ಕ್ರೀಡೆ

WPL 2024: ನಮ್ಮ ಆರ್‌ಸಿಬಿ ಹೊಸ ತಂಡ ಹೀಗಿದೆ ನೋಡಿ

ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್‌)​ ಸೀಸನ್​-2 ಕ್ಕೆ ಸಿದ್ದತೆ ನಡೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಬಲಿಷ್ಠ ತಂಡವನ್ನು ರೂಪಿಸಿದೆ.

ಈ ಬಾರಿಯ ಹರಾಜಿಗೂ ಮುನ್ನ ಆರ್​ಸಿಬಿ ಒಟ್ಟು 11 ಆಟಗಾರ್ತಿಯರನ್ನು ಉಳಿಸಿಕೊಂಡಿದ್ದ ಅರ್‌ಸಿಬಿ, 3.35 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿತು. ಇದರಲ್ಲಿ ಬೆಂಗಳೂರು ಫ್ರಾಂಚೈಸಿಯು 2.3 ಕೋಟಿ ರೂ. ಖರ್ಚು ಮಾಡಿ ಏಳು ಆಟಗಾರ್ತಿಯರನ್ನು ಖರೀದಿಸಿದೆ. ಅಲ್ಲದೆ 1.05 ಕೋಟಿಯನ್ನು ಪರ್ಸ್ ಮೊತ್ತವಾಗಿ ಉಳಿಸಿಕೊಂಡಿದೆ.

ಆರ್​ಸಿಬಿ ಮೊದಲ ಸುತ್ತಿನಲ್ಲೇ ಆಸ್ಟ್ರೇಲಿಯಾ ಆಟಗಾರ್ತಿ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿತು. 40 ಲಕ್ಷ ರೂ.ಗೆ ಸ್ಪಿನ್ನರ್​ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿದ ಬಳಿಕ ಆರ್​ಸಿಬಿ ಮೊದಲ ಸುತ್ತಿನಲ್ಲಿ ಹೆಚ್ಚಿನ ಬಿಡ್​ಗೆ ಆಸಕ್ತಿವಹಿಸಿರಲಿಲ್ಲ. ಆದರೆ ಇಂಗ್ಲೆಂಡ್ ಆಟಗಾರ್ತಿಯ ಕೇಟ್ ಕ್ರಾಸ್ ಹೆಸರು ಬರುತ್ತಿದ್ದಂತೆ ಮತ್ತೆ ಬಿಡ್ಡಿಂಗ್​ಗೆ ಇಳಿದ ಆರ್​ಸಿಬಿ 30 ಲಕ್ಷ ರೂ.ನಲ್ಲಿ ನಲ್ಲಿ ತಂಡಕ್ಕೆ ಸೆಳೆಯಲು ಯಶಸ್ವಿಯಾದರು.

ಇದಾದ ಬಳಿಕ ಟಿ20 ಕ್ರಿಕೆಟ್​ನ ಹ್ಯಾಟ್ರಿಕ್ ವಿಕೆಟ್​ ಸರದಾರಿಣಿ ಏಕ್ತಾ ಬಿಷ್ತ್ ಅವರನ್ನು ಕೊನೆಗೂ 60 ಲಕ್ಷ ರೂ.ಗೆ ತನ್ನದಾಗಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು.

ಇನ್ನು ಆರ್​ಸಿಬಿ ಕರ್ನಾಟಕದ ಆಟಗಾರ್ತಿ ಶುಭಾ ಸತೀಶ್ ಅವರನ್ನು 10 ಲಕ್ಷ ರೂ. ಗೆ ಖರೀದಿಸಿತು. ಆ ಬಳಿಕ ಸಿಮ್ರಾನ್ ಬಹದ್ದೂರ್ (30 ಲಕ್ಷ ರೂ.), ಎಸ್​. ಮೇಘನಾ (30 ಲಕ್ಷ ರೂ.) ಹಾಗೂ ಸೋಫಿ ಮೊಲಿನೆಕ್ಸ್ (30 ಲಕ್ಷ ರೂ.) ಅವರನ್ನು ಖರೀದಿಸಿ ಆರ್​ಸಿಬಿ ತಂಡವು 18 ಸದಸ್ಯರ ಬಳಗದ ಬಲಿಷ್ಠ ತಂಡವನ್ನು ಕಟ್ಟಿತು.

ಆರ್‌ಸಿಬಿ ತಂಡ : ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್ ಕೇಟ್ ಕ್ರಾಸ್, ಏಕ್ತಾ ಬಿಷ್ತ್, ಶುಭಾ ಸತೀಶ್, ಎಸ್​. ಮೇಘನಾ, ಸಿಮ್ರಾನ್ ಬಹದ್ದೂರ್, ಸೋಫಿ ಮೊಲಿನೆಕ್ಸ್​.

andolanait

Recent Posts

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

12 mins ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

1 hour ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

2 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

2 hours ago

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ: ʻಜಿಟಿಡಿʼ

ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…

2 hours ago

ಪಶ್ಚಿಮಘಟ್ಟ: 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶ ಮಿತಿ ಸೂಕ್ತ :ಈಶ್ವರ ಖಂಡ್ರೆ

ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…

2 hours ago