ಕ್ರೀಡೆ

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಚಾಂಪಿಯನ್‌ ಪಟ್ಟಕ್ಕಾಗಿ ಸೆಣಸಲಿವೆ.

ಮುಂಬೈನ ಬ್ರೆಬೋರ್ನ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎರಡು ತಂಡಗಳ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ.

ಸತತ ಮೂರನೇ ಬಾರಿ ಫೈನಲ್‌ ತಲುಪಿರುವ ಡೆಲ್ಲಿ ಚೊಚ್ಚಲ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದರೆ, ಮೊದಲ ಆವೃತ್ತಿಯಲ್ಲಿ ಚಾಂಪಿಯನ್‌ ಪಟ್ಟಕ್ಕೇರಿದ ಮುಂಬೈ ತಂಡ ಎರಡನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

ಶೆಫಾಲಿ ವರ್ಮಾ ಹಾಗೂ ನಾಯಕಿ ಮೆಗ್‌ ಲ್ಯಾನಿಂಗ್‌ ಬ್ಯಾಟಿಂಗ್‌ನಲ್ಲಿ ಡೆಲ್ಲಿಗೆ ಶಕ್ತಿ ತುಂಬಿದರೆ, ಕಾಶ್ವೀ ಗೌತಮ್‌ ಮತ್ತು ಶಿಖಾ ಪಾಂಡೆ ಬೌಲಿಂಗ್‌ನಲ್ಲಿ ಬಲ ತುಂಬಲಿದ್ದಾರೆ.

ಇತ್ತ ಮುಂಬೈ ತಂಡದ ಪರ ಅಮೋಘ ಫಾರ್ಮ್‌ನಲ್ಲಿರುವ ನ್ಯಾಟ್‌ ಶಿವರ್‌ ಹಾಗೂ ಹೇಯ್ಲಿ ಮ್ಯಾಥ್ಯೂಸ್‌ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಶಕ್ತಿಯಾಗಿದ್ದಾರೆ.

ತಂಡಗಳು ಇಂತಿವೆ:

ಡೆಲ್ಲಿ ಕ್ಯಾಪಿಟಲ್ಸ್‌: ಮೆಗ್‌ ಲ್ಯಾನಿಂಗ್‌ (ನಾಯಕಿ), ಸಾರಾ ಬ್ರೈಸ್‌ (ವಿಕೆಟ್‌ ಕೀಪರ್‌), ಶಫಾಲಿ ವರ್ಮಾ, ಜೆಸ್‌ ಜೊನಾಸ್ಸೆನ್‌, ಜೆಮಿಮಾ ರೋಡ್ರಿಗಸ್‌, ಅನ್ನಾಬೆಲ್‌ ಸದರ್ಲ್ಯಾಂಡ್‌, ಮರಿಜಾನ್ನೆ ಕಪ್ಪ್‌, ನಿಕ್ಕಿ ಪ್ರಸಾದ್‌, ಮಿನ್ನು ಮಾಣಿ, ಶಿಖಾ ಪಾಂಡೆ, ಟೈಟಾಸ್‌ ಸಾಧು, ರಾಧಾ ಯಾದವ್‌, ಅರುಂಧತಿ ರೆಡ್ಡಿ, ಆಲಿಸ್‌ ಕ್ಯಾಪ್ಸಿ, ತಾನಿಯಾ ಭಾಟಿಯಾ, ಸ್ನೇಹ ದೀಪ್ತಿ, ನಂದಿನಿ ಕಶ್ಯಪ್‌, ನಲ್ಲಪುರ ರೆಡ್ಡಿ.

ಮುಂಬೈ ಇಂಡಿಯನ್ಸ್‌: ಯಸ್ತಿಕಾ ಭಾಟಿಯಾ, ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಹೇಲಿ ಮ್ಯಾಥ್ಯೂಸ್‌, ನಾಟ್‌ ಶಿವರ್‌ಬ್ರಂಟ್‌, ಸಜೀವನ್‌ ಸಜನಾ, ಅಮೆಲಿಯಾ ಕೆರ್‌, ಅಮಂಜೋತ್‌ ಕೌರ್‌, ಜಿ. ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಿಮ್‌ ಇಸ್ಮಾಯಿಲ್‌, ಸೈಕಾ ಇಸಾಕ್‌, ಕೋಯ್ಲ್‌ ಟ್ರಯಾನ್‌, ನಾಡಿನ್‌ ಡಿ ಕ್ಲರ್ಕ್‌, ಕೀರ್ತನಾ ಬಾಲಕೃಷ್ಣನ್‌, ಜಿಂತಿಮಣಿ ಕಲಿತಾ, ಬ್ಯಾರನೆಸ್‌ ಸಿಸೋಡಿಯಾ, ಅಮಂದೀಪ್‌ ಕೌರ್‌, ಅಕ್ಷಿತಾ ಮಹೇಶ್ವರಿ.

ಪಂದ್ಯದ ಸಮಯ: ರಾತ್ರಿ 8 ಗಂಟೆ

ಸ್ಥಳ: ಬ್ರೆಬೋರ್ನ್‌ ಸ್ಟೇಡಿಯಂ, ಮುಂಬೈ

ನೇರ ಪ್ರಸಾರ: ಜಿಯೊ ಹಾಟ್‌ಸ್ಟಾರ್‌, ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago