ಕ್ರೀಡೆ

WPL 2024 finals: ಡಬ್ಲ್ಯೂಪಿಎಲ್‌ ಸೀಸನ್‌ 2ರ ಚಾಂಪಿಯನ್‌ಪಟ್ಟ ಅಲಂಕರಿಸಿದ ಆರ್‌ಸಿಬಿ

ನವದೆಹಲಿ: ಕನ್ನಡತಿ ಶ್ರೇಯಾಂಕ್‌ ಪಾಟಿಲ್‌ (12/4), ಎಲಿಸ್‌ ಪೆರ್ರಿ (35) ಅಮೋಘ ಪ್ರದರ್ಶನದ ಸಹಾಯದಿಂದ ಆರ್‌ಸಿಬಿ ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು 8 ವಿಕೆಟ್‌ಗಳ ಅಂತರದಿಂದ ಸೋಲಿಸಿ ಡಬ್ಲ್ಯೂಪಿಎಲ್‌ ಟ್ರೋಫಿಗೆ ಮುತ್ತಿಟ್ಟಿದೆ. ಆ ಮೂಲಕ ಸೀಸನ್‌ 2ರ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ನಡೆದ ಡಬ್ಲ್ಯೂಪಿಎಲ್‌ ಸೀಸನ್‌ 2ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ನೀಡಿದ್ದ 113 ರನ್‌ ಗುರಿಯನ್ನು ಬೆನ್ನತ್ತಿದ ಆರ್‌ಸಿಬಿ 19.3 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 115 ರನ್‌ ಕಲೆಹಾಕಿ ಗೆಲುವಿನ ನಗೆ ಬೀರಿತು.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿಗೆ ನಾಯಕಿ ಲ್ಯಾನಿಂಗ್ ಹಾಗೂ ಶಫಾಲಿ ವರ್ಮಾ ಮೊದಲ ಉತ್ತಮ ಜೊತೆಯಾಟ ನೀಡಿದರು. ಲ್ಯಾನಿಂಗ್ (23)ರನ್‌ಗೆ ಆಟ ಮುಗಿಸಿದರು. ಶಫಾಲಿ 27 ಎಸೆತಗಳಲ್ಲಿ 2 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 44 ರನ್​ ಬಾರಿಸಿ ನಿರ್ಗಮಿಸಿದರು. ನಂತರ ಬಂದ ಜೆಮಿಮಾ ರಾಡ್ರಿಗಸ್ ಖಾತೆ ತೆರೆಯದೆ ಹಿಂದಿರುಗಿದರು. ಆಲಿಸ್ ಕ್ಯಾಪ್ಸಿ ಕೂಡ ಶೂನ್ಯಕ್ಕೆ ಪೆವಿಲಿಯನ್ ಹಾದಿ ಹಿಡಿದರು. ಸೋಫಿ ಮೊಲಿನೆಕ್ಸ್ ಒಂದೇ ಓವರ್​ನಲ್ಲಿ 3 ವಿಕೆಟ್ ಕಬಳಿಸಿ ಡೆಲ್ಲಿ ತಂಡಕ್ಕೆ ಆಘಾತ ನೀಡಿದರು. ಆರ್‌ಸಿಬಿ ಸಂಘಟಿತ ಬೌಲಿಂಗ್‌ ಡೆಲ್ಲಿಯನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಡೆಲ್ಲಿ 18.3 ಓವರ್​ಗಳಲ್ಲಿ ತನ್ನೇಲ್ಲಾ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಿತು.

ಆರ್​ಸಿಬಿ ಪರ ಬೌಲಿಂಗ್​ನಲ್ಲಿ ಮಿಂಚಿದ ಕನ್ನಡತಿ ಶ್ರೇಯಾಂಕ ಪಾಟೀಲ್ 4 ವಿಕೆಟ್ ಪಡೆದರೆ, ಸೋಫಿ ಮೊಲಿನೆಕ್ಸ್ 3 ಹಾಗೂ ಆಶಾ ಶೋಭನಾ 2 ವಿಕೆಟ್ ಪಡೆದರು.

ಇನ್ನು ಈ ಸಾಧಾರಣ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ಉತ್ತಮ ಆರಂಭ ದೊರೆಯಿತು. ಸೋಫಿ ಡಿವೈನ್‌ (32) ಶಿಕಾ ಪಾಂಡೆ ಎಲ್‌ಬಿಡಬ್ಲ್ಯೂ ಬಲೆಗೆ ಡಿವೈನ್‌ ಬಿದ್ದರು. ನಾಯಕಿ ಸ್ಮೃತಿ ಮಂದನಾ (31) ರನ್‌ ಕಲೆಹಾಕಿ ಮಿನ್ನು ಮಣಿಗೆ ವಿಕೆಟ್‌ ಒಪ್ಪಸಿ ಹೊರನಡೆದರು. ನಂತರ ಬಂದ ಭರವಸೆಯ ಆಟಗಾರ್ತಿ ಎಲಿಸ್‌ ಪರ್ರಿ ಹಾಗೂ ರಿಚಾ ಘೋಷ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಈ ಇಬ್ಬರು ಆಟಗಾರ್ತಿಯರು ತಲಾ (35) ಮತ್ತು (17) ರನ್‌ ಕಲೆಹಾಕಿದರು.

ಡೆಲ್ಲಿ ಪರ ಶೀಖಾ ಪಾಂಡೆ ಮತ್ತು ಮಿನ್ನು ಮಣಿ ತಲಾ ಒಂದೊಂದು ವಿಕೆಟ್‌ ಪಡೆದರು.

ಡಬ್ಲ್ಯೂಪಿಎಲ್‌ ಸೀಸನ್‌ 2ರ ಪ್ರಮುಖಾಂಶಗಳು:

ವಿನ್ನರ್ಸ್‌:  ಆರ್‌ಸಿಬಿ ( ನಗದು 6 ಕೋಟಿ)

ರನ್ನರ್ಸ್‌ : ಡೆಲ್ಲಿ (ನಗದು 3 ಕೋಟಿ)

ಆರೆಂಜ್‌ ಕ್ಯಾಪ್‌: ಎಲ್ಲಿಸ್‌ ಪೆರ್ರಿ (347 ರನ್‌)
ಪರ್ಪಲ್‌ ಕ್ಯಾಪ್‌: ಶ್ರೇಯಾಂಕ ಪಾಟೀಲ್ (13 ವಿಕೆಟ್‌)

ಪಂದ್ಯ ಶ್ರೇಷ್ಠ: ಸೋಫಿ ಮೋಲಿನ್
ಸರಣಿ ಶ್ರೇಷ್ಠ: ದೀಪ್ತಿ ಶರ್ಮಾ

ಉದಯೋನ್ಮುಕ ಆಟಗಾರ್ತಿ: ಶ್ರೇಯಾಂಕ ಪಾಟೀಲ್‌
ಫೇರ್‌ ಪ್ಲೇ ಅವಾರ್ಡ್‌: ಆರ್‌ಸಿಬಿ

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago