ಕ್ರೀಡೆ

WPL 2024: ನಮ್ಮ ಆರ್‌ಸಿಬಿ ಹೊಸ ತಂಡ ಹೀಗಿದೆ ನೋಡಿ

ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್‌)​ ಸೀಸನ್​-2 ಕ್ಕೆ ಸಿದ್ದತೆ ನಡೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಬಲಿಷ್ಠ ತಂಡವನ್ನು ರೂಪಿಸಿದೆ.

ಈ ಬಾರಿಯ ಹರಾಜಿಗೂ ಮುನ್ನ ಆರ್​ಸಿಬಿ ಒಟ್ಟು 11 ಆಟಗಾರ್ತಿಯರನ್ನು ಉಳಿಸಿಕೊಂಡಿದ್ದ ಅರ್‌ಸಿಬಿ, 3.35 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿತು. ಇದರಲ್ಲಿ ಬೆಂಗಳೂರು ಫ್ರಾಂಚೈಸಿಯು 2.3 ಕೋಟಿ ರೂ. ಖರ್ಚು ಮಾಡಿ ಏಳು ಆಟಗಾರ್ತಿಯರನ್ನು ಖರೀದಿಸಿದೆ. ಅಲ್ಲದೆ 1.05 ಕೋಟಿಯನ್ನು ಪರ್ಸ್ ಮೊತ್ತವಾಗಿ ಉಳಿಸಿಕೊಂಡಿದೆ.

ಆರ್​ಸಿಬಿ ಮೊದಲ ಸುತ್ತಿನಲ್ಲೇ ಆಸ್ಟ್ರೇಲಿಯಾ ಆಟಗಾರ್ತಿ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿತು. 40 ಲಕ್ಷ ರೂ.ಗೆ ಸ್ಪಿನ್ನರ್​ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿದ ಬಳಿಕ ಆರ್​ಸಿಬಿ ಮೊದಲ ಸುತ್ತಿನಲ್ಲಿ ಹೆಚ್ಚಿನ ಬಿಡ್​ಗೆ ಆಸಕ್ತಿವಹಿಸಿರಲಿಲ್ಲ. ಆದರೆ ಇಂಗ್ಲೆಂಡ್ ಆಟಗಾರ್ತಿಯ ಕೇಟ್ ಕ್ರಾಸ್ ಹೆಸರು ಬರುತ್ತಿದ್ದಂತೆ ಮತ್ತೆ ಬಿಡ್ಡಿಂಗ್​ಗೆ ಇಳಿದ ಆರ್​ಸಿಬಿ 30 ಲಕ್ಷ ರೂ.ನಲ್ಲಿ ನಲ್ಲಿ ತಂಡಕ್ಕೆ ಸೆಳೆಯಲು ಯಶಸ್ವಿಯಾದರು.

ಇದಾದ ಬಳಿಕ ಟಿ20 ಕ್ರಿಕೆಟ್​ನ ಹ್ಯಾಟ್ರಿಕ್ ವಿಕೆಟ್​ ಸರದಾರಿಣಿ ಏಕ್ತಾ ಬಿಷ್ತ್ ಅವರನ್ನು ಕೊನೆಗೂ 60 ಲಕ್ಷ ರೂ.ಗೆ ತನ್ನದಾಗಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು.

ಇನ್ನು ಆರ್​ಸಿಬಿ ಕರ್ನಾಟಕದ ಆಟಗಾರ್ತಿ ಶುಭಾ ಸತೀಶ್ ಅವರನ್ನು 10 ಲಕ್ಷ ರೂ. ಗೆ ಖರೀದಿಸಿತು. ಆ ಬಳಿಕ ಸಿಮ್ರಾನ್ ಬಹದ್ದೂರ್ (30 ಲಕ್ಷ ರೂ.), ಎಸ್​. ಮೇಘನಾ (30 ಲಕ್ಷ ರೂ.) ಹಾಗೂ ಸೋಫಿ ಮೊಲಿನೆಕ್ಸ್ (30 ಲಕ್ಷ ರೂ.) ಅವರನ್ನು ಖರೀದಿಸಿ ಆರ್​ಸಿಬಿ ತಂಡವು 18 ಸದಸ್ಯರ ಬಳಗದ ಬಲಿಷ್ಠ ತಂಡವನ್ನು ಕಟ್ಟಿತು.

ಆರ್‌ಸಿಬಿ ತಂಡ : ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್ ಕೇಟ್ ಕ್ರಾಸ್, ಏಕ್ತಾ ಬಿಷ್ತ್, ಶುಭಾ ಸತೀಶ್, ಎಸ್​. ಮೇಘನಾ, ಸಿಮ್ರಾನ್ ಬಹದ್ದೂರ್, ಸೋಫಿ ಮೊಲಿನೆಕ್ಸ್​.

andolanait

Recent Posts

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

8 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

10 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

12 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

14 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

17 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

17 hours ago