲಂಡ್ ಆಕ್ರಮಣಕಾರಿ ಬೌಲಿಂಗ್ ಎದುರು ಭಾರತ ಪರ ಏಕಾಂಗಿ ಜವಾಬ್ದಾರಿಯುತ ಬ್ಯಾಟಿಂಗ್ ನಿರ್ವಹಿಸಿದ ನಾಯಕ ರೋಹಿತ್ ಶರ್ಮಾ ನಿಧಾನ ಗತಿಯಲ್ಲಿ ಇನ್ನಿಂಗ್ಸ್ ಕಟ್ಟುವ ಪ್ರಯತ್ನ ಮಾಡಿದರು ಅವರಿಗೆ ಕೆ ಎಲ್ ರಾಹುಲ್ 39 ರನ್ ಗಳಿಸಿ ಸಾಥ್ ನೀಡುವ ಪ್ರಯತ್ನ ಮಾಡಿದರಾದರೂ ಅವರು ಹೆಚ್ಚು ಸಮಯ ಕ್ರೀಸ್‌ ನಲ್ಲಿ ನಿಲ್ಲಲಿಲ್ಲ.

ನಾಯಕ ರೋಹಿತ್ ಶರ್ಮಾ 101 ಎಸೆತ ಗಳಲ್ಲಿ 10 ಬೌಂಡರಿ 3 ಸಿಕ್ಸರ್ ಸಹಿತ 87 ರನ್ ಬಾರಿಸಿ ಮಾಡುತ್ತದ್ದ ಸಂದರ್ಭ ರಶೀದ್ ಬೌಲಿಂಗ್ ನಲ್ಲಿ ದೊಡ್ಡ ಮೊತ್ತ ಪೇರಿಸಲು ಹೋಗಿ ಲಿಯಾಮ್ ಲಿವಿಂಗ್ ಸ್ಟೋನ್ ಹಿಡಿದ ಅದ್ಬುತ ಕ್ಯಾಚ್ ಗೆ ಔಟ್ ಆದರು. ರೋಹಿತ್ ವಿಕೆಟ್ ಪತನ ನಂತರ ಭಾರತಕ್ಕೆ ಹೆಚ್ಚು ರನ್ ಬರಲಿಲ್ಲ. ಬಳಿಕ ಕುಂಟುತ್ತಾ ಸಾಗಿತು. ಆದರೆ ಬ್ಯಾಟ್‌ ಬೀಸಿದ ಸೂರ್ಯ ಕುಮಾರ್ ಯಾದವ್ ರನ್‌ ಗಳಿಕಗೆ ವೇಗ ನೀಡಿದರು. 47 ಎಸೆತಗಳಲ್ಲಿ 4 ಬೌಂಡರಿ 1 ಸಿಕ್ಸರ್‌ ನೊಂದಿಗೆ 49 ರನ್‌ ಗಳಿಸಿದ ಸೂರ್ಯ ಕುಮಾರ್‌ ಯಾದವ್‌ ಅರ್ಧ ಶತಕ ವಂಚಿತರಾದರು. ರವೀಂದ್ರ ಜಡೇಜಾ 8 ಮುಹಮ್ಮದ್ ಶಮಿ 1 ರನ್, ಬೂಮ್ರಾ 16 ರನ್‌ ಗಳಿಸಿ ಔಟ್‌ ಆದರು.ಕುಲ್‌ ದೀಪ್‌ ಯಾದವ್‌ 9 ರನ್‌ ಗಳಿಸಿದರು.

ಇಂಗ್ಲೆಂಡ್ ಪರ ಡೇವಿಡ್ ವಿಲ್ಲಿ 3 ವಿಕೆಟ್‌ ಪಡೆದರು. ಕ್ರಿಸ್ ವೂಕ್ಸ್, ಅದಿಲ್ ರಶೀದ್ 2 ವಿಕೆಟ್ ಪಡೆದುಕೊಂಡರೆ ಮಾರ್ಕ್ ವುಡ್ ಒಂದು ವಿಕೆಟ್ ಕಬಳಿಸಿದರು

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

36 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago