ಕ್ರೀಡೆ

ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಲಂಕಾಗೆ ಸೋಲುಣಿಸಿದ ನಮಿಬಿಯಾ

ಮೆಲ್ಬರ್ನ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅರ್ಹತಾ ಸುತ್ತಿನ ‘ಎ’ ಗುಂಪಿನ ಮೊದಲ ಪಂದ್ಯದಲ್ಲಿ ನಮಿಬಿಯಾ ತಂಡ, ಏಷ್ಯಾಕಪ್‌ ಪ್ರಶಸ್ತಿ ವಿಜೇತ ಶ್ರೀಲಂಕಾ ಪಡೆಗೆ ಅಚ್ಚರಿಯ ಸೋಲುಣಿಸಿದೆ.
ಗೀಲಾಂಗ್‌ನಲ್ಲಿರುವ ಸೈಮಂಡ್ಸ್‌ ಕ್ರೀಡಾಂಗಣದಲ್ಲಿ ಇಂದು (ಅಕ್ಟೋಬರ್‌ 16ರಂದು) ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಸುಲಭ ಜಯದ ನಿರೀಕ್ಷೆಯಲ್ಲಿದ್ದ ಲಂಕನ್ನರೆದುರು ದಿಟ್ಟ ಆಟವಾಡಿದ ನಮಿಬಿಯಾ ಬ್ಯಾಟರ್‌ಗಳು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 163 ರನ್‌ ಕಲೆಹಾಕಿದರು.
ಕೇವಲ 28 ಎಸೆತಗಳಲ್ಲಿ 42 ರನ್‌ ಗಳಿಸಿದ ಜಾನ್‌ ಫ್ರೈಲಿಂಕ್‌ ಹಾಗೂ 16 ಎಸೆತಗಳಲ್ಲಿ 31 ರನ್‌ ಗಳಿಸಿದ ಜೆಜೆ ಸ್ಮಿತ್‌ ಉಪಯುಕ್ತ ಆಟವಾಡಿದರು.
ಈ ಗುರಿ ಎದುರು ಲಂಕಾ ತಂಡ ತಿಣುಕಾಡಿತು. ನಮಿಬಿಯಾ ಸಂಘಟಿತ ಬೌಲಿಂಗ್‌ ಎದುರು ದಿಕ್ಕೆಟ್ಟ ದಾಸುನ್‌ ಸನಕಾ ಪಡೆ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ 108 ರನ್‌ ಗಳಿಸುವಷ್ಟರಲ್ಲೇ ಆಲೌಟ್‌ ಆಯಿತು.
ನಾಯಕ ಸನಕ (29), ಭಾನುಕ ರಾಜಪಕ್ಸ (21) ಹಾಗೂ ಧನಂಜಯ ಡಿ ಸಿಲ್ವಾ (12) ಹೊರತುಪಡಿಸಿ ಯಾರೊಬ್ಬರೂ ಎರಡಂಕಿ ಮೊತ್ತ ಗಳಿಸಲಿಲ್ಲ.

ಹೀಗಾಗಿ 55 ರನ್‌ ಅಂತರದಿಂದ ಹೀನಾಯವಾಗಿ ಸೋಲು ಕಾಣುವಂತಾಯಿತು.

ಇದೇ ಗುಂಪಿನ ಇನ್ನೊಂದು ಪಂದ್ಯ ಇದೇ ಮೈದಾನದಲ್ಲಿ ನಡೆಯುತ್ತಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ನೆದರ್ಲೆಂಡ್ಸ್‌ ಹಣಾಹಣಿ ನಡೆಸುತ್ತಿವೆ

andolanait

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

9 hours ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

9 hours ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

10 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

11 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

12 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

13 hours ago