ಕ್ರೀಡೆ

WPL-2024: ಟೂರ್ನಿಯಲ್ಲಿ ಮೊದಲ ಸೋಲು ಕಂಡ ಆರ್‌ಸಿಬಿ!

ಬೆಂಗಳೂರು: ಮೆರಿಜಾನ್ನೆ ಅವರ ಅಲ್‌ರೌಂಡರ್‌ ಆಟದ ನೆರವಿನಿಂದ ಅತಿಥೇಯ ಆರ್‌ಸಿಬಿ ತಂಡವನ್ನು ತವರಿನಂಗಳದಲ್ಲಿ ಸೋಲಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಯಶಸ್ವಿಯಾಗಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಸೋಲುವ ಮೂಲಕ ಆರ್‌ಸಿಬಿ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿಗೆ 195 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಇತ್ತ ಬಿಗ್ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ತಂಡ ಕೊನೆಯವರೆಗೂ ಗೆಲುವಿಗಾಗಿ ಹೋರಾಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಆ ಮೂಲಕ 25 ರನ್‌ಗಳ ಅಂತರದ ಸೋಲು ಕಂಡಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ನಾಯಕಿ ಮೆಗ್ ಲ್ಯಾನಿಂಗ್ 11 ಕಲೆ ಹಾಕಿದರೆ, ಶಫಾಲಿ ವರ್ಮಾ 31 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ಸಹಿತ ಅರ್ಧಶತಕ ಸಿಡಿಸಿದರು. ಆಲಿಸ್ ಕ್ಯಾಪ್ಸಿ ಕೂಡ 46 ರನ್​ಗಳ ಉತ್ತಮ ಜೊತೆಯಾಟ ಆಡಿದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಮರಿಜಾನ್ನೆ ಕೆಪ್ ಹಾಗೂ ಜೆಸ್ ಜೊನಾಸೆನ್ ತಲಾ 16 ಎಸೆತಗಳಲ್ಲಿ ಕ್ರಮವಾಗಿ 32 ಹಾಗೂ 36 ರನ್ ಕಲೆಹಾಕಿ ತಂಡವನ್ನು ಬೃಹತ್ 195ರ ಗಡಿ ತಲುಪಿಸಿದರು.

ಆರ್‌ಸಿಬಿ ಪರ ಡಿವೈನ್‌ ಮತ್ತು ಕ್ಲಾರ್ಕ್‌ ತಲಾ 2 ವಿಕೆಟ್‌ ಪಡೆದರು.

ಈ ಬೃಹತ್‌ ಮೊತ್ತ ಬೆನ್ನತ್ತಿದ್ದ ಆರ್‌ಸಿಬಿ ಮತ್ತೊಮ್ಮೆ ನಿರಾಸೆ ಉಂಟಾಯಿತು. ನಾಯಕಿ ಸ್ಮೃತಿ ಮಂದನಾ ಅವರ ಏಕಾಂಗಿ ಹೋರಾಟ ತಂಡವನ್ನು ಗೆಲುವಿನ ದಡ ಕೊಂಡ್ಯೊಯ್ಯಲು ಸಾಧ್ಯವಾಗಲಿಲ್ಲ. ನಾಯಕಿ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಕಲೆಹಾಕಿ ತಮ್ಮ ಇನ್ನಿಂಗ್ಸ್‌ ಮೂಲಕ ಗಮನ ಸೆಳೆದರು.

ಮೇಘನಾ 36, ಡಿವೈನ್‌ವ23 ಮತ್ತು ರಿಚಾ ಘೋಷ್‌ 19 ಹೊರತು ಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ತಂಡ ಮಧ್ಯಮ ಕ್ರಮಾಂಕದಲ್ಲಿ ಎಡವಿದ ಕಾರಣ ಈ ಟೂರ್ನಿಯಲ್ಲಿ ತನ್ನ ಮೊದಲ ಸೋಲನ್ನು ಎದುರಿಸಬೇಕಾಯಿತು.

ಡೆಲ್ಲಿ ಪರ ಜೆಸ್ ಜೊನಾಸೆನ್ 3, ಮರಿಜಾನ್ನೆ ಕೆಪ್ ಮತ್ತು ಅರುಂಧತಿ ರೆಡ್ಡಿ ತಲಾ 2 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಮರಿಜಾನ್ನೆ ಕೆಪ್

andolana

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

9 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

10 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

10 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

10 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

10 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

11 hours ago