ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಗೆದ್ದವರಿಗೆ ಸಿಗುವ ಬಹುಮಾನ ಮೊತ್ತ ಎಷ್ಟು ಗೊತ್ತಾ?

ಲಂಡನ್: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತವನ್ನು ಬಹಿರಂಗ ಪಡಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಒಂಬತ್ತು ತಂಡಗಳು 31.4 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಹಂಚಿಕೊಳ್ಳುತ್ತವೆ,

ಲಂಡನ್‌ ನ ಓವಲ್ ನಲ್ಲಿ ಜೂನ್ 7 ರಿಂದ ಪ್ರಾರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಡಬ್ಲ್ಯು ಟಿಸಿ ಫೈನಲ್‌ ನ ವಿಜೇತರು ಸುಮಾರು ರೂ 13.22 ಕೋಟಿ ಬಹುಮಾನವನ್ನು ಪಡೆಯುತ್ತಾರೆ. ರನ್ನರ್ ಅಪ್ ತಂಡವು ಸುಮಾರು ರೂ 6.61 ಕೋಟಿ ಪಡೆಯಲಿದ್ದಾರೆ.

“ಟೂರ್ನಮೆಂಟ್ ಬಹುಮಾನದ ಹಣದಲ್ಲಿ ಯಾವುದೇ ಬದಲಾವಣೆ ಇಲ್ಲ, ಇದು ಚಾಂಪಿಯನ್‌ಶಿಪ್‌ನ (2019-21) ಉದ್ಘಾಟನಾ ಆವೃತ್ತಿಯ ಒಟ್ಟು ಪರ್ಸ್ 3.8 ಮಿಲಿಯನ್ ಡಾಲರ್ (ಅಂದಾಜು ರೂ. 13.22 ಕೋಟಿ) ಯಂತೆಯೇ ಉಳಿದಿದೆ. 2021 ರಲ್ಲಿ ಸೌತಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಎಂಟು ವಿಕೆಟ್‌ ಗಳ ಜಯ ಸಾಧಿಸಿದ ಕೇನ್ ವಿಲಿಯಮ್ಸನ್ ಅವರ ನ್ಯೂಜಿಲೆಂಡ್‌ ತಂಡವು 1.6 ಮಿಲಿಯನ್ ಡಾಲರ್ ಗೆ ಬಹುಮಾನ ನೀಡಲಾಗಿತ್ತು” ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಡಬ್ಲ್ಯುಟಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾವು ಅಂದಾಜು 3.72 ಕೋಟಿ ರೂ. ಪಡೆಯಲಿದೆ. ನಾಲ್ಕನೇ ಸ್ಥಾನದಲ್ಲಿ ತಮ್ಮ ಅಭಿಯಾನವನ್ನು ಪೂರ್ಣಗೊಳಿಸಿದ ಇಂಗ್ಲೆಂಡ್ ಅಂದಾಜು 2.9 ಕೋಟಿ ರೂ ಗಳಿಸುತ್ತದೆ.

ಐದನೇ ಸ್ಥಾನ ಗಳಿಸಿದ ಶ್ರೀಲಂಕಾ ಅಂದಾಜು ರೂ 1.65 ಕೋಟಿ ಗಳಿಸಲಿದೆ. ಉಳಿದ ತಂಡಗಳಾದ ನ್ಯೂಜಿಲೆಂಡ್ (ನಂ.6), ಪಾಕಿಸ್ತಾನ (ನಂ.7), ವೆಸ್ಟ್ ಇಂಡೀಸ್ (ನಂ.8), ಮತ್ತು ಬಾಂಗ್ಲಾದೇಶ (ನಂ.9) ತಲಾ $100,000 ಮೊತ್ತವನ್ನು (ಅಂದಾಜು 82.7 ಲಕ್ಷ ರೂ.) ಬಹುಮಾನವಾಗಿ ನೀಡಲಾಗುವುದು” ಎಂದು ಪ್ರಕಟಣೆ ತಿಳಿಸಿದೆ.

andolanait

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

6 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

6 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

7 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

7 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

8 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

8 hours ago