ಕ್ರೀಡೆ

ವಿಶ್ವಕಪ್: ಸತತ ಸೋಲಿನ ಬಳಿಕ ಶ್ರೀಲಂಕಾಕ್ಕೆ ಮೊದಲ ಜಯ

ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ 5 ವಿಕೆಟ್ ಜಯ ಗಳಿಸಿದೆ.

ಮೊದಲು ಬ್ಯಾಟ್ ಬೀಸಿದ್ದ ನೆದರ್ಲ್ಯಾಂಡ್ಸ್ ಪರ ಸೈಬ್ರಾಂಡ್ ಹಾಗೂ ಲೊಗನ್ ವಾನ್ ಬೀಕ್ ಕೊನೆಯಲ್ಲಿ ಬಾರಿಸಿದ ಜವಾಬ್ದಾರಿಯುತ ಅರ್ಧಶತಕದ ನೆರವಿನಿಂದ ತಂಡ 49.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 262 ರನ್ ಪೇರಿಸಿತು.

ಡಚ್ಚರು ನೀಡಿದ ಸ್ಪರ್ಧಾತ್ಮಕ ಗುರಿ ಪಡೆದು ಬ್ಯಾಟಿಂಗ್ ಗೆ ಇಳಿದ ಶ್ರಿಲಂಕಾಗೆ ಆರಂಭಿಕ ಬ್ಯಾಟರ್ ಕುಸಾಲ್ ಪರೇರ(5) ರನ್ನು ಔಟ್ ಮಾಡುವ ಮೂಲಕ ಆರ್ಯನ್ ದತ್ ನೆದರ್ಲ್ಯಾಂಡ್ಸ್ ಗೆ ಪ್ರಾರಂಭಿಕ ಮುನ್ನಡೆ ತಂದುಕೊಟ್ಟರು. ಬಳಿಕ ಬ್ಯಾಟಿಂಗ್ ಬಂದ ನಾಯಕ ಕುಶಾಲ್ ಮೆಂಡಿಸ್ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾದರು. ಲಂಕಾ ಪರ ಪಾತುಮ್ ನಿಸಾಂಕ 9 ಬೌಂಡರಿ ಸಹಿತ 54 ರನ್ ಬಾರಿಸಿ ಪೌಲ್ ವಾನ್ ಮೀಕೆರನ್ ಗೆ ವಿಕೆಟ್ ಒಪ್ಪಿಸಿದರೆ ಚರಿತ್ ಹಸಲಂಕ 44 ರನ್ ಗೆ ಆರ್ಯನ್ ದತ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ನಾಲ್ಕನೇ ಕ್ರಮಾಂಕ ದಲ್ಲಿ ಬ್ಯಾಟಿಂಗ್ ಬಂದ ಸಧೀರ ಸಮರವಿಕ್ರಮ 7 ಬೌಂಡರಿ ಸಹಿತ ಅಜೇಯ 91 ರನ್ ಗಳಿಸುವ ಮೂಲಕ ಶ್ರಿಲಂಕಾಗೆ ಟೂರ್ನಿಯಲ್ಲಿ ಮೊದಲ ಜಯ ತಂದುಕೊಟ್ಟರು. ಅವರಿಗೆ ಸಾಥ್ ನೀಡಿದ್ದ ಧನಂಜಯ ಡಿಸಿಲ್ವ 30 ರನ್ ಬಾರಿಸಿದರು. ದುಶಾನ್ ಹೇಮಂತ 4 ರನ್ ಗಳಿಸಿದರು.

ನೆದರ್ಲ್ಯಾಂಡ್ಸ್ ಪರ ಆರ್ಯನ್ ದತ್ 3 ವಿಕೆಟ್ ಪಡೆದರೆ, ಪೌಲ್ ವಾನ್ ಮೀಕೆರನ್, ಕಾಲಿನ್ ಅಕೆರ್ಮಾನ್ ತಲಾ ಒಂದು ವಿಕೆಟ್ ಪಡೆದರು.

andolanait

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

3 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

5 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

6 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

6 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

7 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

9 hours ago