ಕ್ರೀಡೆ

ವರ್ಲ್ಡ್ ಗೇಮ್ಸ್: ಐತಿಹಾಸಿಕ ಸ್ವರ್ಣ ಜಯಿಸಿದ ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ

ಬರ್ಮಿಂಗ್ಹ್ಯಾಮ್ : ಅಂತರ್ರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್-2023ರಲ್ಲಿ ಭಾನುವಾರ ನಡೆದ ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 9 ವಿಕೆಟ್ ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದೆ.

ಭಾರತದ ಮಹಿಳಾ ತಂಡ ವರ್ಲ್ಡ್ ಗೇಮ್ಸ್ನಲ್ಲಿ ಚಿತ್ತಾಕರ್ಷಕ ಪ್ರದರ್ಶನ ನೀಡಿ ಎಲ್ಲರ ಹೃದಯ ಗೆದ್ದಿದೆ. ಟೂರ್ನಿಯ ಎಲ್ಲ ಲೀಗ್ ಪಂದ್ಯಗಳನ್ನು ಜಯಿಸಿದ್ದ ಭಾರತ ಅಜೇಯ ದಾಖಲೆ ಕಾಯ್ದುಕೊಂಡಿದೆ.

ಭಾರತವು ಆಸ್ಟ್ರೇಲಿಯವನ್ನು 20 ಓವರ್ಗಳಲ್ಲಿ 8 ವಿಕೆಟ್‌ಗೆ 114 ರನ್ ಒಳಗೆ ನಿಯಂತ್ರಿಸಿತು. ಪರಿಷ್ಕೃತ ಗುರಿ 42 ರನ್ ಪಡೆದ ಭಾರತವು 4ನೇ ಓವರ್ನಲ್ಲಿ ಚೇಸಿಂಗ್ ಮಾಡಿತು.

ಐಬಿಎಸ್ಎ ವರ್ಲ್ಡ್ ಗೇಮ್ಸ್‌ನಲ್ಲಿ ಅಂಧರ ಕ್ರಿಕೆಟ್ ಕಳೆದ ವಾರ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ನಡುವಿನ ಪಂದ್ಯದ ಮೂಲಕ ಆರಂಭವಾಗಿತ್ತು. ಇದು ವರ್ಲ್ಡ್ ಗೇಮ್ಸ್ನ ಮೊದಲ ಫೈನಲ್ ಪಂದ್ಯವಾಗಿದೆ. ಆಸ್ಟ್ರೇಲಿಯವನ್ನು ಭರ್ಜರಿಯಾಗಿ ಮಣಿಸಿರುವ ಭಾರತ ಈಗ ಪ್ರಶಸ್ತಿ ಜಯಿಸಿದೆ.

andolanait

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

1 hour ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

4 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago