ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ 5 ವಿಕೆಟ್ ಜಯ ಗಳಿಸಿದೆ.
ಮೊದಲು ಬ್ಯಾಟ್ ಬೀಸಿದ್ದ ನೆದರ್ಲ್ಯಾಂಡ್ಸ್ ಪರ ಸೈಬ್ರಾಂಡ್ ಹಾಗೂ ಲೊಗನ್ ವಾನ್ ಬೀಕ್ ಕೊನೆಯಲ್ಲಿ ಬಾರಿಸಿದ ಜವಾಬ್ದಾರಿಯುತ ಅರ್ಧಶತಕದ ನೆರವಿನಿಂದ ತಂಡ 49.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 262 ರನ್ ಪೇರಿಸಿತು.
ಡಚ್ಚರು ನೀಡಿದ ಸ್ಪರ್ಧಾತ್ಮಕ ಗುರಿ ಪಡೆದು ಬ್ಯಾಟಿಂಗ್ ಗೆ ಇಳಿದ ಶ್ರಿಲಂಕಾಗೆ ಆರಂಭಿಕ ಬ್ಯಾಟರ್ ಕುಸಾಲ್ ಪರೇರ(5) ರನ್ನು ಔಟ್ ಮಾಡುವ ಮೂಲಕ ಆರ್ಯನ್ ದತ್ ನೆದರ್ಲ್ಯಾಂಡ್ಸ್ ಗೆ ಪ್ರಾರಂಭಿಕ ಮುನ್ನಡೆ ತಂದುಕೊಟ್ಟರು. ಬಳಿಕ ಬ್ಯಾಟಿಂಗ್ ಬಂದ ನಾಯಕ ಕುಶಾಲ್ ಮೆಂಡಿಸ್ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾದರು. ಲಂಕಾ ಪರ ಪಾತುಮ್ ನಿಸಾಂಕ 9 ಬೌಂಡರಿ ಸಹಿತ 54 ರನ್ ಬಾರಿಸಿ ಪೌಲ್ ವಾನ್ ಮೀಕೆರನ್ ಗೆ ವಿಕೆಟ್ ಒಪ್ಪಿಸಿದರೆ ಚರಿತ್ ಹಸಲಂಕ 44 ರನ್ ಗೆ ಆರ್ಯನ್ ದತ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ನಾಲ್ಕನೇ ಕ್ರಮಾಂಕ ದಲ್ಲಿ ಬ್ಯಾಟಿಂಗ್ ಬಂದ ಸಧೀರ ಸಮರವಿಕ್ರಮ 7 ಬೌಂಡರಿ ಸಹಿತ ಅಜೇಯ 91 ರನ್ ಗಳಿಸುವ ಮೂಲಕ ಶ್ರಿಲಂಕಾಗೆ ಟೂರ್ನಿಯಲ್ಲಿ ಮೊದಲ ಜಯ ತಂದುಕೊಟ್ಟರು. ಅವರಿಗೆ ಸಾಥ್ ನೀಡಿದ್ದ ಧನಂಜಯ ಡಿಸಿಲ್ವ 30 ರನ್ ಬಾರಿಸಿದರು. ದುಶಾನ್ ಹೇಮಂತ 4 ರನ್ ಗಳಿಸಿದರು.
ನೆದರ್ಲ್ಯಾಂಡ್ಸ್ ಪರ ಆರ್ಯನ್ ದತ್ 3 ವಿಕೆಟ್ ಪಡೆದರೆ, ಪೌಲ್ ವಾನ್ ಮೀಕೆರನ್, ಕಾಲಿನ್ ಅಕೆರ್ಮಾನ್ ತಲಾ ಒಂದು ವಿಕೆಟ್ ಪಡೆದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…