ಲಕ್ನೋ: ಇಲ್ಲಿನ ಅಟಲ್ ಬಿಹಾರಿ ವಾಜಪೇಯಿ ಎಕಾನ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ನೆದರ್ಲ್ಯಾಂಡ್ಸ್ ವಿರುದ್ಧ ಶ್ರೀಲಂಕಾ 5 ವಿಕೆಟ್ ಜಯ ಗಳಿಸಿದೆ.
ಮೊದಲು ಬ್ಯಾಟ್ ಬೀಸಿದ್ದ ನೆದರ್ಲ್ಯಾಂಡ್ಸ್ ಪರ ಸೈಬ್ರಾಂಡ್ ಹಾಗೂ ಲೊಗನ್ ವಾನ್ ಬೀಕ್ ಕೊನೆಯಲ್ಲಿ ಬಾರಿಸಿದ ಜವಾಬ್ದಾರಿಯುತ ಅರ್ಧಶತಕದ ನೆರವಿನಿಂದ ತಂಡ 49.4 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 262 ರನ್ ಪೇರಿಸಿತು.
ಡಚ್ಚರು ನೀಡಿದ ಸ್ಪರ್ಧಾತ್ಮಕ ಗುರಿ ಪಡೆದು ಬ್ಯಾಟಿಂಗ್ ಗೆ ಇಳಿದ ಶ್ರಿಲಂಕಾಗೆ ಆರಂಭಿಕ ಬ್ಯಾಟರ್ ಕುಸಾಲ್ ಪರೇರ(5) ರನ್ನು ಔಟ್ ಮಾಡುವ ಮೂಲಕ ಆರ್ಯನ್ ದತ್ ನೆದರ್ಲ್ಯಾಂಡ್ಸ್ ಗೆ ಪ್ರಾರಂಭಿಕ ಮುನ್ನಡೆ ತಂದುಕೊಟ್ಟರು. ಬಳಿಕ ಬ್ಯಾಟಿಂಗ್ ಬಂದ ನಾಯಕ ಕುಶಾಲ್ ಮೆಂಡಿಸ್ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾದರು. ಲಂಕಾ ಪರ ಪಾತುಮ್ ನಿಸಾಂಕ 9 ಬೌಂಡರಿ ಸಹಿತ 54 ರನ್ ಬಾರಿಸಿ ಪೌಲ್ ವಾನ್ ಮೀಕೆರನ್ ಗೆ ವಿಕೆಟ್ ಒಪ್ಪಿಸಿದರೆ ಚರಿತ್ ಹಸಲಂಕ 44 ರನ್ ಗೆ ಆರ್ಯನ್ ದತ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ನಿರ್ಗಮಿಸಿದರು. ನಾಲ್ಕನೇ ಕ್ರಮಾಂಕ ದಲ್ಲಿ ಬ್ಯಾಟಿಂಗ್ ಬಂದ ಸಧೀರ ಸಮರವಿಕ್ರಮ 7 ಬೌಂಡರಿ ಸಹಿತ ಅಜೇಯ 91 ರನ್ ಗಳಿಸುವ ಮೂಲಕ ಶ್ರಿಲಂಕಾಗೆ ಟೂರ್ನಿಯಲ್ಲಿ ಮೊದಲ ಜಯ ತಂದುಕೊಟ್ಟರು. ಅವರಿಗೆ ಸಾಥ್ ನೀಡಿದ್ದ ಧನಂಜಯ ಡಿಸಿಲ್ವ 30 ರನ್ ಬಾರಿಸಿದರು. ದುಶಾನ್ ಹೇಮಂತ 4 ರನ್ ಗಳಿಸಿದರು.
ನೆದರ್ಲ್ಯಾಂಡ್ಸ್ ಪರ ಆರ್ಯನ್ ದತ್ 3 ವಿಕೆಟ್ ಪಡೆದರೆ, ಪೌಲ್ ವಾನ್ ಮೀಕೆರನ್, ಕಾಲಿನ್ ಅಕೆರ್ಮಾನ್ ತಲಾ ಒಂದು ವಿಕೆಟ್ ಪಡೆದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…