ಕ್ರೀಡೆ

WPL 2024: ನಮ್ಮ ಆರ್‌ಸಿಬಿ ಹೊಸ ತಂಡ ಹೀಗಿದೆ ನೋಡಿ

ವುಮೆನ್ಸ್ ಪ್ರೀಮಿಯರ್ ಲೀಗ್(ಡಬ್ಲ್ಯೂಪಿಎಲ್‌)​ ಸೀಸನ್​-2 ಕ್ಕೆ ಸಿದ್ದತೆ ನಡೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಬಲಿಷ್ಠ ತಂಡವನ್ನು ರೂಪಿಸಿದೆ.

ಈ ಬಾರಿಯ ಹರಾಜಿಗೂ ಮುನ್ನ ಆರ್​ಸಿಬಿ ಒಟ್ಟು 11 ಆಟಗಾರ್ತಿಯರನ್ನು ಉಳಿಸಿಕೊಂಡಿದ್ದ ಅರ್‌ಸಿಬಿ, 3.35 ಕೋಟಿ ರೂ.ನೊಂದಿಗೆ ಹರಾಜಿನಲ್ಲಿ ಕಾಣಿಸಿಕೊಂಡಿತು. ಇದರಲ್ಲಿ ಬೆಂಗಳೂರು ಫ್ರಾಂಚೈಸಿಯು 2.3 ಕೋಟಿ ರೂ. ಖರ್ಚು ಮಾಡಿ ಏಳು ಆಟಗಾರ್ತಿಯರನ್ನು ಖರೀದಿಸಿದೆ. ಅಲ್ಲದೆ 1.05 ಕೋಟಿಯನ್ನು ಪರ್ಸ್ ಮೊತ್ತವಾಗಿ ಉಳಿಸಿಕೊಂಡಿದೆ.

ಆರ್​ಸಿಬಿ ಮೊದಲ ಸುತ್ತಿನಲ್ಲೇ ಆಸ್ಟ್ರೇಲಿಯಾ ಆಟಗಾರ್ತಿ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿತು. 40 ಲಕ್ಷ ರೂ.ಗೆ ಸ್ಪಿನ್ನರ್​ ಜಾರ್ಜಿಯಾ ವೇರ್ಹ್ಯಾಮ್ ಅವರನ್ನು ಖರೀದಿಸಿದ ಬಳಿಕ ಆರ್​ಸಿಬಿ ಮೊದಲ ಸುತ್ತಿನಲ್ಲಿ ಹೆಚ್ಚಿನ ಬಿಡ್​ಗೆ ಆಸಕ್ತಿವಹಿಸಿರಲಿಲ್ಲ. ಆದರೆ ಇಂಗ್ಲೆಂಡ್ ಆಟಗಾರ್ತಿಯ ಕೇಟ್ ಕ್ರಾಸ್ ಹೆಸರು ಬರುತ್ತಿದ್ದಂತೆ ಮತ್ತೆ ಬಿಡ್ಡಿಂಗ್​ಗೆ ಇಳಿದ ಆರ್​ಸಿಬಿ 30 ಲಕ್ಷ ರೂ.ನಲ್ಲಿ ನಲ್ಲಿ ತಂಡಕ್ಕೆ ಸೆಳೆಯಲು ಯಶಸ್ವಿಯಾದರು.

ಇದಾದ ಬಳಿಕ ಟಿ20 ಕ್ರಿಕೆಟ್​ನ ಹ್ಯಾಟ್ರಿಕ್ ವಿಕೆಟ್​ ಸರದಾರಿಣಿ ಏಕ್ತಾ ಬಿಷ್ತ್ ಅವರನ್ನು ಕೊನೆಗೂ 60 ಲಕ್ಷ ರೂ.ಗೆ ತನ್ನದಾಗಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು.

ಇನ್ನು ಆರ್​ಸಿಬಿ ಕರ್ನಾಟಕದ ಆಟಗಾರ್ತಿ ಶುಭಾ ಸತೀಶ್ ಅವರನ್ನು 10 ಲಕ್ಷ ರೂ. ಗೆ ಖರೀದಿಸಿತು. ಆ ಬಳಿಕ ಸಿಮ್ರಾನ್ ಬಹದ್ದೂರ್ (30 ಲಕ್ಷ ರೂ.), ಎಸ್​. ಮೇಘನಾ (30 ಲಕ್ಷ ರೂ.) ಹಾಗೂ ಸೋಫಿ ಮೊಲಿನೆಕ್ಸ್ (30 ಲಕ್ಷ ರೂ.) ಅವರನ್ನು ಖರೀದಿಸಿ ಆರ್​ಸಿಬಿ ತಂಡವು 18 ಸದಸ್ಯರ ಬಳಗದ ಬಲಿಷ್ಠ ತಂಡವನ್ನು ಕಟ್ಟಿತು.

ಆರ್‌ಸಿಬಿ ತಂಡ : ಸ್ಮೃತಿ ಮಂಧಾನ (ನಾಯಕಿ), ಆಶಾ ಶೋಬನಾ, ದಿಶಾ ಕಸತ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ಇಂದ್ರಾಣಿ ರಾಯ್, ಕನಿಕಾ ಅಹುಜಾ, ರೇಣುಕಾ ಸಿಂಗ್, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಸೋಫಿ ಡಿವೈನ್, ಜಾರ್ಜಿಯಾ ವೇರ್ಹ್ಯಾಮ್ ಕೇಟ್ ಕ್ರಾಸ್, ಏಕ್ತಾ ಬಿಷ್ತ್, ಶುಭಾ ಸತೀಶ್, ಎಸ್​. ಮೇಘನಾ, ಸಿಮ್ರಾನ್ ಬಹದ್ದೂರ್, ಸೋಫಿ ಮೊಲಿನೆಕ್ಸ್​.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

3 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

5 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

6 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

6 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

7 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

8 hours ago