ಕ್ರೀಡೆ

WPL-2024: ಯುಪಿ ವಾರಿಯರ್ಸ್‌ಗೆ ಮಣಿದ ಗುಜರಾತ್‌ ಜೈಂಟ್ಸ್‌!

ಬೆಂಗಳೂರು : ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವುಮೆನ್ಸ್‌ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್ ತಂಡ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ಜೈಂಟ್ಸ್, ಉತ್ತಮ ಆರಂಭ ಪಡೆಯಿತು. ನಾಯಕಿ ಬೆಥ್ ಮೂನಿ 16 ಎಸೆತಗಳಲ್ಲಿ 2 ಬೌಂಡರಿ ಸಹಿತ 16 ರನ್ ಗಳಿಸಿ ಸೋಫಿ ಎಕ್ಸೆಸ್ಟೋನ್ ಅವರ ಎಸೆತಕ್ಕೆ ಗ್ರೇಸ್ ಹರಿಸ್ ಗೆ ಕ್ಯಾಚಿತ್ತು ಪೆವಿಲಿಯನ್ ಹಾದಿ ಹಿಡಿದರು. 26 ಎಸೆತ ಎದುರಿಸಿದ ಲೌರಾ ವೊಲ್ವಾರ್ಡ್ಸ್ 4 ಬೌಂಡರಿ ಸಹಿತ 28 ರನ್ ಪೇರಿಸಿ, ಸೋಫಿ ಅವರ ಬೌಲಿಂಗ್ ನಲ್ಲಿ ಔಟ್ ಆದರು.

ಹರ್ಲಿನ್ ಡಿಯೋಲ್ 24 ಎಸೆತದಲ್ಲಿ 1 ಬೌಂಡರಿ ಸಹಿತ 18 ರನ್ ಗಳಿಸಿ ರಾಜೇಶ್ವರಿ ಗಾಯಕ್ವಾಡ್ ಅವರ ಸ್ಪಿನ್ ಗೆ ಅಂಜಲಿ ಸರ್ವಾನಿಗೆ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಪೋಬೆ ಲಿಚೀಲ್ಡ್ 26 ಎಸೆತ ಎದುರಿಸಿ 4 ಬೌಂಡರಿ 1 ಸಿಕ್ಸ್ ಹೊಡೆದು 35 ರನ್ ಗಳಿಸಿ ಸೈಮಾ ತಾಕೋರ್ ಅವರ ರನೌಟ್ ಗೆ ಗುರಿಯಾದರು. ಅಶ್ಲೇಗ್ ಗಾರ್ಡ್ನರ್ 17 ಎಸೆತಗಳಲ್ಲಿ 1 ಸಿಕ್ಸ‌ರ್ 4 ಬೌಂಡರಿ ಬಾರಿಸಿ ಅಲ್ಪ ಮಟ್ಟಿನಲ್ಲಿ ತಂಡಕ್ಕೆ ಆಸರೆಯಾಗಿ ಸೋಫಿ ಎಸೆತಕ್ಕೆ ಪೆವಿಲಿಯನ್ ಸೇರಿದಾಗ ದಯಾಲನ್ ಹೇಮಲತಾ 2 ರನ್ ಗಳಿಸಿದರು. ಕತ್ರೈನ್ ಎಮ್ಮ ಬ್ರೆಸ್ 5 ರನ್ ಗಳಿಸಿ ಅಜೇಯರಾಗಿ ಉಳಿದರು.

ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 142 ರನ್ ಗಳಿಸಿತು. ಯುಪಿ ವಾರಿಯರ್ಸ್ ಪರ ಸೋಫಿ ಎಕ್ಸೆಸ್ಟೋನ್ 3, ರಾಜೇಶ್ವರಿ ಗಾಯಕ್ವಾಡ್ 1 ವಿಕೆಟ್ ಪಡೆದರು.

ಈ ಮೊತ್ತ ಚೇಸ್‌ ಮಾಡಿದ ಯುಪಿ ವಾರಿಯರ್ಸ್‌ ಆರಂಭಿಕ ಬ್ಯಾಟರ್ ಗಳಾಗಿ ಕ್ರೀಸ್ ಗೆ ಇಳಿದ ತಂಡದ ನಾಯಕಿ ಅಲಿಸ್ಸಾ ಹೀಲಿ 21 ಎಸೆತಗಳಲ್ಲಿ 7 ಬೌಂಡರಿ ಸಹಿತ 33 ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದರು. ಕಿರಣ್ ನೌಗಿರೆ 8 ಎಸೆತ ಎದುರಿಸಿ 2 ಬೌಂಡರಿಯೊಂದಿಗೆ 12 ರನ್ ಗಳಿಸಿ ನಿರ್ಗಮಿಸಿದರು. ಚಾಮರಿ 17 ರನ್ ಗಳಿಸಿದರೆ, ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಗ್ರೇಸ್ ಹ್ಯಾರಿಸ್ 33 ಎಸೆತದಲ್ಲಿ 9 ಬೌಂಡರಿ 2 ಸಿಕ್ಸರ್ ಸಹಿತ 60 ರನ್ ಬಾರಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಶ್ವೇತಾ 2 ಹಾಗೂ ದೀಪ್ತಿ ಶರ್ಮಾ17 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಗುಜರಾತ್ ಜೈಂಟ್ಸ್ ಪರ ತನುಜಾ 2 ವಿಕೆಟ್, ಮೇಘನಾ ಸಿಂಗ್ ಹಾಗೂ ಕ್ಯಾಥರಿನ್ ತಲಾ 1 ವಿಕೆಟ್ ಪಡೆದುಕೊಂಡರು.

ಪಂದ್ಯ ಶ್ರೇಷ್ಠ: ಗ್ರೇಸ್ ಹ್ಯಾರಿಸ್

andolana

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

45 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

49 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

56 mins ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago