ಕ್ರೀಡೆ

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಚಾಂಪಿಯನ್‌ ಪಟ್ಟಕ್ಕಾಗಿ ಸೆಣಸಲಿವೆ.

ಮುಂಬೈನ ಬ್ರೆಬೋರ್ನ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎರಡು ತಂಡಗಳ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ.

ಸತತ ಮೂರನೇ ಬಾರಿ ಫೈನಲ್‌ ತಲುಪಿರುವ ಡೆಲ್ಲಿ ಚೊಚ್ಚಲ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದರೆ, ಮೊದಲ ಆವೃತ್ತಿಯಲ್ಲಿ ಚಾಂಪಿಯನ್‌ ಪಟ್ಟಕ್ಕೇರಿದ ಮುಂಬೈ ತಂಡ ಎರಡನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

ಶೆಫಾಲಿ ವರ್ಮಾ ಹಾಗೂ ನಾಯಕಿ ಮೆಗ್‌ ಲ್ಯಾನಿಂಗ್‌ ಬ್ಯಾಟಿಂಗ್‌ನಲ್ಲಿ ಡೆಲ್ಲಿಗೆ ಶಕ್ತಿ ತುಂಬಿದರೆ, ಕಾಶ್ವೀ ಗೌತಮ್‌ ಮತ್ತು ಶಿಖಾ ಪಾಂಡೆ ಬೌಲಿಂಗ್‌ನಲ್ಲಿ ಬಲ ತುಂಬಲಿದ್ದಾರೆ.

ಇತ್ತ ಮುಂಬೈ ತಂಡದ ಪರ ಅಮೋಘ ಫಾರ್ಮ್‌ನಲ್ಲಿರುವ ನ್ಯಾಟ್‌ ಶಿವರ್‌ ಹಾಗೂ ಹೇಯ್ಲಿ ಮ್ಯಾಥ್ಯೂಸ್‌ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಶಕ್ತಿಯಾಗಿದ್ದಾರೆ.

ತಂಡಗಳು ಇಂತಿವೆ:

ಡೆಲ್ಲಿ ಕ್ಯಾಪಿಟಲ್ಸ್‌: ಮೆಗ್‌ ಲ್ಯಾನಿಂಗ್‌ (ನಾಯಕಿ), ಸಾರಾ ಬ್ರೈಸ್‌ (ವಿಕೆಟ್‌ ಕೀಪರ್‌), ಶಫಾಲಿ ವರ್ಮಾ, ಜೆಸ್‌ ಜೊನಾಸ್ಸೆನ್‌, ಜೆಮಿಮಾ ರೋಡ್ರಿಗಸ್‌, ಅನ್ನಾಬೆಲ್‌ ಸದರ್ಲ್ಯಾಂಡ್‌, ಮರಿಜಾನ್ನೆ ಕಪ್ಪ್‌, ನಿಕ್ಕಿ ಪ್ರಸಾದ್‌, ಮಿನ್ನು ಮಾಣಿ, ಶಿಖಾ ಪಾಂಡೆ, ಟೈಟಾಸ್‌ ಸಾಧು, ರಾಧಾ ಯಾದವ್‌, ಅರುಂಧತಿ ರೆಡ್ಡಿ, ಆಲಿಸ್‌ ಕ್ಯಾಪ್ಸಿ, ತಾನಿಯಾ ಭಾಟಿಯಾ, ಸ್ನೇಹ ದೀಪ್ತಿ, ನಂದಿನಿ ಕಶ್ಯಪ್‌, ನಲ್ಲಪುರ ರೆಡ್ಡಿ.

ಮುಂಬೈ ಇಂಡಿಯನ್ಸ್‌: ಯಸ್ತಿಕಾ ಭಾಟಿಯಾ, ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಹೇಲಿ ಮ್ಯಾಥ್ಯೂಸ್‌, ನಾಟ್‌ ಶಿವರ್‌ಬ್ರಂಟ್‌, ಸಜೀವನ್‌ ಸಜನಾ, ಅಮೆಲಿಯಾ ಕೆರ್‌, ಅಮಂಜೋತ್‌ ಕೌರ್‌, ಜಿ. ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಿಮ್‌ ಇಸ್ಮಾಯಿಲ್‌, ಸೈಕಾ ಇಸಾಕ್‌, ಕೋಯ್ಲ್‌ ಟ್ರಯಾನ್‌, ನಾಡಿನ್‌ ಡಿ ಕ್ಲರ್ಕ್‌, ಕೀರ್ತನಾ ಬಾಲಕೃಷ್ಣನ್‌, ಜಿಂತಿಮಣಿ ಕಲಿತಾ, ಬ್ಯಾರನೆಸ್‌ ಸಿಸೋಡಿಯಾ, ಅಮಂದೀಪ್‌ ಕೌರ್‌, ಅಕ್ಷಿತಾ ಮಹೇಶ್ವರಿ.

ಪಂದ್ಯದ ಸಮಯ: ರಾತ್ರಿ 8 ಗಂಟೆ

ಸ್ಥಳ: ಬ್ರೆಬೋರ್ನ್‌ ಸ್ಟೇಡಿಯಂ, ಮುಂಬೈ

ನೇರ ಪ್ರಸಾರ: ಜಿಯೊ ಹಾಟ್‌ಸ್ಟಾರ್‌, ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

6 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago