ಕ್ರೀಡೆ

ವಿಶ್ವಕಪ್: ಸತತ ಸೋಲಿನ ಬಳಿಕ ಶ್ರೀಲಂಕಾಕ್ಕೆ ಮೊದಲ ಜಯ

ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ 5 ವಿಕೆಟ್ ಜಯ ಗಳಿಸಿದೆ.

ಮೊದಲು ಬ್ಯಾಟ್ ಬೀಸಿದ್ದ ನೆದರ್ಲ್ಯಾಂಡ್ಸ್ ಪರ ಸೈಬ್ರಾಂಡ್ ಹಾಗೂ ಲೊಗನ್ ವಾನ್ ಬೀಕ್ ಕೊನೆಯಲ್ಲಿ ಬಾರಿಸಿದ ಜವಾಬ್ದಾರಿಯುತ ಅರ್ಧಶತಕದ ನೆರವಿನಿಂದ ತಂಡ 49.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 262 ರನ್ ಪೇರಿಸಿತು.

ಡಚ್ಚರು ನೀಡಿದ ಸ್ಪರ್ಧಾತ್ಮಕ ಗುರಿ ಪಡೆದು ಬ್ಯಾಟಿಂಗ್ ಗೆ ಇಳಿದ ಶ್ರಿಲಂಕಾಗೆ ಆರಂಭಿಕ ಬ್ಯಾಟರ್ ಕುಸಾಲ್ ಪರೇರ(5) ರನ್ನು ಔಟ್ ಮಾಡುವ ಮೂಲಕ ಆರ್ಯನ್ ದತ್ ನೆದರ್ಲ್ಯಾಂಡ್ಸ್ ಗೆ ಪ್ರಾರಂಭಿಕ ಮುನ್ನಡೆ ತಂದುಕೊಟ್ಟರು. ಬಳಿಕ ಬ್ಯಾಟಿಂಗ್ ಬಂದ ನಾಯಕ ಕುಶಾಲ್ ಮೆಂಡಿಸ್ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾದರು. ಲಂಕಾ ಪರ ಪಾತುಮ್ ನಿಸಾಂಕ 9 ಬೌಂಡರಿ ಸಹಿತ 54 ರನ್ ಬಾರಿಸಿ ಪೌಲ್ ವಾನ್ ಮೀಕೆರನ್ ಗೆ ವಿಕೆಟ್ ಒಪ್ಪಿಸಿದರೆ ಚರಿತ್ ಹಸಲಂಕ 44 ರನ್ ಗೆ ಆರ್ಯನ್ ದತ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ನಾಲ್ಕನೇ ಕ್ರಮಾಂಕ ದಲ್ಲಿ ಬ್ಯಾಟಿಂಗ್ ಬಂದ ಸಧೀರ ಸಮರವಿಕ್ರಮ 7 ಬೌಂಡರಿ ಸಹಿತ ಅಜೇಯ 91 ರನ್ ಗಳಿಸುವ ಮೂಲಕ ಶ್ರಿಲಂಕಾಗೆ ಟೂರ್ನಿಯಲ್ಲಿ ಮೊದಲ ಜಯ ತಂದುಕೊಟ್ಟರು. ಅವರಿಗೆ ಸಾಥ್ ನೀಡಿದ್ದ ಧನಂಜಯ ಡಿಸಿಲ್ವ 30 ರನ್ ಬಾರಿಸಿದರು. ದುಶಾನ್ ಹೇಮಂತ 4 ರನ್ ಗಳಿಸಿದರು.

ನೆದರ್ಲ್ಯಾಂಡ್ಸ್ ಪರ ಆರ್ಯನ್ ದತ್ 3 ವಿಕೆಟ್ ಪಡೆದರೆ, ಪೌಲ್ ವಾನ್ ಮೀಕೆರನ್, ಕಾಲಿನ್ ಅಕೆರ್ಮಾನ್ ತಲಾ ಒಂದು ವಿಕೆಟ್ ಪಡೆದರು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago