ಕ್ರೀಡೆ

WPL final: ಚಾಂಪಿಯನ್‌ ಪಟ್ಟಕ್ಕಾಗಿ ಮುಂಬೈ v/s ಡೆಲ್ಲಿ ಹೋರಾಟ

ಮುಂಬೈ: ಮಹಿಳಾ ಪ್ರೀಮಿಯರ್‌ ಲೀಗ್‌ (WPL) ಟಿ20 ಕ್ರಿಕೆಟ್‌ ಟೂನಿಯ ಫೈನಲ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಚಾಂಪಿಯನ್‌ ಪಟ್ಟಕ್ಕಾಗಿ ಸೆಣಸಲಿವೆ.

ಮುಂಬೈನ ಬ್ರೆಬೋರ್ನ್‌ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎರಡು ತಂಡಗಳ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ.

ಸತತ ಮೂರನೇ ಬಾರಿ ಫೈನಲ್‌ ತಲುಪಿರುವ ಡೆಲ್ಲಿ ಚೊಚ್ಚಲ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದರೆ, ಮೊದಲ ಆವೃತ್ತಿಯಲ್ಲಿ ಚಾಂಪಿಯನ್‌ ಪಟ್ಟಕ್ಕೇರಿದ ಮುಂಬೈ ತಂಡ ಎರಡನೇ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದೆ.

ಶೆಫಾಲಿ ವರ್ಮಾ ಹಾಗೂ ನಾಯಕಿ ಮೆಗ್‌ ಲ್ಯಾನಿಂಗ್‌ ಬ್ಯಾಟಿಂಗ್‌ನಲ್ಲಿ ಡೆಲ್ಲಿಗೆ ಶಕ್ತಿ ತುಂಬಿದರೆ, ಕಾಶ್ವೀ ಗೌತಮ್‌ ಮತ್ತು ಶಿಖಾ ಪಾಂಡೆ ಬೌಲಿಂಗ್‌ನಲ್ಲಿ ಬಲ ತುಂಬಲಿದ್ದಾರೆ.

ಇತ್ತ ಮುಂಬೈ ತಂಡದ ಪರ ಅಮೋಘ ಫಾರ್ಮ್‌ನಲ್ಲಿರುವ ನ್ಯಾಟ್‌ ಶಿವರ್‌ ಹಾಗೂ ಹೇಯ್ಲಿ ಮ್ಯಾಥ್ಯೂಸ್‌ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ಶಕ್ತಿಯಾಗಿದ್ದಾರೆ.

ತಂಡಗಳು ಇಂತಿವೆ:

ಡೆಲ್ಲಿ ಕ್ಯಾಪಿಟಲ್ಸ್‌: ಮೆಗ್‌ ಲ್ಯಾನಿಂಗ್‌ (ನಾಯಕಿ), ಸಾರಾ ಬ್ರೈಸ್‌ (ವಿಕೆಟ್‌ ಕೀಪರ್‌), ಶಫಾಲಿ ವರ್ಮಾ, ಜೆಸ್‌ ಜೊನಾಸ್ಸೆನ್‌, ಜೆಮಿಮಾ ರೋಡ್ರಿಗಸ್‌, ಅನ್ನಾಬೆಲ್‌ ಸದರ್ಲ್ಯಾಂಡ್‌, ಮರಿಜಾನ್ನೆ ಕಪ್ಪ್‌, ನಿಕ್ಕಿ ಪ್ರಸಾದ್‌, ಮಿನ್ನು ಮಾಣಿ, ಶಿಖಾ ಪಾಂಡೆ, ಟೈಟಾಸ್‌ ಸಾಧು, ರಾಧಾ ಯಾದವ್‌, ಅರುಂಧತಿ ರೆಡ್ಡಿ, ಆಲಿಸ್‌ ಕ್ಯಾಪ್ಸಿ, ತಾನಿಯಾ ಭಾಟಿಯಾ, ಸ್ನೇಹ ದೀಪ್ತಿ, ನಂದಿನಿ ಕಶ್ಯಪ್‌, ನಲ್ಲಪುರ ರೆಡ್ಡಿ.

ಮುಂಬೈ ಇಂಡಿಯನ್ಸ್‌: ಯಸ್ತಿಕಾ ಭಾಟಿಯಾ, ಹರ್ಮನ್‌ಪ್ರೀತ್‌ ಕೌರ್‌ (ನಾಯಕಿ), ಹೇಲಿ ಮ್ಯಾಥ್ಯೂಸ್‌, ನಾಟ್‌ ಶಿವರ್‌ಬ್ರಂಟ್‌, ಸಜೀವನ್‌ ಸಜನಾ, ಅಮೆಲಿಯಾ ಕೆರ್‌, ಅಮಂಜೋತ್‌ ಕೌರ್‌, ಜಿ. ಕಮಲಿನಿ, ಸಂಸ್ಕೃತಿ ಗುಪ್ತಾ, ಶಬ್ನಿಮ್‌ ಇಸ್ಮಾಯಿಲ್‌, ಸೈಕಾ ಇಸಾಕ್‌, ಕೋಯ್ಲ್‌ ಟ್ರಯಾನ್‌, ನಾಡಿನ್‌ ಡಿ ಕ್ಲರ್ಕ್‌, ಕೀರ್ತನಾ ಬಾಲಕೃಷ್ಣನ್‌, ಜಿಂತಿಮಣಿ ಕಲಿತಾ, ಬ್ಯಾರನೆಸ್‌ ಸಿಸೋಡಿಯಾ, ಅಮಂದೀಪ್‌ ಕೌರ್‌, ಅಕ್ಷಿತಾ ಮಹೇಶ್ವರಿ.

ಪಂದ್ಯದ ಸಮಯ: ರಾತ್ರಿ 8 ಗಂಟೆ

ಸ್ಥಳ: ಬ್ರೆಬೋರ್ನ್‌ ಸ್ಟೇಡಿಯಂ, ಮುಂಬೈ

ನೇರ ಪ್ರಸಾರ: ಜಿಯೊ ಹಾಟ್‌ಸ್ಟಾರ್‌, ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

46 mins ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

3 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

11 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

11 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

11 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

11 hours ago