ಕ್ರೀಡೆ

WPL Champions | 2ನೇ ಬಾರಿ ಚಾಂಪಿಯನ್‌ ಆದ ಆರ್‌ಸಿಬಿ

ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ ಸೋಲಿಸಿ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ಟಾಸ್‌ ಸೋತರು ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಡೆಲ್ಲಿ ಕ್ಯಾಪಿಟಲ್ಸ್ 203 ರನ್ ಕಲೆ ಹಾಕಿತು. ಈ ಗುರಿ ಬೆನ್ನತ್ತಿದ ಆರ್‌ಸಿಬಿ, 3 ವಿಕೆಟ್‌ ನಷ್ಟಕ್ಕೆ 204 ಗಳಿಸಿ ಗುರಿ ಮುಟ್ಟಿತು.

ಡೆಲ್ಲಿ ಕ್ಯಾಪಿಟಲ್‌ ನಾಯಕಿ ಜೆಮಿಯಾ ರಾಡ್ರಿಗಸ್‌ (57), ಅನುಭವಿ ಲೌರಾ ವೊಲ್ವಾರ್ಡ್ತ್‌ (44) ಹಾಗೂ ಚಿನ್ನೆಲ್ಲಿ ಹೆನ್ರಿ (35) ಅವರ ಅಮೋಘ ಆಟದ ಬಲದಿಂದ ನಾಲ್ಕು ವಿಕೆಟ್‌ ನಷ್ಟಕ್ಕೆ 203 ರನ್‌ ಕಲೆ ಹಾಕಿತ್ತು.

ಈ ಬೃಹತ್‌ ಮೊತ್ತದ ಎದುರು ಕೇವಲ 9 ರನ್‌ಗೆ ಮೊದಲ ವಿಕೆಟ್‌ ಕಳೆದುಕೊಂಡ ಆರಂಭಿಕ ಆಘಾತಕ್ಕೊಳಗಾಗಿದ್ದ ಆರ್‌ಸಿಬಿಗೆ, ನಾಯಕಿ ಸ್ಮೃತಿ ಮಂದಾನ ಹಾಗೂ ಜಾರ್ಜಿಯಾ ವೋಲ್ ಲೀಲಾಜಾಲವಾಗಿ ಬ್ಯಾಟ್‌ ಬೀಸಿ ತಂಡಕ್ಕೆ ಚೇತರಿಕೆ ನೀಡಿದರು.

ಕೊನೆಯಲ್ಲಿ ಅನುಭವದ ಆಟವಾಡಿದ ನದೀನ್‌ ಡಿ ಕ್ಲರ್ಕ್‌ (7)ಹಾಗೂ ರಾಧಾ ಯಾದವವ್‌(12) ಕೊನೇ ಓವರ್‌ನಲ್ಲಿ ಬೇಕಿದ್ದ 10 ರನ್‌ಗಳನ್ನು ಕೇವಲ ನಾಲ್ಕೇ ಎಸೆತಗಳಲ್ಲಿ ಗಳಿಸುವ ಮೂಲಕ, ಆರ್‌ಸಿಬಿಯನ್ನು ಎರಡನೇ ಬಾರಿಗೆ ಚಾಂಪಿಯನ್‌ ಪಟ್ಟಕ್ಕೇರಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

2 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

2 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

2 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

2 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

2 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

3 hours ago