ಕ್ರೀಡೆ

WPL: ಚೊಚ್ಚಲ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದ ಮುಂಬೈ ಇಂಡಿಯನ್ಸ್‌

ಮುಂಬೈ: ಮುಂಬೈ ಇಂಡಿಯನ್ಸ್ ತಂಡವು ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್‌) ಕ್ರಿಕೆಟ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟೂರ್ನಿಯ ಫೈನಲ್ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಏಳು ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿತು.

ಮೆಗ್ ಲ್ಯಾನಿಂಗ್‌ ನೇತೃತ್ವದ ಡೆಲ್ಲಿ ತಂಡ ನೀಡಿದ 132 ರನ್‌ಗಳ ಗುರಿ ಬೆನ್ನತ್ತಿದ ಮುಂಬೈ 19.3 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು 134 ರನ್‌ ಗಳಿಸಿತು.

ನತಾಲಿ ಸಿವೆರ್ ಬ್ರಂಟ್‌ (ಔಟಾಗದೆ 60, 55ಎ, 4X7) ಮತ್ತು ಹರ್ಮನ್‌ಪ್ರೀತ್ (37, 39ಎ, 4X5) ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 23 ರನ್‌ಗಳಿಗೆ ಎರಡು ವಿಕೆಟ್‌ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದ್ದ ತಂಡಕ್ಕೆ ಇವರಿಬ್ಬರು ಆಸರೆಯಾದರು. ಮೂರನೇ ವಿಕೆಟ್‌ ಜೊತೆಯಾಟದಲ್ಲಿ 72 ರನ್‌ಗಳನ್ನು ಸೇರಿಸಿದರು.

ಅಮೆಲಿ ಕೆರ್ (ಔಟಾಗದೆ 14) ಕೊಡುಗೆ ನೀಡಿದರು. ಡೆಲ್ಲಿ ಪರ ರಾಧಾ ಯಾದವ್‌ (24ಕ್ಕೆ 1) ಮತ್ತು ಜೆಸ್‌ ಜೊನಾಸೆನ್‌ (28ಕ್ಕೆ 1) ತಲಾ ಒಂದು ವಿಕೆಟ್‌ ಗಳಿಸಿದರು.

ಗೌರವದ ಮೊತ್ತ: ಕೊನೆಯ ಕ್ರಮಾಂಕದ ಬ್ಯಾಟರ್ ರಾಧಾ ಯಾದವ್ ಹಾಗೂ ಶಿಖಾ ಪಾಂಡೆ ಅವರು ಡೆಲ್ಲಿ ತಂಡವು ಗೌರವದ ಮೊತ್ತ ಗಳಿಸಲು ಕಾರಣರಾಗಿದ್ದರು.

ಮುಂಬೈ ತಂಡದ ಇಸಾಬೆಲ್‌ ವಾಂಗ್ (42ಕ್ಕೆ3) ಮತ್ತು ಹೇಯಲಿ ಮ್ಯಾಥ್ಯೂಸ್ (5ಕ್ಕೆ3) ಅವರ ದಾಳಿಯ ಮುಂದೆ ಡೆಲ್ಲಿ ಬ್ಯಾಟರ್‌ಗಳು ಪರದಾಡಿದರು.

ಡೆಲ್ಲಿ ತಂಡವು 79 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿತ್ತು. ಈ ಹಂತದಲ್ಲಿ ಕ್ರೀಸ್‌ಗೆ ಬಂದ ರಾಧಾ ದಿಟ್ಟ ಆಟವಾಡಿದರು. ಅವರು ಹಾಗೂ ಶಿಖಾ (27; 17ಎ) ಕೊನೆಯ ವಿಕೆಟ್ ಜೊತೆಯಾಟದಲ್ಲಿ 52 ರನ್‌ ಸೇರಿಸಿದರು. ರಾಧಾ 12 ಎಸೆತಗಳನ್ನು ಎದುರಿಸಿ 27 ರನ್‌ ಗಳಿಸಿದರು. ಅದರಲ್ಲಿ ಎರಡು ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳಿದ್ದವು.

ಟಾಸ್‌ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೆಗ್ ಲ್ಯಾನಿಂಗ್ (35; 29ಎ) ಉತ್ತಮ ಆರಂಭ ನೀಡುವ ಪ್ರಯತ್ನ ಮಾಡಿದರು. ಆದರೆ, ಇನ್ನೊಂದು ತುದಿಯಲ್ಲಿ ಶಫಾಲಿ ವರ್ಮಾ, ಎಲೈಸ್ ಕ್ಯಾಪ್ಸಿ ಹಾಗೂ ಜೆಮಿಮಾ ರಾಡ್ರಿಗಸ್ ಸೇರಿದಂತೆ ಉಳಿದ ಬ್ಯಾಟರ್‌ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ.

ಮುಂಬೈ ತಂಡದ ಅಮೆಲಿ ಕೆರ್‌ ಎರಡು ವಿಕೆಟ್‌ಗಳನ್ನು ಗಳಿಸಿದರು.

ಸಂಕ್ಷಿಪ್ತ ಸ್ಕೋರು:

ಡೆಲ್ಲಿ ಕ್ಯಾಪಿಟಲ್ಸ್: 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 131 (ಮೆಗ್ ಲ್ಯಾನಿಂಗ್ 35, ಶಿಖಾ ಪಾಂಡೆ ಔಟಾಗದೆ 27, ರಾಧಾ ಯಾದವ್ ಔಟಾಗದೆ 27, ಇಸಾಬೆಲ್‌ ವಾಂಗ್ 42ಕ್ಕೆ3, ಅಮೆಲಿ ಕೆರ್ 18ಕ್ಕೆ2, ಹೆಯಲಿ ಮ್ಯಾಥ್ಯೂಸ್ 5ಕ್ಕೆ3)

ಮುಂಬೈ ಇಂಡಿಯನ್ಸ್: 19.3 ಓವರ್‌ಗಳಲ್ಲಿ 3 ವಿಕೆಟ್‌ಗೆ 134 (ಹೇಯಲಿ ಮ್ಯಾಥ್ಯೂಸ್‌ 13, ನತಾಲಿ ಸಿವೆರ್ ಬ್ರಂಟ್‌ ಔಟಾಗದೆ 60, ಹರ್ಮನ್‌ಪ್ರೀತ್ ಕೌರ್ ರನೌಟ್‌ 37, ಅಮೆಲಿ ಕೆರ್ ಔಟಾಗದೆ 14).

ಫಲಿತಾಂಶ: ಮುಂಬೈ ಇಂಡಿಯನ್ಸ್‌ಗೆ ಏಳು ವಿಕೆಟ್‌ ಜಯ ಮತ್ತು ಪ್ರಶಸ್ತಿ

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

20 mins ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

3 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

7 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

23 hours ago