ಕ್ರೀಡೆ

WPL: ಚೊಚ್ಚಲ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದ ಮುಂಬೈ ಇಂಡಿಯನ್ಸ್‌

ಮುಂಬೈ: ಮುಂಬೈ ಇಂಡಿಯನ್ಸ್ ತಂಡವು ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಏಳು ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿತು.

ಮೆಗ್ ಲ್ಯಾನಿಂಗ್‌ ನೇತೃತ್ವದ ಡೆಲ್ಲಿ ತಂಡ ನೀಡಿದ 132 ರನ್‌ಗಳ ಗುರಿ ಬೆನ್ನತ್ತಿದ ಮುಂಬೈ 19.3 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು 134 ರನ್‌ ಗಳಿಸಿತು.

ನತಾಲಿ ಸಿವೆರ್ ಬ್ರಂಟ್‌ (ಔಟಾಗದೆ 60, 55ಎ, 4X7) ಮತ್ತು ಹರ್ಮನ್‌ಪ್ರೀತ್ (37, 39ಎ, 4X5) ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 23 ರನ್‌ಗಳಿಗೆ ಎರಡು ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದ್ದ ತಂಡಕ್ಕೆ ಇವರಿಬ್ಬರು ಆಸರೆಯಾದರು. ಮೂರನೇ ವಿಕೆಟ್‌ ಜೊತೆಯಾಟದಲ್ಲಿ 72 ರನ್‌ಗಳನ್ನು ಸೇರಿಸಿದರು.

ಅಮೆಲಿ ಕೆರ್ (ಔಟಾಗದೆ 14) ಕೊಡುಗೆ ನೀಡಿದರು. ಡೆಲ್ಲಿ ಪರ ರಾಧಾ ಯಾದವ್‌ (24ಕ್ಕೆ 1) ಮತ್ತು ಜೆಸ್‌ ಜೊನಾಸೆನ್‌ (28ಕ್ಕೆ 1) ತಲಾ ಒಂದು ವಿಕೆಟ್‌ ಗಳಿಸಿದರು.

ಗೌರವದ ಮೊತ್ತ: ಕೊನೆಯ ಕ್ರಮಾಂಕದ ಬ್ಯಾಟರ್ ರಾಧಾ ಯಾದವ್ ಹಾಗೂ ಶಿಖಾ ಪಾಂಡೆ ಅವರು ಡೆಲ್ಲಿ ತಂಡವು ಗೌರವದ ಮೊತ್ತ ಗಳಿಸಲು ಕಾರಣರಾಗಿದ್ದರು.

ಮುಂಬೈ ತಂಡದ ಇಸಾಬೆಲ್‌ ವಾಂಗ್ (42ಕ್ಕೆ3) ಮತ್ತು ಹೇಯಲಿ ಮ್ಯಾಥ್ಯೂಸ್ (5ಕ್ಕೆ3) ಅವರ ದಾಳಿಯ ಮುಂದೆ ಡೆಲ್ಲಿ ಬ್ಯಾಟರ್‌ಗಳು ಪರದಾಡಿದರು.

ಡೆಲ್ಲಿ ತಂಡವು 79 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತ್ತು. ಈ ಹಂತದಲ್ಲಿ ಕ್ರೀಸ್‌ಗೆ ಬಂದ ರಾಧಾ ದಿಟ್ಟ ಆಟವಾಡಿದರು. ಅವರು ಹಾಗೂ ಶಿಖಾ (27; 17ಎ) ಕೊನೆಯ ವಿಕೆಟ್ ಜೊತೆಯಾಟದಲ್ಲಿ 52 ರನ್‌ ಸೇರಿಸಿದರು. ರಾಧಾ 12 ಎಸೆತಗಳನ್ನು ಎದುರಿಸಿ 27 ರನ್‌ ಗಳಿಸಿದರು. ಅದರಲ್ಲಿ ಎರಡು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳಿದ್ದವು.

ಟಾಸ್‌ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೆಗ್ ಲ್ಯಾನಿಂಗ್ (35; 29ಎ) ಉತ್ತಮ ಆರಂಭ ನೀಡುವ ಪ್ರಯತ್ನ ಮಾಡಿದರು. ಆದರೆ, ಇನ್ನೊಂದು ತುದಿಯಲ್ಲಿ ಶಫಾಲಿ ವರ್ಮಾ, ಎಲೈಸ್ ಕ್ಯಾಪ್ಸಿ ಹಾಗೂ ಜೆಮಿಮಾ ರಾಡ್ರಿಗಸ್ ಸೇರಿದಂತೆ ಉಳಿದ ಬ್ಯಾಟರ್‌ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ.

ಮುಂಬೈ ತಂಡದ ಅಮೆಲಿ ಕೆರ್‌ ಎರಡು ವಿಕೆಟ್‌ಗಳನ್ನು ಗಳಿಸಿದರು.

ಸಂಕ್ಷಿಪ್ತ ಸ್ಕೋರು:

ಡೆಲ್ಲಿ ಕ್ಯಾಪಿಟಲ್ಸ್: 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 131 (ಮೆಗ್ ಲ್ಯಾನಿಂಗ್ 35, ಶಿಖಾ ಪಾಂಡೆ ಔಟಾಗದೆ 27, ರಾಧಾ ಯಾದವ್ ಔಟಾಗದೆ 27, ಇಸಾಬೆಲ್‌ ವಾಂಗ್ 42ಕ್ಕೆ3, ಅಮೆಲಿ ಕೆರ್ 18ಕ್ಕೆ2, ಹೆಯಲಿ ಮ್ಯಾಥ್ಯೂಸ್ 5ಕ್ಕೆ3)

ಮುಂಬೈ ಇಂಡಿಯನ್ಸ್: 19.3 ಓವರ್‌ಗಳಲ್ಲಿ 3 ವಿಕೆಟ್‌ಗೆ 134 (ಹೇಯಲಿ ಮ್ಯಾಥ್ಯೂಸ್‌ 13, ನತಾಲಿ ಸಿವೆರ್ ಬ್ರಂಟ್‌ ಔಟಾಗದೆ 60, ಹರ್ಮನ್‌ಪ್ರೀತ್ ಕೌರ್ ರನೌಟ್‌ 37, ಅಮೆಲಿ ಕೆರ್ ಔಟಾಗದೆ 14).

ಫಲಿತಾಂಶ: ಮುಂಬೈ ಇಂಡಿಯನ್ಸ್‌ಗೆ ಏಳು ವಿಕೆಟ್‌ ಜಯ ಮತ್ತು ಪ್ರಶಸ್ತಿ

andolanait

Recent Posts

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

32 mins ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

47 mins ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

1 hour ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

1 hour ago

ಓದುಗರ ಪತ್ರ: ಕಬ್ಬಿಣದ ಸಲಾಕೆ ತೆರವುಗೊಳಿಸಿ

ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ…

1 hour ago

ಓದುಗರ ಪತ್ರ: ಹೈಡ್ರೋಪೋನಿಕ್ಸ್ ಟೆಕ್‌ಪಾರ್ಕ್ ಸ್ಥಾಪಿಸಿ

ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು…

1 hour ago