ಬೆಂಗಳೂರು: ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್ನ(ಡಬ್ಲ್ಯುಪಿಎಲ್) ಚೊಚ್ಚಲ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ನಾಯಕಿಯಾಗಿ ಸ್ಮೃತಿ ಮಂದಾನಾ ಅವರನ್ನು ನೇಮಕ ಮಾಡಲಾಗಿದೆ.
ಭಾರತ ಮಹಿಳೆಯರ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನಾ, ಇತ್ತೀಚೆಗೆ ನಡೆದ ಡಬ್ಲ್ಯುಪಿಎಲ್ ಹರಾಜಿನಲ್ಲಿ ₹3.40 ಕೋಟಿಗೆ ಆರ್ಸಿಬಿ ತಂಡ ಸೇರಿದ್ದರು.
ಫ್ರಾಂಚೈಸಿಯ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಿಡಿಯೊ ಸಂದೇಶದ ಮೂಲಕ ಈ ಘೋಷಣೆ ಮಾಡಲಾಗಿದೆ. ಆರ್ಸಿಬಿಯ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಪುರುಷರ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಸಂದೇಶ ನೀಡಿದ್ದಾರೆ.
‘ಡಬ್ಲ್ಯುಪಿಎಲ್ನಲ್ಲಿ ಅತ್ಯಂತ ವಿಶೇಷ ಆರ್ಸಿಬಿ ತಂಡವನ್ನು ಮತ್ತೊಂದು ನಂ 18 ಮುನ್ನಡೆಸುವ ಸಮಯವಿದು. ಹೌದು, ನಾವು ಮಾತನಾಡುತ್ತಿರುವುದು ಸ್ಮೃತಿ ಮಂದಾನಾ ಅವರ ಬಗ್ಗೆ. ಗೋ ಆನ್ ಸ್ಮೃತಿ ಮಂದಾನಾ. ನಿಮಗೆ ಜಗತ್ತಿನ ಅತ್ಯುತ್ತಮ ತಂಡ ಮತ್ತು ಅತ್ಯುತ್ತಮ ಅಭಿಮಾನಿಗಳ ಬೆಂಬಲವಿದೆ’ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಆರ್ಸಿಬಿ ಚೇರ್ಮನ್ ಪ್ರತ್ಮೇಶ್ ಮಿಶ್ರಾ ಅವರು, ‘ಸ್ಮೃತಿ ಅವರಿಗೆ ನಾವು ನಾಯಕತ್ವದ ಹೊಣೆ ನೀಡಿದ್ದೇವೆ. ಆರ್ಸಿಬಿಯನ್ನು ಅತ್ಯಂತ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂಬ ವಿಶ್ವಾಸವಿದೆ’ ಎಂದಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…