ಕ್ರೀಡೆ

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಚಾಂಪಿಯನ್‌ ಪಟ್ಟಕ್ಕಾಗಿ ಸೆಣಸಲಿವೆ.

ಮುಂಬೈನ ಬ್ರೆಬೋರ್ನ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎರಡು ತಂಡಗಳ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ.

ಸತತ ಮೂರನೇ ಬಾರಿ ಫೈನಲ್‌ ತಲುಪಿರುವ ಡೆಲ್ಲಿ ಚೊಚ್ಚಲ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದರೆ, ಮೊದಲ ಆವೃತ್ತಿಯಲ್ಲಿ ಚಾಂಪಿಯನ್‌ ಪಟ್ಟಕ್ಕೇರಿದ ಮುಂಬೈ ತಂಡ ಎರಡನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

ಶೆಫಾಲಿ ವರ್ಮಾ ಹಾಗೂ ನಾಯಕಿ ಮೆಗ್‌ ಲ್ಯಾನಿಂಗ್‌ ಬ್ಯಾಟಿಂಗ್‌ನಲ್ಲಿ ಡೆಲ್ಲಿಗೆ ಶಕ್ತಿ ತುಂಬಿದರೆ, ಕಾಶ್ವೀ ಗೌತಮ್‌ ಮತ್ತು ಶಿಖಾ ಪಾಂಡೆ ಬೌಲಿಂಗ್‌ನಲ್ಲಿ ಬಲ ತುಂಬಲಿದ್ದಾರೆ.

ಇತ್ತ ಮುಂಬೈ ತಂಡದ ಪರ ಅಮೋಘ ಫಾರ್ಮ್‌ನಲ್ಲಿರುವ ನ್ಯಾಟ್‌ ಶಿವರ್‌ ಹಾಗೂ ಹೇಯ್ಲಿ ಮ್ಯಾಥ್ಯೂಸ್‌ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಶಕ್ತಿಯಾಗಿದ್ದಾರೆ.

ತಂಡಗಳು ಇಂತಿವೆ:

ಡೆಲ್ಲಿ ಕ್ಯಾಪಿಟಲ್ಸ್‌: ಮೆಗ್‌ ಲ್ಯಾನಿಂಗ್‌ (ನಾಯಕಿ), ಸಾರಾ ಬ್ರೈಸ್‌ (ವಿಕೆಟ್‌ ಕೀಪರ್‌), ಶಫಾಲಿ ವರ್ಮಾ, ಜೆಸ್‌ ಜೊನಾಸ್ಸೆನ್‌, ಜೆಮಿಮಾ ರೋಡ್ರಿಗಸ್‌, ಅನ್ನಾಬೆಲ್‌ ಸದರ್ಲ್ಯಾಂಡ್‌, ಮರಿಜಾನ್ನೆ ಕಪ್ಪ್‌, ನಿಕ್ಕಿ ಪ್ರಸಾದ್‌, ಮಿನ್ನು ಮಾಣಿ, ಶಿಖಾ ಪಾಂಡೆ, ಟೈಟಾಸ್‌ ಸಾಧು, ರಾಧಾ ಯಾದವ್‌, ಅರುಂಧತಿ ರೆಡ್ಡಿ, ಆಲಿಸ್‌ ಕ್ಯಾಪ್ಸಿ, ತಾನಿಯಾ ಭಾಟಿಯಾ, ಸ್ನೇಹ ದೀಪ್ತಿ, ನಂದಿನಿ ಕಶ್ಯಪ್‌, ನಲ್ಲಪುರ ರೆಡ್ಡಿ.

ಮುಂಬೈ ಇಂಡಿಯನ್ಸ್‌: ಯಸ್ತಿಕಾ ಭಾಟಿಯಾ, ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಹೇಲಿ ಮ್ಯಾಥ್ಯೂಸ್‌, ನಾಟ್‌ ಶಿವರ್‌ಬ್ರಂಟ್‌, ಸಜೀವನ್‌ ಸಜನಾ, ಅಮೆಲಿಯಾ ಕೆರ್‌, ಅಮಂಜೋತ್‌ ಕೌರ್‌, ಜಿ. ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಿಮ್‌ ಇಸ್ಮಾಯಿಲ್‌, ಸೈಕಾ ಇಸಾಕ್‌, ಕೋಯ್ಲ್‌ ಟ್ರಯಾನ್‌, ನಾಡಿನ್‌ ಡಿ ಕ್ಲರ್ಕ್‌, ಕೀರ್ತನಾ ಬಾಲಕೃಷ್ಣನ್‌, ಜಿಂತಿಮಣಿ ಕಲಿತಾ, ಬ್ಯಾರನೆಸ್‌ ಸಿಸೋಡಿಯಾ, ಅಮಂದೀಪ್‌ ಕೌರ್‌, ಅಕ್ಷಿತಾ ಮಹೇಶ್ವರಿ.

ಪಂದ್ಯದ ಸಮಯ: ರಾತ್ರಿ 8 ಗಂಟೆ

ಸ್ಥಳ: ಬ್ರೆಬೋರ್ನ್‌ ಸ್ಟೇಡಿಯಂ, ಮುಂಬೈ

ನೇರ ಪ್ರಸಾರ: ಜಿಯೊ ಹಾಟ್‌ಸ್ಟಾರ್‌, ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌

ಆಂದೋಲನ ಡೆಸ್ಕ್

Recent Posts

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

20 mins ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

57 mins ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

2 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

3 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

3 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

4 hours ago