ಬರ್ಮಿಂಗ್ಹ್ಯಾಮ್ : ಅಂತರ್ರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್-2023ರಲ್ಲಿ ಭಾನುವಾರ ನಡೆದ ಮಳೆಬಾಧಿತ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 9 ವಿಕೆಟ್ ಗಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದೆ.
ಭಾರತದ ಮಹಿಳಾ ತಂಡ ವರ್ಲ್ಡ್ ಗೇಮ್ಸ್ನಲ್ಲಿ ಚಿತ್ತಾಕರ್ಷಕ ಪ್ರದರ್ಶನ ನೀಡಿ ಎಲ್ಲರ ಹೃದಯ ಗೆದ್ದಿದೆ. ಟೂರ್ನಿಯ ಎಲ್ಲ ಲೀಗ್ ಪಂದ್ಯಗಳನ್ನು ಜಯಿಸಿದ್ದ ಭಾರತ ಅಜೇಯ ದಾಖಲೆ ಕಾಯ್ದುಕೊಂಡಿದೆ.
ಭಾರತವು ಆಸ್ಟ್ರೇಲಿಯವನ್ನು 20 ಓವರ್ಗಳಲ್ಲಿ 8 ವಿಕೆಟ್ಗೆ 114 ರನ್ ಒಳಗೆ ನಿಯಂತ್ರಿಸಿತು. ಪರಿಷ್ಕೃತ ಗುರಿ 42 ರನ್ ಪಡೆದ ಭಾರತವು 4ನೇ ಓವರ್ನಲ್ಲಿ ಚೇಸಿಂಗ್ ಮಾಡಿತು.
ಐಬಿಎಸ್ಎ ವರ್ಲ್ಡ್ ಗೇಮ್ಸ್ನಲ್ಲಿ ಅಂಧರ ಕ್ರಿಕೆಟ್ ಕಳೆದ ವಾರ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯ ನಡುವಿನ ಪಂದ್ಯದ ಮೂಲಕ ಆರಂಭವಾಗಿತ್ತು. ಇದು ವರ್ಲ್ಡ್ ಗೇಮ್ಸ್ನ ಮೊದಲ ಫೈನಲ್ ಪಂದ್ಯವಾಗಿದೆ. ಆಸ್ಟ್ರೇಲಿಯವನ್ನು ಭರ್ಜರಿಯಾಗಿ ಮಣಿಸಿರುವ ಭಾರತ ಈಗ ಪ್ರಶಸ್ತಿ ಜಯಿಸಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…