ಕ್ರೀಡೆ

WPL 2024: ನಮ್ಮ ಆರ್‌ಸಿಬಿ ಹೊಸ ತಂಡ ಹೀಗಿದೆ ನೋಡಿ

ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್‌)​ ಸೀಸನ್​-2 ಕ್ಕೆ ಸಿದ್ದತೆ ನಡೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಬಲಿಷ್ಠ ತಂಡವನ್ನು ರೂಪಿಸಿದೆ.

ಈ ಬಾರಿಯ ಹರಾಜಿಗೂ ಮುನ್ನ ಆರ್​ಸಿಬಿ ಒಟ್ಟು 11 ಆಟಗಾರ್ತಿಯರನ್ನು ಉಳಿಸಿಕೊಂಡಿದ್ದ ಅರ್‌ಸಿಬಿ, 3.35 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿತು. ಇದರಲ್ಲಿ ಬೆಂಗಳೂರು ಫ್ರಾಂಚೈಸಿಯು 2.3 ಕೋಟಿ ರೂ. ಖರ್ಚು ಮಾಡಿ ಏಳು ಆಟಗಾರ್ತಿಯರನ್ನು ಖರೀದಿಸಿದೆ. ಅಲ್ಲದೆ 1.05 ಕೋಟಿಯನ್ನು ಪರ್ಸ್ ಮೊತ್ತವಾಗಿ ಉಳಿಸಿಕೊಂಡಿದೆ.

ಆರ್​ಸಿಬಿ ಮೊದಲ ಸುತ್ತಿನಲ್ಲೇ ಆಸ್ಟ್ರೇಲಿಯಾ ಆಟಗಾರ್ತಿ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿತು. 40 ಲಕ್ಷ ರೂ.ಗೆ ಸ್ಪಿನ್ನರ್​ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿದ ಬಳಿಕ ಆರ್​ಸಿಬಿ ಮೊದಲ ಸುತ್ತಿನಲ್ಲಿ ಹೆಚ್ಚಿನ ಬಿಡ್​ಗೆ ಆಸಕ್ತಿವಹಿಸಿರಲಿಲ್ಲ. ಆದರೆ ಇಂಗ್ಲೆಂಡ್ ಆಟಗಾರ್ತಿಯ ಕೇಟ್ ಕ್ರಾಸ್ ಹೆಸರು ಬರುತ್ತಿದ್ದಂತೆ ಮತ್ತೆ ಬಿಡ್ಡಿಂಗ್​ಗೆ ಇಳಿದ ಆರ್​ಸಿಬಿ 30 ಲಕ್ಷ ರೂ.ನಲ್ಲಿ ನಲ್ಲಿ ತಂಡಕ್ಕೆ ಸೆಳೆಯಲು ಯಶಸ್ವಿಯಾದರು.

ಇದಾದ ಬಳಿಕ ಟಿ20 ಕ್ರಿಕೆಟ್​ನ ಹ್ಯಾಟ್ರಿಕ್ ವಿಕೆಟ್​ ಸರದಾರಿಣಿ ಏಕ್ತಾ ಬಿಷ್ತ್ ಅವರನ್ನು ಕೊನೆಗೂ 60 ಲಕ್ಷ ರೂ.ಗೆ ತನ್ನದಾಗಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು.

ಇನ್ನು ಆರ್​ಸಿಬಿ ಕರ್ನಾಟಕದ ಆಟಗಾರ್ತಿ ಶುಭಾ ಸತೀಶ್ ಅವರನ್ನು 10 ಲಕ್ಷ ರೂ. ಗೆ ಖರೀದಿಸಿತು. ಆ ಬಳಿಕ ಸಿಮ್ರಾನ್ ಬಹದ್ದೂರ್ (30 ಲಕ್ಷ ರೂ.), ಎಸ್​. ಮೇಘನಾ (30 ಲಕ್ಷ ರೂ.) ಹಾಗೂ ಸೋಫಿ ಮೊಲಿನೆಕ್ಸ್ (30 ಲಕ್ಷ ರೂ.) ಅವರನ್ನು ಖರೀದಿಸಿ ಆರ್​ಸಿಬಿ ತಂಡವು 18 ಸದಸ್ಯರ ಬಳಗದ ಬಲಿಷ್ಠ ತಂಡವನ್ನು ಕಟ್ಟಿತು.

ಆರ್‌ಸಿಬಿ ತಂಡ : ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್ ಕೇಟ್ ಕ್ರಾಸ್, ಏಕ್ತಾ ಬಿಷ್ತ್, ಶುಭಾ ಸತೀಶ್, ಎಸ್​. ಮೇಘನಾ, ಸಿಮ್ರಾನ್ ಬಹದ್ದೂರ್, ಸೋಫಿ ಮೊಲಿನೆಕ್ಸ್​.

andolanait

Recent Posts

ಅಮೆರಿಕ-ಯುಕೆ ಸೇನಾನೆಲೆ ಮೇಲೆ ಇರಾನ್ ದಾಳಿ‌ ; ವರದಿ

ಟೆಹ್ರಾನ್  : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…

21 mins ago

ಧುರಂಧರ್-‌2 ನಿರಾಶೆ ಮೂಡಿಸಿದೆ : ರಮ್ಯಾ ಪೋಸ್ಟ್‌

ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್‌ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…

39 mins ago

ಸಾಲು ಸಾಲು ಸರಣಿ ರಜೆ : ಮೈಸೂರಿನ ಪ್ರವಾಸಿ ತಾಣಗಳಲ್ಲಿ ಜನಸ್ಥೋಮ

ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…

1 hour ago

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್‌ ಟಿಕೆಟ್‌ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…

2 hours ago

ಜೂಜಾಡುವ ವೇಳೆ ಪೊಲೀಸರ ದಾಳಿ: ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…

2 hours ago

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…

3 hours ago