ಕ್ರೀಡೆ

ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಲಂಕಾಗೆ ಸೋಲುಣಿಸಿದ ನಮಿಬಿಯಾ

ಮೆಲ್ಬರ್ನ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅರ್ಹತಾ ಸುತ್ತಿನ ‘ಎ’ ಗುಂಪಿನ ಮೊದಲ ಪಂದ್ಯದಲ್ಲಿ ನಮಿಬಿಯಾ ತಂಡ, ಏಷ್ಯಾಕಪ್‌ ಪ್ರಶಸ್ತಿ ವಿಜೇತ ಶ್ರೀಲಂಕಾ ಪಡೆಗೆ ಅಚ್ಚರಿಯ ಸೋಲುಣಿಸಿದೆ.
ಗೀಲಾಂಗ್‌ನಲ್ಲಿರುವ ಸೈಮಂಡ್ಸ್‌ ಕ್ರೀಡಾಂಗಣದಲ್ಲಿ ಇಂದು (ಅಕ್ಟೋಬರ್‌ 16ರಂದು) ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಸುಲಭ ಜಯದ ನಿರೀಕ್ಷೆಯಲ್ಲಿದ್ದ ಲಂಕನ್ನರೆದುರು ದಿಟ್ಟ ಆಟವಾಡಿದ ನಮಿಬಿಯಾ ಬ್ಯಾಟರ್‌ಗಳು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 163 ರನ್‌ ಕಲೆಹಾಕಿದರು.
ಕೇವಲ 28 ಎಸೆತಗಳಲ್ಲಿ 42 ರನ್‌ ಗಳಿಸಿದ ಜಾನ್‌ ಫ್ರೈಲಿಂಕ್‌ ಹಾಗೂ 16 ಎಸೆತಗಳಲ್ಲಿ 31 ರನ್‌ ಗಳಿಸಿದ ಜೆಜೆ ಸ್ಮಿತ್‌ ಉಪಯುಕ್ತ ಆಟವಾಡಿದರು.
ಈ ಗುರಿ ಎದುರು ಲಂಕಾ ತಂಡ ತಿಣುಕಾಡಿತು. ನಮಿಬಿಯಾ ಸಂಘಟಿತ ಬೌಲಿಂಗ್‌ ಎದುರು ದಿಕ್ಕೆಟ್ಟ ದಾಸುನ್‌ ಸನಕಾ ಪಡೆ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ 108 ರನ್‌ ಗಳಿಸುವಷ್ಟರಲ್ಲೇ ಆಲೌಟ್‌ ಆಯಿತು.
ನಾಯಕ ಸನಕ (29), ಭಾನುಕ ರಾಜಪಕ್ಸ (21) ಹಾಗೂ ಧನಂಜಯ ಡಿ ಸಿಲ್ವಾ (12) ಹೊರತುಪಡಿಸಿ ಯಾರೊಬ್ಬರೂ ಎರಡಂಕಿ ಮೊತ್ತ ಗಳಿಸಲಿಲ್ಲ.

ಹೀಗಾಗಿ 55 ರನ್‌ ಅಂತರದಿಂದ ಹೀನಾಯವಾಗಿ ಸೋಲು ಕಾಣುವಂತಾಯಿತು.

ಇದೇ ಗುಂಪಿನ ಇನ್ನೊಂದು ಪಂದ್ಯ ಇದೇ ಮೈದಾನದಲ್ಲಿ ನಡೆಯುತ್ತಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ನೆದರ್ಲೆಂಡ್ಸ್‌ ಹಣಾಹಣಿ ನಡೆಸುತ್ತಿವೆ

andolanait

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ‘ಅರಸು, ಸಿದ್ದರಾಮಯ್ಯ ಎದುರಿಸಿದ ಸವಾಲುಗಳು ವಿಭಿನ್ನ’

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…

3 hours ago

ಕೇರಳ ಸರ್ಕಾರ ಭಾಷಾ ಸೌಹಾರ್ದತೆ ಕಾಪಾಡಲಿ

ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…

3 hours ago

ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆಯಲು ಹಿಂದೇಟು

ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ  ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…

3 hours ago

ಬಿಎಂಸಿಸಿ ರಚನೆ: ಅಭಿವೃದ್ಧಿಗೆ ಹಸಿರು ನಿಶಾನೆ

ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…

3 hours ago

137 ವರ್ಷ ದಾಟಿ ಮುನ್ನಡೆದ ಸರ್ಕಾರಿ ಶಾಲೆ!

ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…

3 hours ago

ಚಿಕ್ಕಣ್ಣ, ಜಯಪ್ರಕಾಶ್ ಬಿಜೆಪಿಗೆ?

ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…

3 hours ago