ಕ್ರೀಡೆ

WPL: ಆರ್‌ಸಿಬಿ ಮಹಿಳಾ ತಂಡದ ನಾಯಕಿ ಸ್ಮೃತಿ ಮಂದಾನಾ

ಬೆಂಗಳೂರು: ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್‌ನ(ಡಬ್ಲ್ಯುಪಿಎಲ್‌) ಚೊಚ್ಚಲ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ನಾಯಕಿಯಾಗಿ ಸ್ಮೃತಿ ಮಂದಾನಾ ಅವರನ್ನು ನೇಮಕ ಮಾಡಲಾಗಿದೆ.

ಭಾರತ ಮಹಿಳೆಯರ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನಾ, ಇತ್ತೀಚೆಗೆ ನಡೆದ ಡಬ್ಲ್ಯುಪಿಎಲ್‌ ಹರಾಜಿನಲ್ಲಿ ₹3.40 ಕೋಟಿಗೆ ಆರ್‌ಸಿಬಿ ತಂಡ ಸೇರಿದ್ದರು.

ಫ್ರಾಂಚೈಸಿಯ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಿಡಿಯೊ ಸಂದೇಶದ ಮೂಲಕ ಈ ಘೋಷಣೆ ಮಾಡಲಾಗಿದೆ. ಆರ್‌ಸಿಬಿಯ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪುರುಷರ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಸಂದೇಶ ನೀಡಿದ್ದಾರೆ.

‘ಡಬ್ಲ್ಯುಪಿಎಲ್‌ನಲ್ಲಿ ಅತ್ಯಂತ ವಿಶೇಷ ಆರ್‌ಸಿಬಿ ತಂಡವನ್ನು ಮತ್ತೊಂದು ನಂ 18 ಮುನ್ನಡೆಸುವ ಸಮಯವಿದು. ಹೌದು, ನಾವು ಮಾತನಾಡುತ್ತಿರುವುದು ಸ್ಮೃತಿ ಮಂದಾನಾ ಅವರ ಬಗ್ಗೆ. ಗೋ ಆನ್ ಸ್ಮೃತಿ ಮಂದಾನಾ. ನಿಮಗೆ ಜಗತ್ತಿನ ಅತ್ಯುತ್ತಮ ತಂಡ ಮತ್ತು ಅತ್ಯುತ್ತಮ ಅಭಿಮಾನಿಗಳ ಬೆಂಬಲವಿದೆ’ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಆರ್‌ಸಿಬಿ ಚೇರ್ಮನ್ ಪ್ರತ್ಮೇಶ್ ಮಿಶ್ರಾ ಅವರು, ‘ಸ್ಮೃತಿ ಅವರಿಗೆ ನಾವು ನಾಯಕತ್ವದ ಹೊಣೆ ನೀಡಿದ್ದೇವೆ. ಆರ್‌ಸಿಬಿಯನ್ನು ಅತ್ಯಂತ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.

andolanait

Recent Posts

ಕರ್ನಾಟಕ ಡಿಜಿಟಲ್‌ ಪ್ರಪಂಚದ ಸೃಜನಶೀಲ ರಾಜಧಾನಿ ಎಂಬುದು ನಮ್ಮ ಕನಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ…

18 mins ago

ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌

ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ…

40 mins ago

ಡಿಕೆಶಿ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ: ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: 2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್‌ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್‌ ಶಾಸಕ ಗಣಿಗ…

1 hour ago

ರೈತರಿಗೆ ಕಿರುಕುಳ ನೀಡುವ ಖಾಸಗಿ ಫೈನಾನ್ಸಿಯರ್‌ಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ…

1 hour ago

ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…

1 hour ago

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

3 hours ago