ಕ್ರೀಡೆ

WPL-2024: ಯುಪಿ ವಾರಿಯರ್ಸ್‌ಗೆ ಮಣಿದ ಗುಜರಾತ್‌ ಜೈಂಟ್ಸ್‌!

ಬೆಂಗಳೂರು : ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವುಮೆನ್ಸ್‌ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್ ತಂಡ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಜೈಂಟ್ಸ್, ಉತ್ತಮ ಆರಂಭ ಪಡೆಯಿತು. ನಾಯಕಿ ಬೆಥ್ ಮೂನಿ 16 ಎಸೆತಗಳಲ್ಲಿ 2 ಬೌಂಡರಿ ಸಹಿತ 16 ರನ್ ಗಳಿಸಿ ಸೋಫಿ ಎಕ್ಸೆಸ್ಟೋನ್ ಅವರ ಎಸೆತಕ್ಕೆ ಗ್ರೇಸ್ ಹರಿಸ್ ಗೆ ಕ್ಯಾಚಿತ್ತು ಪೆವಿಲಿಯನ್ ಹಾದಿ ಹಿಡಿದರು. 26 ಎಸೆತ ಎದುರಿಸಿದ ಲೌರಾ ವೊಲ್ವಾರ್ಡ್ಸ್ 4 ಬೌಂಡರಿ ಸಹಿತ 28 ರನ್ ಪೇರಿಸಿ, ಸೋಫಿ ಅವರ ಬೌಲಿಂಗ್ ನಲ್ಲಿ ಔಟ್ ಆದರು.

ಹರ್ಲಿನ್ ಡಿಯೋಲ್ 24 ಎಸೆತದಲ್ಲಿ 1 ಬೌಂಡರಿ ಸಹಿತ 18 ರನ್ ಗಳಿಸಿ ರಾಜೇಶ್ವರಿ ಗಾಯಕ್ವಾಡ್ ಅವರ ಸ್ಪಿನ್ ಗೆ ಅಂಜಲಿ ಸರ್ವಾನಿಗೆ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಪೋಬೆ ಲಿಚೀಲ್ಡ್ 26 ಎಸೆತ ಎದುರಿಸಿ 4 ಬೌಂಡರಿ 1 ಸಿಕ್ಸ್ ಹೊಡೆದು 35 ರನ್ ಗಳಿಸಿ ಸೈಮಾ ತಾಕೋರ್ ಅವರ ರನೌಟ್ ಗೆ ಗುರಿಯಾದರು. ಅಶ್ಲೇಗ್ ಗಾರ್ಡ್ನರ್ 17 ಎಸೆತಗಳಲ್ಲಿ 1 ಸಿಕ್ಸ‌ರ್ 4 ಬೌಂಡರಿ ಬಾರಿಸಿ ಅಲ್ಪ ಮಟ್ಟಿನಲ್ಲಿ ತಂಡಕ್ಕೆ ಆಸರೆಯಾಗಿ ಸೋಫಿ ಎಸೆತಕ್ಕೆ ಪೆವಿಲಿಯನ್ ಸೇರಿದಾಗ ದಯಾಲನ್ ಹೇಮಲತಾ 2 ರನ್ ಗಳಿಸಿದರು. ಕತ್ರೈನ್ ಎಮ್ಮ ಬ್ರೆಸ್ 5 ರನ್ ಗಳಿಸಿ ಅಜೇಯರಾಗಿ ಉಳಿದರು.

ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 142 ರನ್ ಗಳಿಸಿತು. ಯುಪಿ ವಾರಿಯರ್ಸ್ ಪರ ಸೋಫಿ ಎಕ್ಸೆಸ್ಟೋನ್ 3, ರಾಜೇಶ್ವರಿ ಗಾಯಕ್ವಾಡ್ 1 ವಿಕೆಟ್ ಪಡೆದರು.

ಈ ಮೊತ್ತ ಚೇಸ್‌ ಮಾಡಿದ ಯುಪಿ ವಾರಿಯರ್ಸ್‌ ಆರಂಭಿಕ ಬ್ಯಾಟರ್ ಗಳಾಗಿ ಕ್ರೀಸ್ ಗೆ ಇಳಿದ ತಂಡದ ನಾಯಕಿ ಅಲಿಸ್ಸಾ ಹೀಲಿ 21 ಎಸೆತಗಳಲ್ಲಿ 7 ಬೌಂಡರಿ ಸಹಿತ 33 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಕಿರಣ್ ನೌಗಿರೆ 8 ಎಸೆತ ಎದುರಿಸಿ 2 ಬೌಂಡರಿಯೊಂದಿಗೆ 12 ರನ್ ಗಳಿಸಿ ನಿರ್ಗಮಿಸಿದರು. ಚಾಮರಿ 17 ರನ್ ಗಳಿಸಿದರೆ, ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಗ್ರೇಸ್ ಹ್ಯಾರಿಸ್ 33 ಎಸೆತದಲ್ಲಿ 9 ಬೌಂಡರಿ 2 ಸಿಕ್ಸರ್ ಸಹಿತ 60 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಶ್ವೇತಾ 2 ಹಾಗೂ ದೀಪ್ತಿ ಶರ್ಮಾ17 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಗುಜರಾತ್ ಜೈಂಟ್ಸ್ ಪರ ತನುಜಾ 2 ವಿಕೆಟ್, ಮೇಘನಾ ಸಿಂಗ್ ಹಾಗೂ ಕ್ಯಾಥರಿನ್ ತಲಾ 1 ವಿಕೆಟ್ ಪಡೆದುಕೊಂಡರು.

ಪಂದ್ಯ ಶ್ರೇಷ್ಠ: ಗ್ರೇಸ್ ಹ್ಯಾರಿಸ್

andolana

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

5 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

5 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago