ಕ್ರೀಡೆ

WPL 2024: ನಮ್ಮ ಆರ್‌ಸಿಬಿ ಹೊಸ ತಂಡ ಹೀಗಿದೆ ನೋಡಿ

ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್‌)​ ಸೀಸನ್​-2 ಕ್ಕೆ ಸಿದ್ದತೆ ನಡೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಬಲಿಷ್ಠ ತಂಡವನ್ನು ರೂಪಿಸಿದೆ.

ಈ ಬಾರಿಯ ಹರಾಜಿಗೂ ಮುನ್ನ ಆರ್​ಸಿಬಿ ಒಟ್ಟು 11 ಆಟಗಾರ್ತಿಯರನ್ನು ಉಳಿಸಿಕೊಂಡಿದ್ದ ಅರ್‌ಸಿಬಿ, 3.35 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿತು. ಇದರಲ್ಲಿ ಬೆಂಗಳೂರು ಫ್ರಾಂಚೈಸಿಯು 2.3 ಕೋಟಿ ರೂ. ಖರ್ಚು ಮಾಡಿ ಏಳು ಆಟಗಾರ್ತಿಯರನ್ನು ಖರೀದಿಸಿದೆ. ಅಲ್ಲದೆ 1.05 ಕೋಟಿಯನ್ನು ಪರ್ಸ್ ಮೊತ್ತವಾಗಿ ಉಳಿಸಿಕೊಂಡಿದೆ.

ಆರ್​ಸಿಬಿ ಮೊದಲ ಸುತ್ತಿನಲ್ಲೇ ಆಸ್ಟ್ರೇಲಿಯಾ ಆಟಗಾರ್ತಿ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿತು. 40 ಲಕ್ಷ ರೂ.ಗೆ ಸ್ಪಿನ್ನರ್​ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿದ ಬಳಿಕ ಆರ್​ಸಿಬಿ ಮೊದಲ ಸುತ್ತಿನಲ್ಲಿ ಹೆಚ್ಚಿನ ಬಿಡ್​ಗೆ ಆಸಕ್ತಿವಹಿಸಿರಲಿಲ್ಲ. ಆದರೆ ಇಂಗ್ಲೆಂಡ್ ಆಟಗಾರ್ತಿಯ ಕೇಟ್ ಕ್ರಾಸ್ ಹೆಸರು ಬರುತ್ತಿದ್ದಂತೆ ಮತ್ತೆ ಬಿಡ್ಡಿಂಗ್​ಗೆ ಇಳಿದ ಆರ್​ಸಿಬಿ 30 ಲಕ್ಷ ರೂ.ನಲ್ಲಿ ನಲ್ಲಿ ತಂಡಕ್ಕೆ ಸೆಳೆಯಲು ಯಶಸ್ವಿಯಾದರು.

ಇದಾದ ಬಳಿಕ ಟಿ20 ಕ್ರಿಕೆಟ್​ನ ಹ್ಯಾಟ್ರಿಕ್ ವಿಕೆಟ್​ ಸರದಾರಿಣಿ ಏಕ್ತಾ ಬಿಷ್ತ್ ಅವರನ್ನು ಕೊನೆಗೂ 60 ಲಕ್ಷ ರೂ.ಗೆ ತನ್ನದಾಗಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು.

ಇನ್ನು ಆರ್​ಸಿಬಿ ಕರ್ನಾಟಕದ ಆಟಗಾರ್ತಿ ಶುಭಾ ಸತೀಶ್ ಅವರನ್ನು 10 ಲಕ್ಷ ರೂ. ಗೆ ಖರೀದಿಸಿತು. ಆ ಬಳಿಕ ಸಿಮ್ರಾನ್ ಬಹದ್ದೂರ್ (30 ಲಕ್ಷ ರೂ.), ಎಸ್​. ಮೇಘನಾ (30 ಲಕ್ಷ ರೂ.) ಹಾಗೂ ಸೋಫಿ ಮೊಲಿನೆಕ್ಸ್ (30 ಲಕ್ಷ ರೂ.) ಅವರನ್ನು ಖರೀದಿಸಿ ಆರ್​ಸಿಬಿ ತಂಡವು 18 ಸದಸ್ಯರ ಬಳಗದ ಬಲಿಷ್ಠ ತಂಡವನ್ನು ಕಟ್ಟಿತು.

ಆರ್‌ಸಿಬಿ ತಂಡ : ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್ ಕೇಟ್ ಕ್ರಾಸ್, ಏಕ್ತಾ ಬಿಷ್ತ್, ಶುಭಾ ಸತೀಶ್, ಎಸ್​. ಮೇಘನಾ, ಸಿಮ್ರಾನ್ ಬಹದ್ದೂರ್, ಸೋಫಿ ಮೊಲಿನೆಕ್ಸ್​.

andolanait

Recent Posts

ನಿಗೂಢ ವಸ್ತು ಸ್ಫೋಟ: 6 ಶಾಲಾ ಮಕ್ಕಳಿಗೆ ಗಂಭೀರ ಗಾಯ

ಬೀದರ್:‌ ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…

58 mins ago

ಮೈಸೂರು| ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದ ಮಾಜಿ ಸಚಿವ ಸಿ.ಟಿ.ರವಿ

ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌…

1 hour ago

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

2 hours ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

2 hours ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

3 hours ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

3 hours ago