ನವದೆಹಲಿ: ಕನ್ನಡತಿ ಶ್ರೇಯಾಂಕ್ ಪಾಟಿಲ್ (12/4), ಎಲಿಸ್ ಪೆರ್ರಿ (35) ಅಮೋಘ ಪ್ರದರ್ಶನದ ಸಹಾಯದಿಂದ ಆರ್ಸಿಬಿ ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್ಗಳ ಅಂತರದಿಂದ ಸೋಲಿಸಿ ಡಬ್ಲ್ಯೂಪಿಎಲ್ ಟ್ರೋಫಿಗೆ ಮುತ್ತಿಟ್ಟಿದೆ. ಆ ಮೂಲಕ ಸೀಸನ್ 2ರ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದ ಡಬ್ಲ್ಯೂಪಿಎಲ್ ಸೀಸನ್ 2ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ನೀಡಿದ್ದ 113 ರನ್ ಗುರಿಯನ್ನು ಬೆನ್ನತ್ತಿದ ಆರ್ಸಿಬಿ 19.3 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 115 ರನ್ ಕಲೆಹಾಕಿ ಗೆಲುವಿನ ನಗೆ ಬೀರಿತು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿಗೆ ನಾಯಕಿ ಲ್ಯಾನಿಂಗ್ ಹಾಗೂ ಶಫಾಲಿ ವರ್ಮಾ ಮೊದಲ ಉತ್ತಮ ಜೊತೆಯಾಟ ನೀಡಿದರು. ಲ್ಯಾನಿಂಗ್ (23)ರನ್ಗೆ ಆಟ ಮುಗಿಸಿದರು. ಶಫಾಲಿ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 44 ರನ್ ಬಾರಿಸಿ ನಿರ್ಗಮಿಸಿದರು. ನಂತರ ಬಂದ ಜೆಮಿಮಾ ರಾಡ್ರಿಗಸ್ ಖಾತೆ ತೆರೆಯದೆ ಹಿಂದಿರುಗಿದರು. ಆಲಿಸ್ ಕ್ಯಾಪ್ಸಿ ಕೂಡ ಶೂನ್ಯಕ್ಕೆ ಪೆವಿಲಿಯನ್ ಹಾದಿ ಹಿಡಿದರು. ಸೋಫಿ ಮೊಲಿನೆಕ್ಸ್ ಒಂದೇ ಓವರ್ನಲ್ಲಿ 3 ವಿಕೆಟ್ ಕಬಳಿಸಿ ಡೆಲ್ಲಿ ತಂಡಕ್ಕೆ ಆಘಾತ ನೀಡಿದರು. ಆರ್ಸಿಬಿ ಸಂಘಟಿತ ಬೌಲಿಂಗ್ ಡೆಲ್ಲಿಯನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಡೆಲ್ಲಿ 18.3 ಓವರ್ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿತು.
ಆರ್ಸಿಬಿ ಪರ ಬೌಲಿಂಗ್ನಲ್ಲಿ ಮಿಂಚಿದ ಕನ್ನಡತಿ ಶ್ರೇಯಾಂಕ ಪಾಟೀಲ್ 4 ವಿಕೆಟ್ ಪಡೆದರೆ, ಸೋಫಿ ಮೊಲಿನೆಕ್ಸ್ 3 ಹಾಗೂ ಆಶಾ ಶೋಭನಾ 2 ವಿಕೆಟ್ ಪಡೆದರು.
ಇನ್ನು ಈ ಸಾಧಾರಣ ಮೊತ್ತ ಬೆನ್ನತ್ತಿದ ಆರ್ಸಿಬಿಗೆ ಉತ್ತಮ ಆರಂಭ ದೊರೆಯಿತು. ಸೋಫಿ ಡಿವೈನ್ (32) ಶಿಕಾ ಪಾಂಡೆ ಎಲ್ಬಿಡಬ್ಲ್ಯೂ ಬಲೆಗೆ ಡಿವೈನ್ ಬಿದ್ದರು. ನಾಯಕಿ ಸ್ಮೃತಿ ಮಂದನಾ (31) ರನ್ ಕಲೆಹಾಕಿ ಮಿನ್ನು ಮಣಿಗೆ ವಿಕೆಟ್ ಒಪ್ಪಸಿ ಹೊರನಡೆದರು. ನಂತರ ಬಂದ ಭರವಸೆಯ ಆಟಗಾರ್ತಿ ಎಲಿಸ್ ಪರ್ರಿ ಹಾಗೂ ರಿಚಾ ಘೋಷ್ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಈ ಇಬ್ಬರು ಆಟಗಾರ್ತಿಯರು ತಲಾ (35) ಮತ್ತು (17) ರನ್ ಕಲೆಹಾಕಿದರು.
ಡೆಲ್ಲಿ ಪರ ಶೀಖಾ ಪಾಂಡೆ ಮತ್ತು ಮಿನ್ನು ಮಣಿ ತಲಾ ಒಂದೊಂದು ವಿಕೆಟ್ ಪಡೆದರು.
ಡಬ್ಲ್ಯೂಪಿಎಲ್ ಸೀಸನ್ 2ರ ಪ್ರಮುಖಾಂಶಗಳು:
ವಿನ್ನರ್ಸ್: ಆರ್ಸಿಬಿ ( ನಗದು 6 ಕೋಟಿ)
ರನ್ನರ್ಸ್ : ಡೆಲ್ಲಿ (ನಗದು 3 ಕೋಟಿ)
ಆರೆಂಜ್ ಕ್ಯಾಪ್: ಎಲ್ಲಿಸ್ ಪೆರ್ರಿ (347 ರನ್)
ಪರ್ಪಲ್ ಕ್ಯಾಪ್: ಶ್ರೇಯಾಂಕ ಪಾಟೀಲ್ (13 ವಿಕೆಟ್)
ಪಂದ್ಯ ಶ್ರೇಷ್ಠ: ಸೋಫಿ ಮೋಲಿನ್
ಸರಣಿ ಶ್ರೇಷ್ಠ: ದೀಪ್ತಿ ಶರ್ಮಾ
ಉದಯೋನ್ಮುಕ ಆಟಗಾರ್ತಿ: ಶ್ರೇಯಾಂಕ ಪಾಟೀಲ್
ಫೇರ್ ಪ್ಲೇ ಅವಾರ್ಡ್: ಆರ್ಸಿಬಿ
ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್ ಅವರ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…
ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದಲ್ಲಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದೂರಾಡಳಿತವನ್ನು ಅಂತ್ಯಗೊಳಿಸಿ ರಾಜ್ಯದಲ್ಲಿ ಬಿಜೆಪಿ…
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆದಷ್ಟು ಶೀಘ್ರವಾಗಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ…
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ…