ಕ್ರೀಡೆ

ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಲಂಕಾಗೆ ಸೋಲುಣಿಸಿದ ನಮಿಬಿಯಾ

ಮೆಲ್ಬರ್ನ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅರ್ಹತಾ ಸುತ್ತಿನ ‘ಎ’ ಗುಂಪಿನ ಮೊದಲ ಪಂದ್ಯದಲ್ಲಿ ನಮಿಬಿಯಾ ತಂಡ, ಏಷ್ಯಾಕಪ್‌ ಪ್ರಶಸ್ತಿ ವಿಜೇತ ಶ್ರೀಲಂಕಾ ಪಡೆಗೆ ಅಚ್ಚರಿಯ ಸೋಲುಣಿಸಿದೆ.
ಗೀಲಾಂಗ್‌ನಲ್ಲಿರುವ ಸೈಮಂಡ್ಸ್‌ ಕ್ರೀಡಾಂಗಣದಲ್ಲಿ ಇಂದು (ಅಕ್ಟೋಬರ್‌ 16ರಂದು) ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಸುಲಭ ಜಯದ ನಿರೀಕ್ಷೆಯಲ್ಲಿದ್ದ ಲಂಕನ್ನರೆದುರು ದಿಟ್ಟ ಆಟವಾಡಿದ ನಮಿಬಿಯಾ ಬ್ಯಾಟರ್‌ಗಳು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 163 ರನ್‌ ಕಲೆಹಾಕಿದರು.
ಕೇವಲ 28 ಎಸೆತಗಳಲ್ಲಿ 42 ರನ್‌ ಗಳಿಸಿದ ಜಾನ್‌ ಫ್ರೈಲಿಂಕ್‌ ಹಾಗೂ 16 ಎಸೆತಗಳಲ್ಲಿ 31 ರನ್‌ ಗಳಿಸಿದ ಜೆಜೆ ಸ್ಮಿತ್‌ ಉಪಯುಕ್ತ ಆಟವಾಡಿದರು.
ಈ ಗುರಿ ಎದುರು ಲಂಕಾ ತಂಡ ತಿಣುಕಾಡಿತು. ನಮಿಬಿಯಾ ಸಂಘಟಿತ ಬೌಲಿಂಗ್‌ ಎದುರು ದಿಕ್ಕೆಟ್ಟ ದಾಸುನ್‌ ಸನಕಾ ಪಡೆ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ 108 ರನ್‌ ಗಳಿಸುವಷ್ಟರಲ್ಲೇ ಆಲೌಟ್‌ ಆಯಿತು.
ನಾಯಕ ಸನಕ (29), ಭಾನುಕ ರಾಜಪಕ್ಸ (21) ಹಾಗೂ ಧನಂಜಯ ಡಿ ಸಿಲ್ವಾ (12) ಹೊರತುಪಡಿಸಿ ಯಾರೊಬ್ಬರೂ ಎರಡಂಕಿ ಮೊತ್ತ ಗಳಿಸಲಿಲ್ಲ.

ಹೀಗಾಗಿ 55 ರನ್‌ ಅಂತರದಿಂದ ಹೀನಾಯವಾಗಿ ಸೋಲು ಕಾಣುವಂತಾಯಿತು.

ಇದೇ ಗುಂಪಿನ ಇನ್ನೊಂದು ಪಂದ್ಯ ಇದೇ ಮೈದಾನದಲ್ಲಿ ನಡೆಯುತ್ತಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ನೆದರ್ಲೆಂಡ್ಸ್‌ ಹಣಾಹಣಿ ನಡೆಸುತ್ತಿವೆ

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

6 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

7 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

7 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

7 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

8 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

8 hours ago