ಕ್ರೀಡೆ

WPL-2024: ಟೂರ್ನಿಯಲ್ಲಿ ಮೊದಲ ಸೋಲು ಕಂಡ ಆರ್‌ಸಿಬಿ!

ಬೆಂಗಳೂರು: ಮೆರಿಜಾನ್ನೆ ಅವರ ಅಲ್‌ರೌಂಡರ್‌ ಆಟದ ನೆರವಿನಿಂದ ಅತಿಥೇಯ ಆರ್‌ಸಿಬಿ ತಂಡವನ್ನು ತವರಿನಂಗಳದಲ್ಲಿ ಸೋಲಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಯಶಸ್ವಿಯಾಗಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಸೋಲುವ ಮೂಲಕ ಆರ್‌ಸಿಬಿ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿಗೆ 195 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಇತ್ತ ಬಿಗ್ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ತಂಡ ಕೊನೆಯವರೆಗೂ ಗೆಲುವಿಗಾಗಿ ಹೋರಾಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಆ ಮೂಲಕ 25 ರನ್‌ಗಳ ಅಂತರದ ಸೋಲು ಕಂಡಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ನಾಯಕಿ ಮೆಗ್ ಲ್ಯಾನಿಂಗ್ 11 ಕಲೆ ಹಾಕಿದರೆ, ಶಫಾಲಿ ವರ್ಮಾ 31 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ಸಹಿತ ಅರ್ಧಶತಕ ಸಿಡಿಸಿದರು. ಆಲಿಸ್ ಕ್ಯಾಪ್ಸಿ ಕೂಡ 46 ರನ್​ಗಳ ಉತ್ತಮ ಜೊತೆಯಾಟ ಆಡಿದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಮರಿಜಾನ್ನೆ ಕೆಪ್ ಹಾಗೂ ಜೆಸ್ ಜೊನಾಸೆನ್ ತಲಾ 16 ಎಸೆತಗಳಲ್ಲಿ ಕ್ರಮವಾಗಿ 32 ಹಾಗೂ 36 ರನ್ ಕಲೆಹಾಕಿ ತಂಡವನ್ನು ಬೃಹತ್ 195ರ ಗಡಿ ತಲುಪಿಸಿದರು.

ಆರ್‌ಸಿಬಿ ಪರ ಡಿವೈನ್‌ ಮತ್ತು ಕ್ಲಾರ್ಕ್‌ ತಲಾ 2 ವಿಕೆಟ್‌ ಪಡೆದರು.

ಈ ಬೃಹತ್‌ ಮೊತ್ತ ಬೆನ್ನತ್ತಿದ್ದ ಆರ್‌ಸಿಬಿ ಮತ್ತೊಮ್ಮೆ ನಿರಾಸೆ ಉಂಟಾಯಿತು. ನಾಯಕಿ ಸ್ಮೃತಿ ಮಂದನಾ ಅವರ ಏಕಾಂಗಿ ಹೋರಾಟ ತಂಡವನ್ನು ಗೆಲುವಿನ ದಡ ಕೊಂಡ್ಯೊಯ್ಯಲು ಸಾಧ್ಯವಾಗಲಿಲ್ಲ. ನಾಯಕಿ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಕಲೆಹಾಕಿ ತಮ್ಮ ಇನ್ನಿಂಗ್ಸ್‌ ಮೂಲಕ ಗಮನ ಸೆಳೆದರು.

ಮೇಘನಾ 36, ಡಿವೈನ್‌ವ23 ಮತ್ತು ರಿಚಾ ಘೋಷ್‌ 19 ಹೊರತು ಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ತಂಡ ಮಧ್ಯಮ ಕ್ರಮಾಂಕದಲ್ಲಿ ಎಡವಿದ ಕಾರಣ ಈ ಟೂರ್ನಿಯಲ್ಲಿ ತನ್ನ ಮೊದಲ ಸೋಲನ್ನು ಎದುರಿಸಬೇಕಾಯಿತು.

ಡೆಲ್ಲಿ ಪರ ಜೆಸ್ ಜೊನಾಸೆನ್ 3, ಮರಿಜಾನ್ನೆ ಕೆಪ್ ಮತ್ತು ಅರುಂಧತಿ ರೆಡ್ಡಿ ತಲಾ 2 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಮರಿಜಾನ್ನೆ ಕೆಪ್

andolana

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

16 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

17 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

21 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago