ಕ್ರೀಡೆ

ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಲಂಕಾಗೆ ಸೋಲುಣಿಸಿದ ನಮಿಬಿಯಾ

ಮೆಲ್ಬರ್ನ್: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಅರ್ಹತಾ ಸುತ್ತಿನ ‘ಎ’ ಗುಂಪಿನ ಮೊದಲ ಪಂದ್ಯದಲ್ಲಿ ನಮಿಬಿಯಾ ತಂಡ, ಏಷ್ಯಾಕಪ್‌ ಪ್ರಶಸ್ತಿ ವಿಜೇತ ಶ್ರೀಲಂಕಾ ಪಡೆಗೆ ಅಚ್ಚರಿಯ ಸೋಲುಣಿಸಿದೆ.
ಗೀಲಾಂಗ್‌ನಲ್ಲಿರುವ ಸೈಮಂಡ್ಸ್‌ ಕ್ರೀಡಾಂಗಣದಲ್ಲಿ ಇಂದು (ಅಕ್ಟೋಬರ್‌ 16ರಂದು) ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಸುಲಭ ಜಯದ ನಿರೀಕ್ಷೆಯಲ್ಲಿದ್ದ ಲಂಕನ್ನರೆದುರು ದಿಟ್ಟ ಆಟವಾಡಿದ ನಮಿಬಿಯಾ ಬ್ಯಾಟರ್‌ಗಳು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 163 ರನ್‌ ಕಲೆಹಾಕಿದರು.
ಕೇವಲ 28 ಎಸೆತಗಳಲ್ಲಿ 42 ರನ್‌ ಗಳಿಸಿದ ಜಾನ್‌ ಫ್ರೈಲಿಂಕ್‌ ಹಾಗೂ 16 ಎಸೆತಗಳಲ್ಲಿ 31 ರನ್‌ ಗಳಿಸಿದ ಜೆಜೆ ಸ್ಮಿತ್‌ ಉಪಯುಕ್ತ ಆಟವಾಡಿದರು.
ಈ ಗುರಿ ಎದುರು ಲಂಕಾ ತಂಡ ತಿಣುಕಾಡಿತು. ನಮಿಬಿಯಾ ಸಂಘಟಿತ ಬೌಲಿಂಗ್‌ ಎದುರು ದಿಕ್ಕೆಟ್ಟ ದಾಸುನ್‌ ಸನಕಾ ಪಡೆ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ 108 ರನ್‌ ಗಳಿಸುವಷ್ಟರಲ್ಲೇ ಆಲೌಟ್‌ ಆಯಿತು.
ನಾಯಕ ಸನಕ (29), ಭಾನುಕ ರಾಜಪಕ್ಸ (21) ಹಾಗೂ ಧನಂಜಯ ಡಿ ಸಿಲ್ವಾ (12) ಹೊರತುಪಡಿಸಿ ಯಾರೊಬ್ಬರೂ ಎರಡಂಕಿ ಮೊತ್ತ ಗಳಿಸಲಿಲ್ಲ.

ಹೀಗಾಗಿ 55 ರನ್‌ ಅಂತರದಿಂದ ಹೀನಾಯವಾಗಿ ಸೋಲು ಕಾಣುವಂತಾಯಿತು.

ಇದೇ ಗುಂಪಿನ ಇನ್ನೊಂದು ಪಂದ್ಯ ಇದೇ ಮೈದಾನದಲ್ಲಿ ನಡೆಯುತ್ತಿದ್ದು, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ನೆದರ್ಲೆಂಡ್ಸ್‌ ಹಣಾಹಣಿ ನಡೆಸುತ್ತಿವೆ

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago