ಕ್ರೀಡೆ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಗೆದ್ದವರಿಗೆ ಸಿಗುವ ಬಹುಮಾನ ಮೊತ್ತ ಎಷ್ಟು ಗೊತ್ತಾ?

ಲಂಡನ್: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ವಿಜೇತರಿಗೆ ನೀಡಲಾಗುವ ಬಹುಮಾನದ ಮೊತ್ತವನ್ನು ಬಹಿರಂಗ ಪಡಿಸಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಒಂಬತ್ತು ತಂಡಗಳು 31.4 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಹಂಚಿಕೊಳ್ಳುತ್ತವೆ,

ಲಂಡನ್‌ ನ ಓವಲ್ ನಲ್ಲಿ ಜೂನ್ 7 ರಿಂದ ಪ್ರಾರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಡಬ್ಲ್ಯು ಟಿಸಿ ಫೈನಲ್‌ ನ ವಿಜೇತರು ಸುಮಾರು ರೂ 13.22 ಕೋಟಿ ಬಹುಮಾನವನ್ನು ಪಡೆಯುತ್ತಾರೆ. ರನ್ನರ್ ಅಪ್ ತಂಡವು ಸುಮಾರು ರೂ 6.61 ಕೋಟಿ ಪಡೆಯಲಿದ್ದಾರೆ.

“ಟೂರ್ನಮೆಂಟ್ ಬಹುಮಾನದ ಹಣದಲ್ಲಿ ಯಾವುದೇ ಬದಲಾವಣೆ ಇಲ್ಲ, ಇದು ಚಾಂಪಿಯನ್‌ಶಿಪ್‌ನ (2019-21) ಉದ್ಘಾಟನಾ ಆವೃತ್ತಿಯ ಒಟ್ಟು ಪರ್ಸ್ 3.8 ಮಿಲಿಯನ್ ಡಾಲರ್ (ಅಂದಾಜು ರೂ. 13.22 ಕೋಟಿ) ಯಂತೆಯೇ ಉಳಿದಿದೆ. 2021 ರಲ್ಲಿ ಸೌತಾಂಪ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತದ ವಿರುದ್ಧ ಎಂಟು ವಿಕೆಟ್‌ ಗಳ ಜಯ ಸಾಧಿಸಿದ ಕೇನ್ ವಿಲಿಯಮ್ಸನ್ ಅವರ ನ್ಯೂಜಿಲೆಂಡ್‌ ತಂಡವು 1.6 ಮಿಲಿಯನ್ ಡಾಲರ್ ಗೆ ಬಹುಮಾನ ನೀಡಲಾಗಿತ್ತು” ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಡಬ್ಲ್ಯುಟಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾವು ಅಂದಾಜು 3.72 ಕೋಟಿ ರೂ. ಪಡೆಯಲಿದೆ. ನಾಲ್ಕನೇ ಸ್ಥಾನದಲ್ಲಿ ತಮ್ಮ ಅಭಿಯಾನವನ್ನು ಪೂರ್ಣಗೊಳಿಸಿದ ಇಂಗ್ಲೆಂಡ್ ಅಂದಾಜು 2.9 ಕೋಟಿ ರೂ ಗಳಿಸುತ್ತದೆ.

ಐದನೇ ಸ್ಥಾನ ಗಳಿಸಿದ ಶ್ರೀಲಂಕಾ ಅಂದಾಜು ರೂ 1.65 ಕೋಟಿ ಗಳಿಸಲಿದೆ. ಉಳಿದ ತಂಡಗಳಾದ ನ್ಯೂಜಿಲೆಂಡ್ (ನಂ.6), ಪಾಕಿಸ್ತಾನ (ನಂ.7), ವೆಸ್ಟ್ ಇಂಡೀಸ್ (ನಂ.8), ಮತ್ತು ಬಾಂಗ್ಲಾದೇಶ (ನಂ.9) ತಲಾ $100,000 ಮೊತ್ತವನ್ನು (ಅಂದಾಜು 82.7 ಲಕ್ಷ ರೂ.) ಬಹುಮಾನವಾಗಿ ನೀಡಲಾಗುವುದು” ಎಂದು ಪ್ರಕಟಣೆ ತಿಳಿಸಿದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

11 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

12 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

12 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

14 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

14 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

15 hours ago