ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಗೆದ್ದವರಿಗೆ ಸಿಗುವ ಬಹುಮಾನ ಮೊತ್ತ ಎಷ್ಟು ಗೊತ್ತಾ?

ಲಂಡನ್: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತವನ್ನು ಬಹಿರಂಗ ಪಡಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಒಂಬತ್ತು ತಂಡಗಳು 31.4 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಹಂಚಿಕೊಳ್ಳುತ್ತವೆ,

ಲಂಡನ್‌ ನ ಓವಲ್ ನಲ್ಲಿ ಜೂನ್ 7 ರಿಂದ ಪ್ರಾರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಡಬ್ಲ್ಯು ಟಿಸಿ ಫೈನಲ್‌ ನ ವಿಜೇತರು ಸುಮಾರು ರೂ 13.22 ಕೋಟಿ ಬಹುಮಾನವನ್ನು ಪಡೆಯುತ್ತಾರೆ. ರನ್ನರ್ ಅಪ್ ತಂಡವು ಸುಮಾರು ರೂ 6.61 ಕೋಟಿ ಪಡೆಯಲಿದ್ದಾರೆ.

“ಟೂರ್ನಮೆಂಟ್ ಬಹುಮಾನದ ಹಣದಲ್ಲಿ ಯಾವುದೇ ಬದಲಾವಣೆ ಇಲ್ಲ, ಇದು ಚಾಂಪಿಯನ್‌ಶಿಪ್‌ನ (2019-21) ಉದ್ಘಾಟನಾ ಆವೃತ್ತಿಯ ಒಟ್ಟು ಪರ್ಸ್ 3.8 ಮಿಲಿಯನ್ ಡಾಲರ್ (ಅಂದಾಜು ರೂ. 13.22 ಕೋಟಿ) ಯಂತೆಯೇ ಉಳಿದಿದೆ. 2021 ರಲ್ಲಿ ಸೌತಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಎಂಟು ವಿಕೆಟ್‌ ಗಳ ಜಯ ಸಾಧಿಸಿದ ಕೇನ್ ವಿಲಿಯಮ್ಸನ್ ಅವರ ನ್ಯೂಜಿಲೆಂಡ್‌ ತಂಡವು 1.6 ಮಿಲಿಯನ್ ಡಾಲರ್ ಗೆ ಬಹುಮಾನ ನೀಡಲಾಗಿತ್ತು” ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಡಬ್ಲ್ಯುಟಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾವು ಅಂದಾಜು 3.72 ಕೋಟಿ ರೂ. ಪಡೆಯಲಿದೆ. ನಾಲ್ಕನೇ ಸ್ಥಾನದಲ್ಲಿ ತಮ್ಮ ಅಭಿಯಾನವನ್ನು ಪೂರ್ಣಗೊಳಿಸಿದ ಇಂಗ್ಲೆಂಡ್ ಅಂದಾಜು 2.9 ಕೋಟಿ ರೂ ಗಳಿಸುತ್ತದೆ.

ಐದನೇ ಸ್ಥಾನ ಗಳಿಸಿದ ಶ್ರೀಲಂಕಾ ಅಂದಾಜು ರೂ 1.65 ಕೋಟಿ ಗಳಿಸಲಿದೆ. ಉಳಿದ ತಂಡಗಳಾದ ನ್ಯೂಜಿಲೆಂಡ್ (ನಂ.6), ಪಾಕಿಸ್ತಾನ (ನಂ.7), ವೆಸ್ಟ್ ಇಂಡೀಸ್ (ನಂ.8), ಮತ್ತು ಬಾಂಗ್ಲಾದೇಶ (ನಂ.9) ತಲಾ $100,000 ಮೊತ್ತವನ್ನು (ಅಂದಾಜು 82.7 ಲಕ್ಷ ರೂ.) ಬಹುಮಾನವಾಗಿ ನೀಡಲಾಗುವುದು” ಎಂದು ಪ್ರಕಟಣೆ ತಿಳಿಸಿದೆ.

andolanait

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

33 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

60 mins ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

1 hour ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

1 hour ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

1 hour ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

2 hours ago