ಕ್ರೀಡೆ

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಚಾಂಪಿಯನ್‌ ಪಟ್ಟಕ್ಕಾಗಿ ಸೆಣಸಲಿವೆ.

ಮುಂಬೈನ ಬ್ರೆಬೋರ್ನ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎರಡು ತಂಡಗಳ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ.

ಸತತ ಮೂರನೇ ಬಾರಿ ಫೈನಲ್‌ ತಲುಪಿರುವ ಡೆಲ್ಲಿ ಚೊಚ್ಚಲ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದರೆ, ಮೊದಲ ಆವೃತ್ತಿಯಲ್ಲಿ ಚಾಂಪಿಯನ್‌ ಪಟ್ಟಕ್ಕೇರಿದ ಮುಂಬೈ ತಂಡ ಎರಡನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

ಶೆಫಾಲಿ ವರ್ಮಾ ಹಾಗೂ ನಾಯಕಿ ಮೆಗ್‌ ಲ್ಯಾನಿಂಗ್‌ ಬ್ಯಾಟಿಂಗ್‌ನಲ್ಲಿ ಡೆಲ್ಲಿಗೆ ಶಕ್ತಿ ತುಂಬಿದರೆ, ಕಾಶ್ವೀ ಗೌತಮ್‌ ಮತ್ತು ಶಿಖಾ ಪಾಂಡೆ ಬೌಲಿಂಗ್‌ನಲ್ಲಿ ಬಲ ತುಂಬಲಿದ್ದಾರೆ.

ಇತ್ತ ಮುಂಬೈ ತಂಡದ ಪರ ಅಮೋಘ ಫಾರ್ಮ್‌ನಲ್ಲಿರುವ ನ್ಯಾಟ್‌ ಶಿವರ್‌ ಹಾಗೂ ಹೇಯ್ಲಿ ಮ್ಯಾಥ್ಯೂಸ್‌ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಶಕ್ತಿಯಾಗಿದ್ದಾರೆ.

ತಂಡಗಳು ಇಂತಿವೆ:

ಡೆಲ್ಲಿ ಕ್ಯಾಪಿಟಲ್ಸ್‌: ಮೆಗ್‌ ಲ್ಯಾನಿಂಗ್‌ (ನಾಯಕಿ), ಸಾರಾ ಬ್ರೈಸ್‌ (ವಿಕೆಟ್‌ ಕೀಪರ್‌), ಶಫಾಲಿ ವರ್ಮಾ, ಜೆಸ್‌ ಜೊನಾಸ್ಸೆನ್‌, ಜೆಮಿಮಾ ರೋಡ್ರಿಗಸ್‌, ಅನ್ನಾಬೆಲ್‌ ಸದರ್ಲ್ಯಾಂಡ್‌, ಮರಿಜಾನ್ನೆ ಕಪ್ಪ್‌, ನಿಕ್ಕಿ ಪ್ರಸಾದ್‌, ಮಿನ್ನು ಮಾಣಿ, ಶಿಖಾ ಪಾಂಡೆ, ಟೈಟಾಸ್‌ ಸಾಧು, ರಾಧಾ ಯಾದವ್‌, ಅರುಂಧತಿ ರೆಡ್ಡಿ, ಆಲಿಸ್‌ ಕ್ಯಾಪ್ಸಿ, ತಾನಿಯಾ ಭಾಟಿಯಾ, ಸ್ನೇಹ ದೀಪ್ತಿ, ನಂದಿನಿ ಕಶ್ಯಪ್‌, ನಲ್ಲಪುರ ರೆಡ್ಡಿ.

ಮುಂಬೈ ಇಂಡಿಯನ್ಸ್‌: ಯಸ್ತಿಕಾ ಭಾಟಿಯಾ, ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಹೇಲಿ ಮ್ಯಾಥ್ಯೂಸ್‌, ನಾಟ್‌ ಶಿವರ್‌ಬ್ರಂಟ್‌, ಸಜೀವನ್‌ ಸಜನಾ, ಅಮೆಲಿಯಾ ಕೆರ್‌, ಅಮಂಜೋತ್‌ ಕೌರ್‌, ಜಿ. ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಿಮ್‌ ಇಸ್ಮಾಯಿಲ್‌, ಸೈಕಾ ಇಸಾಕ್‌, ಕೋಯ್ಲ್‌ ಟ್ರಯಾನ್‌, ನಾಡಿನ್‌ ಡಿ ಕ್ಲರ್ಕ್‌, ಕೀರ್ತನಾ ಬಾಲಕೃಷ್ಣನ್‌, ಜಿಂತಿಮಣಿ ಕಲಿತಾ, ಬ್ಯಾರನೆಸ್‌ ಸಿಸೋಡಿಯಾ, ಅಮಂದೀಪ್‌ ಕೌರ್‌, ಅಕ್ಷಿತಾ ಮಹೇಶ್ವರಿ.

ಪಂದ್ಯದ ಸಮಯ: ರಾತ್ರಿ 8 ಗಂಟೆ

ಸ್ಥಳ: ಬ್ರೆಬೋರ್ನ್‌ ಸ್ಟೇಡಿಯಂ, ಮುಂಬೈ

ನೇರ ಪ್ರಸಾರ: ಜಿಯೊ ಹಾಟ್‌ಸ್ಟಾರ್‌, ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌

ಆಂದೋಲನ ಡೆಸ್ಕ್

Recent Posts

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

1 hour ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

4 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

8 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

8 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

8 hours ago