ಕ್ರೀಡೆ

WPL 2024 finals: ಡಬ್ಲ್ಯೂಪಿಎಲ್‌ ಸೀಸನ್‌ 2ರ ಚಾಂಪಿಯನ್‌ಪಟ್ಟ ಅಲಂಕರಿಸಿದ ಆರ್‌ಸಿಬಿ

ನವದೆಹಲಿ: ಕನ್ನಡತಿ ಶ್ರೇಯಾಂಕ್‌ ಪಾಟಿಲ್‌ (12/4), ಎಲಿಸ್‌ ಪೆರ್ರಿ (35) ಅಮೋಘ ಪ್ರದರ್ಶನದ ಸಹಾಯದಿಂದ ಆರ್‌ಸಿಬಿ ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿ ಡಬ್ಲ್ಯೂಪಿಎಲ್‌ ಟ್ರೋಫಿಗೆ ಮುತ್ತಿಟ್ಟಿದೆ. ಆ ಮೂಲಕ ಸೀಸನ್‌ 2ರ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ನಡೆದ ಡಬ್ಲ್ಯೂಪಿಎಲ್‌ ಸೀಸನ್‌ 2ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ನೀಡಿದ್ದ 113 ರನ್‌ ಗುರಿಯನ್ನು ಬೆನ್ನತ್ತಿದ ಆರ್‌ಸಿಬಿ 19.3 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 115 ರನ್‌ ಕಲೆಹಾಕಿ ಗೆಲುವಿನ ನಗೆ ಬೀರಿತು.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ ನಾಯಕಿ ಲ್ಯಾನಿಂಗ್ ಹಾಗೂ ಶಫಾಲಿ ವರ್ಮಾ ಮೊದಲ ಉತ್ತಮ ಜೊತೆಯಾಟ ನೀಡಿದರು. ಲ್ಯಾನಿಂಗ್ (23)ರನ್‌ಗೆ ಆಟ ಮುಗಿಸಿದರು. ಶಫಾಲಿ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 44 ರನ್​ ಬಾರಿಸಿ ನಿರ್ಗಮಿಸಿದರು. ನಂತರ ಬಂದ ಜೆಮಿಮಾ ರಾಡ್ರಿಗಸ್ ಖಾತೆ ತೆರೆಯದೆ ಹಿಂದಿರುಗಿದರು. ಆಲಿಸ್ ಕ್ಯಾಪ್ಸಿ ಕೂಡ ಶೂನ್ಯಕ್ಕೆ ಪೆವಿಲಿಯನ್ ಹಾದಿ ಹಿಡಿದರು. ಸೋಫಿ ಮೊಲಿನೆಕ್ಸ್ ಒಂದೇ ಓವರ್​ನಲ್ಲಿ 3 ವಿಕೆಟ್ ಕಬಳಿಸಿ ಡೆಲ್ಲಿ ತಂಡಕ್ಕೆ ಆಘಾತ ನೀಡಿದರು. ಆರ್‌ಸಿಬಿ ಸಂಘಟಿತ ಬೌಲಿಂಗ್‌ ಡೆಲ್ಲಿಯನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಡೆಲ್ಲಿ 18.3 ಓವರ್​ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿತು.

ಆರ್​ಸಿಬಿ ಪರ ಬೌಲಿಂಗ್​ನಲ್ಲಿ ಮಿಂಚಿದ ಕನ್ನಡತಿ ಶ್ರೇಯಾಂಕ ಪಾಟೀಲ್ 4 ವಿಕೆಟ್ ಪಡೆದರೆ, ಸೋಫಿ ಮೊಲಿನೆಕ್ಸ್ 3 ಹಾಗೂ ಆಶಾ ಶೋಭನಾ 2 ವಿಕೆಟ್ ಪಡೆದರು.

ಇನ್ನು ಈ ಸಾಧಾರಣ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ಉತ್ತಮ ಆರಂಭ ದೊರೆಯಿತು. ಸೋಫಿ ಡಿವೈನ್‌ (32) ಶಿಕಾ ಪಾಂಡೆ ಎಲ್‌ಬಿಡಬ್ಲ್ಯೂ ಬಲೆಗೆ ಡಿವೈನ್‌ ಬಿದ್ದರು. ನಾಯಕಿ ಸ್ಮೃತಿ ಮಂದನಾ (31) ರನ್‌ ಕಲೆಹಾಕಿ ಮಿನ್ನು ಮಣಿಗೆ ವಿಕೆಟ್‌ ಒಪ್ಪಸಿ ಹೊರನಡೆದರು. ನಂತರ ಬಂದ ಭರವಸೆಯ ಆಟಗಾರ್ತಿ ಎಲಿಸ್‌ ಪರ್ರಿ ಹಾಗೂ ರಿಚಾ ಘೋಷ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಈ ಇಬ್ಬರು ಆಟಗಾರ್ತಿಯರು ತಲಾ (35) ಮತ್ತು (17) ರನ್‌ ಕಲೆಹಾಕಿದರು.

ಡೆಲ್ಲಿ ಪರ ಶೀಖಾ ಪಾಂಡೆ ಮತ್ತು ಮಿನ್ನು ಮಣಿ ತಲಾ ಒಂದೊಂದು ವಿಕೆಟ್‌ ಪಡೆದರು.

ಡಬ್ಲ್ಯೂಪಿಎಲ್‌ ಸೀಸನ್‌ 2ರ ಪ್ರಮುಖಾಂಶಗಳು:

ವಿನ್ನರ್ಸ್‌:  ಆರ್‌ಸಿಬಿ ( ನಗದು 6 ಕೋಟಿ)

ರನ್ನರ್ಸ್‌ : ಡೆಲ್ಲಿ (ನಗದು 3 ಕೋಟಿ)

ಆರೆಂಜ್‌ ಕ್ಯಾಪ್‌: ಎಲ್ಲಿಸ್‌ ಪೆರ್ರಿ (347 ರನ್‌)
ಪರ್ಪಲ್‌ ಕ್ಯಾಪ್‌: ಶ್ರೇಯಾಂಕ ಪಾಟೀಲ್ (13 ವಿಕೆಟ್‌)

ಪಂದ್ಯ ಶ್ರೇಷ್ಠ: ಸೋಫಿ ಮೋಲಿನ್
ಸರಣಿ ಶ್ರೇಷ್ಠ: ದೀಪ್ತಿ ಶರ್ಮಾ

ಉದಯೋನ್ಮುಕ ಆಟಗಾರ್ತಿ: ಶ್ರೇಯಾಂಕ ಪಾಟೀಲ್‌
ಫೇರ್‌ ಪ್ಲೇ ಅವಾರ್ಡ್‌: ಆರ್‌ಸಿಬಿ

andolanait

Recent Posts

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ ಕಾಮಗಾರಿ ಶುರು

ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…

3 mins ago

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ: ಕೇಂದ್ರ ಸಚಿವರಿಗೆ ಪತ್ರ ಬರೆದ ಶ್ರೀರಾಮುಲು

ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೇಂದ್ರ…

6 mins ago

ದಿ ಕೇರಳ ಸ್ಟೋರಿ 2 ಚಿತ್ರ ಬಿಡುಗಡೆಗೆ ಕೇರಳ ಹೈಕೋರ್ಟ್‌ ತಡೆ

ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್‌ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್‌, ಗುರುವಾರ…

37 mins ago

ಹಾಸನ| ರಸ್ತೆಯಲ್ಲಿ ಸಿಕ್ಕ ಚಿನ್ನದ ಸರ: ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಬಸ್‌ ಚಾಲಕ

ಹಾಸನ: ಕೆಎಸ್‌ಆರ್‌ಟಿಸಿ ಬಸ್‌ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ…

40 mins ago

ನಾಳೆ ವಿಜಯಪುರದಲ್ಲಿ ಜೆಡಿಎಸ್‌ ಶಕ್ತಿ ಪ್ರದರ್ಶನ

ಬೆಂಗಳೂರು: ಹಾಸನದ ಮಾದರಿಯಲ್ಲೇ ವಿಜಯಪುರ ನಗರದಲ್ಲಿ ನಾಳೆ ಜೆಡಿಎಸ್ ರಜತ ಮಹೋತ್ಸವ ಆಚರಿಸುವ ಮೂಲಕ ಮತ್ತೊಂದು ಶಕ್ತಿ ಪ್ರದರ್ಶನವನ್ನು ನಡೆಸಲಿದೆ.…

59 mins ago

ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಲಾಬಿಯನ್ನು ಮಾಡುತ್ತಿಲ್ಲ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗಾಗಿ ಯಾವುದೇ ಲಾಬಿಯನ್ನು ಮಾಡುತ್ತಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ…

1 hour ago