ಬೆಂಗಳೂರು: ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್ನ(ಡಬ್ಲ್ಯುಪಿಎಲ್) ಚೊಚ್ಚಲ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ನಾಯಕಿಯಾಗಿ ಸ್ಮೃತಿ ಮಂದಾನಾ ಅವರನ್ನು ನೇಮಕ ಮಾಡಲಾಗಿದೆ.
ಭಾರತ ಮಹಿಳೆಯರ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನಾ, ಇತ್ತೀಚೆಗೆ ನಡೆದ ಡಬ್ಲ್ಯುಪಿಎಲ್ ಹರಾಜಿನಲ್ಲಿ ₹3.40 ಕೋಟಿಗೆ ಆರ್ಸಿಬಿ ತಂಡ ಸೇರಿದ್ದರು.
ಫ್ರಾಂಚೈಸಿಯ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಿಡಿಯೊ ಸಂದೇಶದ ಮೂಲಕ ಈ ಘೋಷಣೆ ಮಾಡಲಾಗಿದೆ. ಆರ್ಸಿಬಿಯ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪುರುಷರ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಸಂದೇಶ ನೀಡಿದ್ದಾರೆ.
‘ಡಬ್ಲ್ಯುಪಿಎಲ್ನಲ್ಲಿ ಅತ್ಯಂತ ವಿಶೇಷ ಆರ್ಸಿಬಿ ತಂಡವನ್ನು ಮತ್ತೊಂದು ನಂ 18 ಮುನ್ನಡೆಸುವ ಸಮಯವಿದು. ಹೌದು, ನಾವು ಮಾತನಾಡುತ್ತಿರುವುದು ಸ್ಮೃತಿ ಮಂದಾನಾ ಅವರ ಬಗ್ಗೆ. ಗೋ ಆನ್ ಸ್ಮೃತಿ ಮಂದಾನಾ. ನಿಮಗೆ ಜಗತ್ತಿನ ಅತ್ಯುತ್ತಮ ತಂಡ ಮತ್ತು ಅತ್ಯುತ್ತಮ ಅಭಿಮಾನಿಗಳ ಬೆಂಬಲವಿದೆ’ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಆರ್ಸಿಬಿ ಚೇರ್ಮನ್ ಪ್ರತ್ಮೇಶ್ ಮಿಶ್ರಾ ಅವರು, ‘ಸ್ಮೃತಿ ಅವರಿಗೆ ನಾವು ನಾಯಕತ್ವದ ಹೊಣೆ ನೀಡಿದ್ದೇವೆ. ಆರ್ಸಿಬಿಯನ್ನು ಅತ್ಯಂತ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.
ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ…
ಹೊಸದಿಲ್ಲಿ : ಇಂದಿನಿಂದಲೇ ದೇಶದದ್ಯಾಂತ ಜಾರಿಯಾಗುವಂತೆ ರೈಲು ಪ್ರಯಾಣ ದರ ಏರಿಕೆಯಾಗಿದೆ. ಕಳೆದ ವಾರ ರೈಲ್ವೆ ಇಲಾಖೆ ಪ್ರಯಾಣ ದರವನ್ನು…
ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ…
ಮೈಸೂರು : ಮೈಸೂರು ಅರಮನೆ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು…
ಮೈಸೂರು : ಮೈಸೂರಿನ ಅರಮನೆ ಬಳಿ ಹಿಲೀಯಂ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ ಪ್ರಕರಣ ಸಂಬಂಧ ಶುಕ್ರವಾರ ಜಿಲ್ಲಾ ಉಸ್ತುವಾರಿ…