ಬೆಂಗಳೂರು: ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್ನ(ಡಬ್ಲ್ಯುಪಿಎಲ್) ಚೊಚ್ಚಲ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ನಾಯಕಿಯಾಗಿ ಸ್ಮೃತಿ ಮಂದಾನಾ ಅವರನ್ನು ನೇಮಕ ಮಾಡಲಾಗಿದೆ.
ಭಾರತ ಮಹಿಳೆಯರ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನಾ, ಇತ್ತೀಚೆಗೆ ನಡೆದ ಡಬ್ಲ್ಯುಪಿಎಲ್ ಹರಾಜಿನಲ್ಲಿ ₹3.40 ಕೋಟಿಗೆ ಆರ್ಸಿಬಿ ತಂಡ ಸೇರಿದ್ದರು.
ಫ್ರಾಂಚೈಸಿಯ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಿಡಿಯೊ ಸಂದೇಶದ ಮೂಲಕ ಈ ಘೋಷಣೆ ಮಾಡಲಾಗಿದೆ. ಆರ್ಸಿಬಿಯ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪುರುಷರ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಸಂದೇಶ ನೀಡಿದ್ದಾರೆ.
‘ಡಬ್ಲ್ಯುಪಿಎಲ್ನಲ್ಲಿ ಅತ್ಯಂತ ವಿಶೇಷ ಆರ್ಸಿಬಿ ತಂಡವನ್ನು ಮತ್ತೊಂದು ನಂ 18 ಮುನ್ನಡೆಸುವ ಸಮಯವಿದು. ಹೌದು, ನಾವು ಮಾತನಾಡುತ್ತಿರುವುದು ಸ್ಮೃತಿ ಮಂದಾನಾ ಅವರ ಬಗ್ಗೆ. ಗೋ ಆನ್ ಸ್ಮೃತಿ ಮಂದಾನಾ. ನಿಮಗೆ ಜಗತ್ತಿನ ಅತ್ಯುತ್ತಮ ತಂಡ ಮತ್ತು ಅತ್ಯುತ್ತಮ ಅಭಿಮಾನಿಗಳ ಬೆಂಬಲವಿದೆ’ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಆರ್ಸಿಬಿ ಚೇರ್ಮನ್ ಪ್ರತ್ಮೇಶ್ ಮಿಶ್ರಾ ಅವರು, ‘ಸ್ಮೃತಿ ಅವರಿಗೆ ನಾವು ನಾಯಕತ್ವದ ಹೊಣೆ ನೀಡಿದ್ದೇವೆ. ಆರ್ಸಿಬಿಯನ್ನು ಅತ್ಯಂತ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…