ಕ್ರೀಡೆ

WPL-2024: ಟೂರ್ನಿಯಲ್ಲಿ ಮೊದಲ ಸೋಲು ಕಂಡ ಆರ್‌ಸಿಬಿ!

ಬೆಂಗಳೂರು: ಮೆರಿಜಾನ್ನೆ ಅವರ ಅಲ್‌ರೌಂಡರ್‌ ಆಟದ ನೆರವಿನಿಂದ ಅತಿಥೇಯ ಆರ್‌ಸಿಬಿ ತಂಡವನ್ನು ತವರಿನಂಗಳದಲ್ಲಿ ಸೋಲಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಯಶಸ್ವಿಯಾಗಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಸೋಲುವ ಮೂಲಕ ಆರ್‌ಸಿಬಿ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಮೂಲಕ ಆರ್​ಸಿಬಿಗೆ 195 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಇತ್ತ ಬಿಗ್ ಟಾರ್ಗೆಟ್ ಬೆನ್ನಟ್ಟಿದ ಆರ್​ಸಿಬಿ ತಂಡ ಕೊನೆಯವರೆಗೂ ಗೆಲುವಿಗಾಗಿ ಹೋರಾಡಿ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 169 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಆ ಮೂಲಕ 25 ರನ್‌ಗಳ ಅಂತರದ ಸೋಲು ಕಂಡಿತು.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ನಾಯಕಿ ಮೆಗ್ ಲ್ಯಾನಿಂಗ್ 11 ಕಲೆ ಹಾಕಿದರೆ, ಶಫಾಲಿ ವರ್ಮಾ 31 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳ ಸಹಿತ ಅರ್ಧಶತಕ ಸಿಡಿಸಿದರು. ಆಲಿಸ್ ಕ್ಯಾಪ್ಸಿ ಕೂಡ 46 ರನ್​ಗಳ ಉತ್ತಮ ಜೊತೆಯಾಟ ಆಡಿದರು. ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಮರಿಜಾನ್ನೆ ಕೆಪ್ ಹಾಗೂ ಜೆಸ್ ಜೊನಾಸೆನ್ ತಲಾ 16 ಎಸೆತಗಳಲ್ಲಿ ಕ್ರಮವಾಗಿ 32 ಹಾಗೂ 36 ರನ್ ಕಲೆಹಾಕಿ ತಂಡವನ್ನು ಬೃಹತ್ 195ರ ಗಡಿ ತಲುಪಿಸಿದರು.

ಆರ್‌ಸಿಬಿ ಪರ ಡಿವೈನ್‌ ಮತ್ತು ಕ್ಲಾರ್ಕ್‌ ತಲಾ 2 ವಿಕೆಟ್‌ ಪಡೆದರು.

ಈ ಬೃಹತ್‌ ಮೊತ್ತ ಬೆನ್ನತ್ತಿದ್ದ ಆರ್‌ಸಿಬಿ ಮತ್ತೊಮ್ಮೆ ನಿರಾಸೆ ಉಂಟಾಯಿತು. ನಾಯಕಿ ಸ್ಮೃತಿ ಮಂದನಾ ಅವರ ಏಕಾಂಗಿ ಹೋರಾಟ ತಂಡವನ್ನು ಗೆಲುವಿನ ದಡ ಕೊಂಡ್ಯೊಯ್ಯಲು ಸಾಧ್ಯವಾಗಲಿಲ್ಲ. ನಾಯಕಿ ಸ್ಮೃತಿ 43 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 74 ರನ್ ಕಲೆಹಾಕಿ ತಮ್ಮ ಇನ್ನಿಂಗ್ಸ್‌ ಮೂಲಕ ಗಮನ ಸೆಳೆದರು.

ಮೇಘನಾ 36, ಡಿವೈನ್‌ವ23 ಮತ್ತು ರಿಚಾ ಘೋಷ್‌ 19 ಹೊರತು ಪಡಿಸಿ ಬೇರಾರಿಂದಲೂ ನಿರೀಕ್ಷಿತ ಆಟ ಕಂಡು ಬರಲಿಲ್ಲ. ತಂಡ ಮಧ್ಯಮ ಕ್ರಮಾಂಕದಲ್ಲಿ ಎಡವಿದ ಕಾರಣ ಈ ಟೂರ್ನಿಯಲ್ಲಿ ತನ್ನ ಮೊದಲ ಸೋಲನ್ನು ಎದುರಿಸಬೇಕಾಯಿತು.

ಡೆಲ್ಲಿ ಪರ ಜೆಸ್ ಜೊನಾಸೆನ್ 3, ಮರಿಜಾನ್ನೆ ಕೆಪ್ ಮತ್ತು ಅರುಂಧತಿ ರೆಡ್ಡಿ ತಲಾ 2 ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಮರಿಜಾನ್ನೆ ಕೆಪ್

andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

7 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

8 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

8 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

9 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

10 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

14 hours ago