ಕ್ರೀಡೆ

WPL-2024: ಟೂರ್ನಿಯಲ್ಲಿ ಮೊದಲ ಸೋಲು ಕಂಡ ಆರ್‌ಸಿಬಿ!

ಬೆಂಗಳೂರು: ಮೆರಿಜಾನ್ನೆ ಅವರ ಅಲ್‌ರೌಂಡರ್‌ ಆಟದ ನೆರವಿನಿಂದ ಅತಿಥೇಯ ಆರ್‌ಸಿಬಿ ತಂಡವನ್ನು ತವರಿನಂಗಳದಲ್ಲಿ ಸೋಲಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಯಶಸ್ವಿಯಾಗಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಸೋಲುವ ಮೂಲಕ ಆರ್‌ಸಿಬಿ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿಗೆ 195 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಇತ್ತ ಬಿಗ್ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ತಂಡ ಕೊನೆಯವರೆಗೂ ಗೆಲುವಿಗಾಗಿ ಹೋರಾಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಆ ಮೂಲಕ 25 ರನ್‌ಗಳ ಅಂತರದ ಸೋಲು ಕಂಡಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ನಾಯಕಿ ಮೆಗ್ ಲ್ಯಾನಿಂಗ್ 11 ಕಲೆ ಹಾಕಿದರೆ, ಶಫಾಲಿ ವರ್ಮಾ 31 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ಸಹಿತ ಅರ್ಧಶತಕ ಸಿಡಿಸಿದರು. ಆಲಿಸ್ ಕ್ಯಾಪ್ಸಿ ಕೂಡ 46 ರನ್​ಗಳ ಉತ್ತಮ ಜೊತೆಯಾಟ ಆಡಿದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಮರಿಜಾನ್ನೆ ಕೆಪ್ ಹಾಗೂ ಜೆಸ್ ಜೊನಾಸೆನ್ ತಲಾ 16 ಎಸೆತಗಳಲ್ಲಿ ಕ್ರಮವಾಗಿ 32 ಹಾಗೂ 36 ರನ್ ಕಲೆಹಾಕಿ ತಂಡವನ್ನು ಬೃಹತ್ 195ರ ಗಡಿ ತಲುಪಿಸಿದರು.

ಆರ್‌ಸಿಬಿ ಪರ ಡಿವೈನ್‌ ಮತ್ತು ಕ್ಲಾರ್ಕ್‌ ತಲಾ 2 ವಿಕೆಟ್‌ ಪಡೆದರು.

ಈ ಬೃಹತ್‌ ಮೊತ್ತ ಬೆನ್ನತ್ತಿದ್ದ ಆರ್‌ಸಿಬಿ ಮತ್ತೊಮ್ಮೆ ನಿರಾಸೆ ಉಂಟಾಯಿತು. ನಾಯಕಿ ಸ್ಮೃತಿ ಮಂದನಾ ಅವರ ಏಕಾಂಗಿ ಹೋರಾಟ ತಂಡವನ್ನು ಗೆಲುವಿನ ದಡ ಕೊಂಡ್ಯೊಯ್ಯಲು ಸಾಧ್ಯವಾಗಲಿಲ್ಲ. ನಾಯಕಿ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಕಲೆಹಾಕಿ ತಮ್ಮ ಇನ್ನಿಂಗ್ಸ್‌ ಮೂಲಕ ಗಮನ ಸೆಳೆದರು.

ಮೇಘನಾ 36, ಡಿವೈನ್‌ವ23 ಮತ್ತು ರಿಚಾ ಘೋಷ್‌ 19 ಹೊರತು ಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ತಂಡ ಮಧ್ಯಮ ಕ್ರಮಾಂಕದಲ್ಲಿ ಎಡವಿದ ಕಾರಣ ಈ ಟೂರ್ನಿಯಲ್ಲಿ ತನ್ನ ಮೊದಲ ಸೋಲನ್ನು ಎದುರಿಸಬೇಕಾಯಿತು.

ಡೆಲ್ಲಿ ಪರ ಜೆಸ್ ಜೊನಾಸೆನ್ 3, ಮರಿಜಾನ್ನೆ ಕೆಪ್ ಮತ್ತು ಅರುಂಧತಿ ರೆಡ್ಡಿ ತಲಾ 2 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಮರಿಜಾನ್ನೆ ಕೆಪ್

andolana

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

55 mins ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

2 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

3 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

5 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago