ಕ್ರೀಡೆ

WPL-2024: ಟೂರ್ನಿಯಲ್ಲಿ ಮೊದಲ ಸೋಲು ಕಂಡ ಆರ್‌ಸಿಬಿ!

ಬೆಂಗಳೂರು: ಮೆರಿಜಾನ್ನೆ ಅವರ ಅಲ್‌ರೌಂಡರ್‌ ಆಟದ ನೆರವಿನಿಂದ ಅತಿಥೇಯ ಆರ್‌ಸಿಬಿ ತಂಡವನ್ನು ತವರಿನಂಗಳದಲ್ಲಿ ಸೋಲಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಯಶಸ್ವಿಯಾಗಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಸೋಲುವ ಮೂಲಕ ಆರ್‌ಸಿಬಿ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿಗೆ 195 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಇತ್ತ ಬಿಗ್ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ತಂಡ ಕೊನೆಯವರೆಗೂ ಗೆಲುವಿಗಾಗಿ ಹೋರಾಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಆ ಮೂಲಕ 25 ರನ್‌ಗಳ ಅಂತರದ ಸೋಲು ಕಂಡಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ನಾಯಕಿ ಮೆಗ್ ಲ್ಯಾನಿಂಗ್ 11 ಕಲೆ ಹಾಕಿದರೆ, ಶಫಾಲಿ ವರ್ಮಾ 31 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ಸಹಿತ ಅರ್ಧಶತಕ ಸಿಡಿಸಿದರು. ಆಲಿಸ್ ಕ್ಯಾಪ್ಸಿ ಕೂಡ 46 ರನ್​ಗಳ ಉತ್ತಮ ಜೊತೆಯಾಟ ಆಡಿದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಮರಿಜಾನ್ನೆ ಕೆಪ್ ಹಾಗೂ ಜೆಸ್ ಜೊನಾಸೆನ್ ತಲಾ 16 ಎಸೆತಗಳಲ್ಲಿ ಕ್ರಮವಾಗಿ 32 ಹಾಗೂ 36 ರನ್ ಕಲೆಹಾಕಿ ತಂಡವನ್ನು ಬೃಹತ್ 195ರ ಗಡಿ ತಲುಪಿಸಿದರು.

ಆರ್‌ಸಿಬಿ ಪರ ಡಿವೈನ್‌ ಮತ್ತು ಕ್ಲಾರ್ಕ್‌ ತಲಾ 2 ವಿಕೆಟ್‌ ಪಡೆದರು.

ಈ ಬೃಹತ್‌ ಮೊತ್ತ ಬೆನ್ನತ್ತಿದ್ದ ಆರ್‌ಸಿಬಿ ಮತ್ತೊಮ್ಮೆ ನಿರಾಸೆ ಉಂಟಾಯಿತು. ನಾಯಕಿ ಸ್ಮೃತಿ ಮಂದನಾ ಅವರ ಏಕಾಂಗಿ ಹೋರಾಟ ತಂಡವನ್ನು ಗೆಲುವಿನ ದಡ ಕೊಂಡ್ಯೊಯ್ಯಲು ಸಾಧ್ಯವಾಗಲಿಲ್ಲ. ನಾಯಕಿ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಕಲೆಹಾಕಿ ತಮ್ಮ ಇನ್ನಿಂಗ್ಸ್‌ ಮೂಲಕ ಗಮನ ಸೆಳೆದರು.

ಮೇಘನಾ 36, ಡಿವೈನ್‌ವ23 ಮತ್ತು ರಿಚಾ ಘೋಷ್‌ 19 ಹೊರತು ಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ತಂಡ ಮಧ್ಯಮ ಕ್ರಮಾಂಕದಲ್ಲಿ ಎಡವಿದ ಕಾರಣ ಈ ಟೂರ್ನಿಯಲ್ಲಿ ತನ್ನ ಮೊದಲ ಸೋಲನ್ನು ಎದುರಿಸಬೇಕಾಯಿತು.

ಡೆಲ್ಲಿ ಪರ ಜೆಸ್ ಜೊನಾಸೆನ್ 3, ಮರಿಜಾನ್ನೆ ಕೆಪ್ ಮತ್ತು ಅರುಂಧತಿ ರೆಡ್ಡಿ ತಲಾ 2 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಮರಿಜಾನ್ನೆ ಕೆಪ್

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

1 hour ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

1 hour ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

2 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

2 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

2 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

2 hours ago